Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಭಾರತ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಭಾರತ ನೀಡಿದ 169 ರನ್‌ಗಳ ಗುರಿಯನ್ನು ಇಂಗ್ಲೆಂಡ್ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಸುಲಭವಾಗಿ ತಲುಪಿ ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯ ಸೂಪರ್ 12 ಹಂತದಲ್ಲಿ 5 ಪಂದ್ಯಗಳಲ್ಲಿ 4ಅನ್ನು ಗೆದ್ದಿದ್ದ ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತು ಶರಣಾಯಿತು.

ಐಸಿಸಿ ಟೆಸ್ಟ್ ಮತ್ತು ಟಿ20 ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಭಾರತ ಏಕದಿನ ಕ್ರಿಕೆಟ್‌ನಲ್ಲಿ 3 ನೇ ಸ್ಥಾನದಲ್ಲಿದೆ. 2007ರಲ್ಲಿ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ 15 ವರ್ಷ ಕಳದರೂ ಮತ್ತೆ ಆ ಸಾಧನೆ ಮಾಡಲಾಗಲಿಲ್ಲ. 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ, 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿತ್ತು. ಆದರೆ ಆನಂತರ ಐಸಿಸಿಯ ಯಾವುದೇ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ದ್ವಿಪಕ್ಷೀಯ ಈ ಟೂರ್ನಿಯಲ್ಲಿ ಭಾರತದ ನೀರಸ ಪ್ರದರ್ಶನಕ್ಕೆ 3 ಕಾರಣಗಳು ಇಲ್ಲಿವೆ.

  1. ಉತ್ತಮ ಆರಂಭಿಕ ಜೊತೆಯಾಟದ ವೈಫಲ್ಯ: ಸದ್ಯಕ್ಕೆ ಟಿ20ಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಜೋಡಿಯಿಂದ ಉತ್ತಮ ಜೊತೆಯಾಟ ಬಂದಿಲ್ಲ. ಇದು ಮೊದಲ 6 ಓವರ್‌ಗಳ ಪವರ್‌ ಪ್ಲೆ ಹಂತದಲ್ಲಿ ಬಹಳ ಮುಖ್ಯವಾಗಿದೆ. ಆದರೆ ಭಾರತ ತಂಡ ಬಹುಬೇಗನೆ ವಿಕೆಟ್ ಕಳೆದುಕೊಳ್ಳುವುದರಿಂದ ಉಳಿದ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಅತಿಯಾಗುತ್ತಿದೆ. ಅಲ್ಲದೆ ತಂಡದ ರನ್‌ರೇಟ್‌ ನಿಧಾನವಾಗಲು ಕಾರಣವಾಗುತ್ತಿದೆ. ಭಾರತವು ಮಧ್ಯದ 6ರಿಂದ 15 ಮತ್ತು ಕೊನೆಯ 15-20ನೇ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಉತ್ತಮ ಆರಂಭಕ್ಕೆ ಕೊರತೆಯಾಗಿದೆ. ಈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಕೇವಲ 116 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ ಕೇವಲ 128 ರನ್ ಗಳಿಸಿದ್ದಾರೆ.
  2. ವೇಗದ ಬೌಲರ್‌ಗಳಿಂದ ಬಾರದ ಉತ್ತಮ ಪ್ರದರ್ಶನ: ಇಡೀ ಟೂರ್ನಿಯಲ್ಲಿ ಭಾರತದ ಬೌಲರ್‌ಗಳು ಸಾಧಾರಣ ಪ್ರದರ್ಶನ ನೀಡಿದ್ದಾರೆ ಹೊರತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. 6 ಪಂದ್ಯಗಳಿಂದ ಅರ್ಶದೀಪ್ 10 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 8 ವಿಕೆಟ್ ಗಳಿಸಿದ್ದಾರೆ. ಮೊಹಮ್ಮದ್ ಶಮಿ 6 ವಿಕೆಟ್ ಗಳಿಸಿದರೆ ಭುವನೇಶ್ವರ್ ಕುಮಾರ್ ಕೇವಲ 4 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಎಲ್ಲಾ ಬೌಲರ್‌ಗಳು ನೀರಸ ಪ್ರದರ್ಶನ ನೀಡಿ ಸೋಲಿಗೆ ಕಾರಣವಾದರು. ಜಸ್ಪ್ರಿತ್ ಬೂಮ್ರ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಗುಳಿದಿದ್ದು ಭಾರತಕ್ಕೆ ದೊಡ್ಡ ಹೊಡೆತವಾಯಿತು.
  3. ಯುವ ಸ್ಪಿನ್ ಬೌಲರ್‌ಗಳಿಗೆ ಸಿಗದ ಅವಕಾಶ: ಭಾರತದ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಇಡೀ ಟೂರ್ನಿಯಲ್ಲಿ 6 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಕೇವಲ 3 ವಿಕೆಟ್ ಪಡೆದರು. ಅಕ್ಸರ್ ಪಟೇಲ್ ಬ್ಯಾಟಿಂಗ್ ಸಹ ಮಾಡಬಲ್ಲರು ಎಂದು ಆಡಿಸಿದರೂ ಸಹ ಅವರು ಗಮನ ಸೆಳೆಯಲಿಲ್ಲ. ವಿಕೆಟ್ ತೆಗೆಯುವ ಸಾಮರ್ಥ್ಯವಿರುವ ಯುಜುವೆಂದ್ರ ಚಹಲ್, ರವಿ ಬಿಷ್ಣೋಯ್‌ರಂತಹ ಯುವ ಸ್ಪಿನ್ ಪ್ರತಿಭೆಗಳಿದ್ದರೂ ಸಹ ಅವರಿಗೆ ಯಾವುದೇ ಪಂದ್ಯಗಳಲ್ಲಿ ಅವಕಾಶ ಸಿಗಲಿಲ್ಲ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿರುವ ಭಾರತ ಮುಂದಿನ ಸರಣಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಬೇಕಿದೆ. ನವೆಂಬರ್ 18 ರಿಂದ ಭಾರತ- ನ್ಯೂಜಿಲೆಂಡ್ ಎದುರು 3 ಟಿ20 ಮತ್ತು 3 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಈ ಸರಣಿಯ ಪಂದ್ಯಗಳ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಓಟಿಟಿಯಲ್ಲಿಯೂ ನೋಡಬಹುದು.

ಇದನ್ನೂ ಓದಿ: ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...