Homeಕರ್ನಾಟಕಟಿ.ನರಸೀಪುರ: ಗುಂಪು ಘರ್ಷಣೆಯಲ್ಲಿ ಯುವಕನ ಕೊಲೆ - ಇಬ್ಬರು ಆರೋಪಿಗಳ ಬಂಧನ

ಟಿ.ನರಸೀಪುರ: ಗುಂಪು ಘರ್ಷಣೆಯಲ್ಲಿ ಯುವಕನ ಕೊಲೆ – ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಲುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕೊನೆಗೆ ವೇಣುಗೋಪಾಲ್ ನಾಯಕ್‌ ಎಂಬ ಯುವಕನ ಕೊಲೆಗೆ ಕಾರಣವಾಗಿದೆ. ಪ್ರಮುಖ ಆರೋಪಿಗಳಾದ ಮಣಿಕಂಠ ಮತ್ತು ಸಂದೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಟಿ ನರಸೀಪುರದಲ್ಲಿ ಧರ್ಮ ಜಾಗೃತಿ ಬಳಗದ ವತಿಯಿಂದ ಶನಿವಾರ ಹನುಮ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಣಿಕಂಠ ಮತ್ತು ಸಂದೇಶ್ ಎಂಬುವವರು ಬೈಕ್‌ನಲ್ಲಿ ಬಂದಿದ್ದಕ್ಕೆ ಆಯೋಜಕರು ಮತ್ತು ವೇಣುಗೋಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿತ್ತು. ಆನಂತರ ಮಣಿಕಂಠ ಮತ್ತು ಸಂದೇಶ್ ಪುನೀತ್ ರಾಜ್‌ಕುಮಾರ್‌ ಫೋಟೊ ಇರುವ ಬ್ಯಾನರ್ ಹಾಕಲು ಮುಂದಾದಾದ ಅದನ್ನು ವೇಣುಗೋಪಾಲ್ ತಡೆದಿದ್ದು ಜಗಳ ಉಲ್ಭಣವಾಗಲು ಕಾರಣವಾಗಿತ್ತು.

ಕುಪಿತಗೊಂಡು ವೇಣುಗೋಪಾಲ್ ಮೇಲೆ ಹಗೆ ಸಾಧಿಸಿದ ಮಣಿಕಂಠ ಮತ್ತು ಸಂದೇಶ್ ಭಾನುವಾರ ಮಧ್ಯಾಹ್ನ ಶಾಮಿಯಾನ ಅಂಗಡಿಯಲ್ಲಿ ವೇಣುಗೋಪಾಲ್ ಜೊತೆ ಗಲಾಟೆ ಆರಂಭಿಸಿದ್ದರು. ಪೊಲೀಸರು ಬಂದಿದ್ದಕ್ಕೆ ಸುಮ್ಮನಾದ ಅವರು ಸಂಜೆ ವೇಳೆ ರಾಜಿ ಪಂಚಾಯ್ತಿಗೆ ಎಂದು ಮಾರುತಿ ಸರ್ವೀಸ್ ಸ್ಟೇಷನ್ ಬಳಿ ಕರೆಸಿಕೊಂಡು ಮದ್ಯದ ಬಾಟಲಿಗಳಿಂದ ಹೊಡೆದು, ಚಾಕುವಿನಿಂದ ಚುಚ್ಚಿ ಸಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವೇಣುಗೋಪಾಲ್ ನಾಯಕ್‌ ಸಹವರ್ತಿ ರಾಮಾನುಜಂ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಟಿ ನರಸೀಪುರ ಪೊಲೀಸರು ಮಣಿಕಂಠ ಮತ್ತು ಸಂದೇಶ್‌ರವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ನಾಯಕ ಜನಾಂಗದ ಮಣಿಕಂಠ, ಅನಿಲ್, ಕುರುಬ ಜನಾಂಗದ ಶಂಕರ, ಒಕ್ಕಲಿಗ ಜನಾಂಗದ ಸಂದೇಶ್ ಸೇರಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಮೃತದೇಹದ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದು ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಸಮಾಜ ಕಲ್ಯಾಣ ಇಲಾಖೆಯಿಂದ 8.25 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದ ನಂತರ ಅಂತ್ಯಕ್ರಿಯೆ ನಡೆಸಲಾಯಿತು ಎನ್ನಲಾಗಿದೆ.

ಇದನ್ನೂ ಓದಿ; ಜೈನಮುನಿ ಬರ್ಬರ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...