Homeಸಿನಿಮಾಕ್ರೀಡೆಟಿ-20 ವರ್ಲ್ಡ್‌ ಕಪ್‌: ಭಾರತ V/s ಪಾಕಿಸ್ತಾನ ಪಂದ್ಯ, ಗೆಲುವಿಗಾಗಿ ಅಭಿಮಾನಿಗಳಿಂದ ಪೂಜೆ

ಟಿ-20 ವರ್ಲ್ಡ್‌ ಕಪ್‌: ಭಾರತ V/s ಪಾಕಿಸ್ತಾನ ಪಂದ್ಯ, ಗೆಲುವಿಗಾಗಿ ಅಭಿಮಾನಿಗಳಿಂದ ಪೂಜೆ

- Advertisement -
- Advertisement -

2021ರ ಐಸಿಸಿ ಟಿ-20 ವರ್ಲ್ಡ್‌ ಕಪ್‌ ಆರಂಭವಾಗಿದೆ. ಆರಂಭಿಕ ಆಟಗಳಲ್ಲಿ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯಾ ತಂಡಗಳು ಗೆಲುವು ಸಾಧಿಸಿವೆ. ಇಂದು (ಭಾನುವಾರ) ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆಯಲಿದೆ.

ಕಳೆದ ಟಿ-20ಯಲ್ಲಿ ಪಾಕಿಸ್ತಾನದ ವಿರುದ್ದ ಸೋಲು ಕಾಣದೇ ಗೆಲುವಿನ ಹಾದಿಯಲ್ಲಿ ಮುನ್ನುಗ್ಗಿದ ಟೀಂ ಇಂಡಿಯಾ ಈ ಬಾರಿಯೂ ಪಾಕ್‌ ತಂಡವನ್ನು ಮಣಿಸುವುದೇ ಎಂದು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿದೆ. ಟೀಂ ಇಂಡಿಯಾ ಗೆಲುವಿಗಾಗಿ ದೇಶದ ವಿವಿಧ ಭಾಗಗಳಲ್ಲಿ ಪೂಜೆ ನೆರವೇರಿಸಲಾಗುತ್ತಿದೆ.

ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದಲ್ಲಿ ಹಿಂದಿನ ಟಿ-20 ವಿಶ್ವಕಪ್‌ನಲ್ಲಿ ಭಾಗವಹಿಸಿದ್ದ ಟೀಂ ಇಂಡಿಯಾ ಪಾಕಿಸ್ತಾನದ ವಿರುದ್ದದ ಎಲ್ಲಾ ಪಂದ್ಯಗಳಲ್ಲೂ ಗೆಲುವು ಸಾಧಿಸಿತ್ತು. ಅದೇ ರೀತಿಯಲ್ಲಿ ಹಿಂದಿನ ಹಲವು ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಇದೇ ಮೊದಲ ಬಾರಿಗೆ ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ ಟಿ-20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಭಾಗವಹಿಸಿದ್ದು, ಹಿಂದಿನ ಪರಂಪರೆಯನ್ನು ಮುಂದುವರೆಸುವುದೇ ಎಂಬುದನ್ನು ಕಾದು ನೊಡಬೇಕಿದೆ.

ಇದನ್ನೂ ಓದಿ: ಶಾರುಖ್‌ BJP ಸೇರಿದರೆ ಡ್ರಗ್ಸ್‌ ಸಕ್ಕರೆ ಪುಡಿಯಾಗಿ ಮಾರ್ಪಾಡಾಗುತ್ತದೆ: ಮಹಾರಾಷ್ಟ್ರ ಸಚಿವ

ಏಕದಿನ ವಿಶ್ವಕಪ್‌ನಲ್ಲಿ 7 ಬಾರಿ ಟಿ-20 ವಿಶ್ವಕಪ್‌ನಲ್ಲಿ 5 ಪಂದ್ಯ ಸೇರಿದಂತೆ ಒಟ್ಟು 12 ಬಾರಿನ ಪಾಕಿಸ್ತಾನ ವಿರುದ್ಧ ಭಾರತವೇ ಗೆಲುವು ದಾಖಲಿಸಿದೆ. ಹೀಗಾಗಿ ಪಾಕಿಸ್ತಾನಕ್ಕೆ ಇದೊಂದು ಸವಾಲಾಗಿದ್ದು, ಬಾಬರ್ ಆಜಂ ನಾಯಕತ್ವದ ತಂಡಕ್ಕೆ ಟೀಂ ಇಂಡಿಯಾವನ್ನು ಮಣಿಸಿ, ತನ್ನ ಸೋಲಿನ ಇತಿಹಾಸವನ್ನು ತೊಡೆದು ಹಾಕಬೇಕಾದ ಅನಿವಾರ್ಯತೆಯಿದೆ.

ಪಂದ್ಯ ನೋಡಲು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತಿದ್ದರೆ, ಇತ್ತ ಭಾರತದ ಹಿಂದೂತ್ವವಾದಿ ಮುಖಂಡರು ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯವನ್ನು ವಿರೋಧಿಸುತ್ತಿದ್ದಾರೆ. ರಾಜಕೀಯವಾಗಿ ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿರುವುದು ಇದಕ್ಕೆ ಕಾರಣವಾಗಿದೆ. ಮಾತ್ರವಲ್ಲದೆ, ಇದೇ ಕಾರಣಕ್ಕಾಗಿ ಎರಡೂ ತಂಡಗಳ ನಡುವೆ ಹಲವು ವರ್ಷಗಳಿಂದ ವಿಶ್ವಕಪ್ ಹೊರತುಪಡಿಸಿ ಬೇರೆಯಾವುದೇ ಕ್ರಿಕೆಟ್‌ ಸರಣಿಗಳು ನಡೆದಿಲ್ಲ.

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ಇಂದು (ಭಾನುವಾರ) ರಾತ್ರಿ 7.30ಕ್ಕೆ ದುಬೈನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.


ಇದನ್ನೂ ಓದಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...