Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಭಾರತ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಭಾರತ ನೀಡಿದ 169 ರನ್‌ಗಳ ಗುರಿಯನ್ನು ಇಂಗ್ಲೆಂಡ್ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಸುಲಭವಾಗಿ ತಲುಪಿ ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯ ಸೂಪರ್ 12 ಹಂತದಲ್ಲಿ 5 ಪಂದ್ಯಗಳಲ್ಲಿ 4ಅನ್ನು ಗೆದ್ದಿದ್ದ ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತು ಶರಣಾಯಿತು.

ಐಸಿಸಿ ಟೆಸ್ಟ್ ಮತ್ತು ಟಿ20 ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಭಾರತ ಏಕದಿನ ಕ್ರಿಕೆಟ್‌ನಲ್ಲಿ 3 ನೇ ಸ್ಥಾನದಲ್ಲಿದೆ. 2007ರಲ್ಲಿ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ 15 ವರ್ಷ ಕಳದರೂ ಮತ್ತೆ ಆ ಸಾಧನೆ ಮಾಡಲಾಗಲಿಲ್ಲ. 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ, 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿತ್ತು. ಆದರೆ ಆನಂತರ ಐಸಿಸಿಯ ಯಾವುದೇ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ದ್ವಿಪಕ್ಷೀಯ ಈ ಟೂರ್ನಿಯಲ್ಲಿ ಭಾರತದ ನೀರಸ ಪ್ರದರ್ಶನಕ್ಕೆ 3 ಕಾರಣಗಳು ಇಲ್ಲಿವೆ.

  1. ಉತ್ತಮ ಆರಂಭಿಕ ಜೊತೆಯಾಟದ ವೈಫಲ್ಯ: ಸದ್ಯಕ್ಕೆ ಟಿ20ಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಜೋಡಿಯಿಂದ ಉತ್ತಮ ಜೊತೆಯಾಟ ಬಂದಿಲ್ಲ. ಇದು ಮೊದಲ 6 ಓವರ್‌ಗಳ ಪವರ್‌ ಪ್ಲೆ ಹಂತದಲ್ಲಿ ಬಹಳ ಮುಖ್ಯವಾಗಿದೆ. ಆದರೆ ಭಾರತ ತಂಡ ಬಹುಬೇಗನೆ ವಿಕೆಟ್ ಕಳೆದುಕೊಳ್ಳುವುದರಿಂದ ಉಳಿದ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಅತಿಯಾಗುತ್ತಿದೆ. ಅಲ್ಲದೆ ತಂಡದ ರನ್‌ರೇಟ್‌ ನಿಧಾನವಾಗಲು ಕಾರಣವಾಗುತ್ತಿದೆ. ಭಾರತವು ಮಧ್ಯದ 6ರಿಂದ 15 ಮತ್ತು ಕೊನೆಯ 15-20ನೇ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಉತ್ತಮ ಆರಂಭಕ್ಕೆ ಕೊರತೆಯಾಗಿದೆ. ಈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಕೇವಲ 116 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ ಕೇವಲ 128 ರನ್ ಗಳಿಸಿದ್ದಾರೆ.
  2. ವೇಗದ ಬೌಲರ್‌ಗಳಿಂದ ಬಾರದ ಉತ್ತಮ ಪ್ರದರ್ಶನ: ಇಡೀ ಟೂರ್ನಿಯಲ್ಲಿ ಭಾರತದ ಬೌಲರ್‌ಗಳು ಸಾಧಾರಣ ಪ್ರದರ್ಶನ ನೀಡಿದ್ದಾರೆ ಹೊರತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. 6 ಪಂದ್ಯಗಳಿಂದ ಅರ್ಶದೀಪ್ 10 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 8 ವಿಕೆಟ್ ಗಳಿಸಿದ್ದಾರೆ. ಮೊಹಮ್ಮದ್ ಶಮಿ 6 ವಿಕೆಟ್ ಗಳಿಸಿದರೆ ಭುವನೇಶ್ವರ್ ಕುಮಾರ್ ಕೇವಲ 4 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಎಲ್ಲಾ ಬೌಲರ್‌ಗಳು ನೀರಸ ಪ್ರದರ್ಶನ ನೀಡಿ ಸೋಲಿಗೆ ಕಾರಣವಾದರು. ಜಸ್ಪ್ರಿತ್ ಬೂಮ್ರ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಗುಳಿದಿದ್ದು ಭಾರತಕ್ಕೆ ದೊಡ್ಡ ಹೊಡೆತವಾಯಿತು.
  3. ಯುವ ಸ್ಪಿನ್ ಬೌಲರ್‌ಗಳಿಗೆ ಸಿಗದ ಅವಕಾಶ: ಭಾರತದ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಇಡೀ ಟೂರ್ನಿಯಲ್ಲಿ 6 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಕೇವಲ 3 ವಿಕೆಟ್ ಪಡೆದರು. ಅಕ್ಸರ್ ಪಟೇಲ್ ಬ್ಯಾಟಿಂಗ್ ಸಹ ಮಾಡಬಲ್ಲರು ಎಂದು ಆಡಿಸಿದರೂ ಸಹ ಅವರು ಗಮನ ಸೆಳೆಯಲಿಲ್ಲ. ವಿಕೆಟ್ ತೆಗೆಯುವ ಸಾಮರ್ಥ್ಯವಿರುವ ಯುಜುವೆಂದ್ರ ಚಹಲ್, ರವಿ ಬಿಷ್ಣೋಯ್‌ರಂತಹ ಯುವ ಸ್ಪಿನ್ ಪ್ರತಿಭೆಗಳಿದ್ದರೂ ಸಹ ಅವರಿಗೆ ಯಾವುದೇ ಪಂದ್ಯಗಳಲ್ಲಿ ಅವಕಾಶ ಸಿಗಲಿಲ್ಲ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿರುವ ಭಾರತ ಮುಂದಿನ ಸರಣಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಬೇಕಿದೆ. ನವೆಂಬರ್ 18 ರಿಂದ ಭಾರತ- ನ್ಯೂಜಿಲೆಂಡ್ ಎದುರು 3 ಟಿ20 ಮತ್ತು 3 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಈ ಸರಣಿಯ ಪಂದ್ಯಗಳ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಓಟಿಟಿಯಲ್ಲಿಯೂ ನೋಡಬಹುದು.

ಇದನ್ನೂ ಓದಿ: ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...