Homeಮುಖಪುಟಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ...

ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

- Advertisement -
- Advertisement -

ಕಳೆದ ಭಾನುವಾರ (ಡಿ.8, 2024) ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದು ದೇಶ ಬಂಡುಕೋರರ (ಹೋರಾಟಗಾರರ) ವಶವಾದ ಬಳಿಕ, ಸಿರಿಯಾ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಮಧ್ಯಂತರ ಸರ್ಕಾರ ರಚನೆ ಕಸರತ್ತು ಗರಿಗೆದರಿದೆ.

ಕೆಲ ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ ಬಳಿಕ ನೋಬೆಲ್ ಪುರಸ್ಕತ ಮುಹಮ್ಮದ್ ಯೂನುಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಅದೇ ರೀತಿಯ ಬೆಳವಣಿಗೆ ಸಿರಿಯಾದಲ್ಲಿ ನಡೆಯುವ ಸಾಧ್ಯತೆ ಇದೆ.

ಪ್ರಸ್ತುತ ಸಿರಿಯಾ ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಗುಂಪಿನ ವಶದಲ್ಲಿದೆ. ಭಯೋತ್ಪಾದಕ ಗುಂಪು ಅಲ್-ಖೈದಾ ಮತ್ತು ಮಿತ್ರ ಬಣಗಳ ಬೆಂಬಲಿತ ಈ ಗುಂಪನ್ನು ‘ಅಲ್-ನುಸ್ರಾ ಫ್ರಂಟ್’ ಎಂದೂ ಕರೆಯಲಾಗುತ್ತದೆ. ಬಂಡುಕೋರರ ಈ ಗುಂಪಿಗೆ ಸಿರಿಯಾದ ಪ್ರತಿಪಕ್ಷಗಳ ಬೆಂಬಲವೂ ಇದೆ ಎನ್ನಲಾಗಿದೆ.

ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಸೋಮವಾರ ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಬಂಡುಕೋರರ ನಿಯಂತ್ರಣದಲ್ಲಿದ್ದ ಸಣ್ಣ ಪ್ರದೇಶವೊಂದರ ಆಡಳಿತ ನಡೆಸುತ್ತಿದ್ದ ಮೊಹಮ್ಮದ್ ಅಲ್ ಬಶೀರ್ ಅವರು ಮಧ್ಯಂತರ ಸರ್ಕಾರದ ನೇತೃತ್ವ ವಹಿಸುವ ಸಾಧ್ಯತೆ ಇದೆ.

ಸಹಜ ಸ್ಥಿತಿಯತ್ತ ಸಿರಿಯಾ :

ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದ ಬಳಿಕ ದೇಶ ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಧ್ಯಂತರ ಸರ್ಕಾರ ರಚನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಹೇಳಿದ್ದಾರೆ.

ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಜಲಾಲಿ ತಿಳಿಸಿದ್ದಾರೆ.

ಸಿರಿಯಾ ಕರೆನ್ಸಿ ಮುಂದುವರಿಕೆ

ಸಿರಿಯಾದ ಬ್ಯಾಂಕ್‌ಗಳು ಮಂಗಳವಾರದಿಂದ ಪುನಃ ಕಾರ್ಯಾರಂಭ ಮಾಡಲಿವೆ. ಕಚೇರಿಗೆ ಹಿಂದಿರುಗುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಸಿರಿಯಾ ಕರೆನ್ಸಿ ಮುಂದುವರಿಯಲಿದೆ ಎಂದು ಸಿರಿಯಾ ಸೆಂಟ್ರಲ್ ಬ್ಯಾಂಕ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇರಾಕ್ ಪ್ರವೇಶಿಸಿದ 4 ಸಾವಿರ ಸೈನಿಕರು

ಬಂಡುಕೋರರು ಅಥವಾ ಹೋರಾಟಗಾರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡ ಬಳಿಕ ಸಿರಿಯಾದ 4 ಸಾವಿರಕ್ಕೂ ಅಧಿಕ ಸೈನಿಕರು ಗಡಿದಾಟಿ ಇರಾಕ್ ಪ್ರವೇಶಿಸಿದ್ದಾರೆ ಎಂದು ಇರಾಕ್ ಸೇನಾ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಶಸ್ತ್ರ ಸಜ್ಜಿತ ವಾಹನಗಳೊಂದಿಗೆ ಸಿರಿಯಾದ ಸೈನಿಕರು ಇರಾಕ್ ಪ್ರವೇಶಿಸಿದ್ದಾರೆ. ಅವರನ್ನು ಶಿಬಿರಗಳಲ್ಲಿ ಇರಿಸಲಾಗುವುದು ಎಂದು ಇರಾಕ್‌ನ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಮಾಹಿತಿ ನೀಡಿವೆ.

ಮಾಸ್ಕೋದಲ್ಲಿ ಆಶ್ರಯ ಪಡೆದ ಅಸದ್, ಕುಟುಂಬ

ದೇಶ ಬಂಡುಕೋರರ ವಶವಾದ ಬಳಿಕ ಪಲಾಯನ ಮಾಡಿರುವ ಪದಚ್ಯುತ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ (ಪತ್ನಿ, ಮೂವರು ಮಕ್ಕಳು) ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಾನವೀಯ ನೆಲೆಯಲ್ಲಿ ಅಸದ್ ಮತ್ತು ಕುಟುಂಬಕ್ಕೆ ಆಶ್ರಯ ನೀಡಿದ್ದೇವೆ ಎಂದು ರಷ್ಯಾ ಅಧ್ಯಕ್ಷರ ಕಚೇರಿಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ದಾಳಿ ಶುರು ಮಾಡಿದ ಅಮೆರಿಕ, ಇಸ್ರೇಲ್

ಸಿರಿಯಾ ಅಧ್ಯಕ್ಷ ಸ್ಥಾನದಿಂದ ಬಶರ್ ಅಲ್ ಅಸಾದ್ ಕೆಳಗಿಳಿಯುತ್ತಿದ್ದಂತೆ ಅಮೆರಿಕ ಮತ್ತು ಇಸ್ರೇಲ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಶುರುಮಾಡಿದೆ. ಸಿರಿಯಾದ ಪರಿಸ್ಥಿತಿಯ ಲಾಭ ಪಡೆದುಕೊಂಡು ಮರು ಸಂಘಟನೆಗೊಳ್ಳಲು  ಐಸಿಸ್‌ಗೆ ಅವಕಾಶ ನೀಡುವುದಿಲ್ಲ ಎಂದಿರುವ ಅಮೆರಿಕ ಸೋಮವಾರ (ಡಿ.9) ವೈಮಾನಿಕ ದಾಳಿ ನಡೆಸಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಬಿ-52, ಎಫ್‌-15 ಹಾಗೂ ಎ-10 ಬಾಂಬರ್ ವಿಮಾನಗಳನ್ನು ಬಳಸಿ ಐಸಿಸ್‌ನ 75 ನೆಲೆಗಳ ಮೇಲೆ ದಾಳಿ ನಡೆಸಿದೆ.

ಮತ್ತೊಂದೆಡೆ ಇಸ್ರೇಲ್ ಕೂಡ ರಾಜಧಾನಿ ಡಮಾಸ್ಕಸ್ ಸೇರಿದಂತೆ ಸಿರಿಯಾದಾದ್ಯಂತ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 100 ಕ್ಷಿಪಣಿಗಳನ್ನು ಇಸ್ರೇಲ್ ಹಾರಿಸಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...