Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಭಾರತ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಭಾರತ ನೀಡಿದ 169 ರನ್‌ಗಳ ಗುರಿಯನ್ನು ಇಂಗ್ಲೆಂಡ್ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಸುಲಭವಾಗಿ ತಲುಪಿ ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯ ಸೂಪರ್ 12 ಹಂತದಲ್ಲಿ 5 ಪಂದ್ಯಗಳಲ್ಲಿ 4ಅನ್ನು ಗೆದ್ದಿದ್ದ ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತು ಶರಣಾಯಿತು.

ಐಸಿಸಿ ಟೆಸ್ಟ್ ಮತ್ತು ಟಿ20 ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಭಾರತ ಏಕದಿನ ಕ್ರಿಕೆಟ್‌ನಲ್ಲಿ 3 ನೇ ಸ್ಥಾನದಲ್ಲಿದೆ. 2007ರಲ್ಲಿ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ 15 ವರ್ಷ ಕಳದರೂ ಮತ್ತೆ ಆ ಸಾಧನೆ ಮಾಡಲಾಗಲಿಲ್ಲ. 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ, 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿತ್ತು. ಆದರೆ ಆನಂತರ ಐಸಿಸಿಯ ಯಾವುದೇ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ದ್ವಿಪಕ್ಷೀಯ ಈ ಟೂರ್ನಿಯಲ್ಲಿ ಭಾರತದ ನೀರಸ ಪ್ರದರ್ಶನಕ್ಕೆ 3 ಕಾರಣಗಳು ಇಲ್ಲಿವೆ.

  1. ಉತ್ತಮ ಆರಂಭಿಕ ಜೊತೆಯಾಟದ ವೈಫಲ್ಯ: ಸದ್ಯಕ್ಕೆ ಟಿ20ಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಜೋಡಿಯಿಂದ ಉತ್ತಮ ಜೊತೆಯಾಟ ಬಂದಿಲ್ಲ. ಇದು ಮೊದಲ 6 ಓವರ್‌ಗಳ ಪವರ್‌ ಪ್ಲೆ ಹಂತದಲ್ಲಿ ಬಹಳ ಮುಖ್ಯವಾಗಿದೆ. ಆದರೆ ಭಾರತ ತಂಡ ಬಹುಬೇಗನೆ ವಿಕೆಟ್ ಕಳೆದುಕೊಳ್ಳುವುದರಿಂದ ಉಳಿದ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಅತಿಯಾಗುತ್ತಿದೆ. ಅಲ್ಲದೆ ತಂಡದ ರನ್‌ರೇಟ್‌ ನಿಧಾನವಾಗಲು ಕಾರಣವಾಗುತ್ತಿದೆ. ಭಾರತವು ಮಧ್ಯದ 6ರಿಂದ 15 ಮತ್ತು ಕೊನೆಯ 15-20ನೇ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಉತ್ತಮ ಆರಂಭಕ್ಕೆ ಕೊರತೆಯಾಗಿದೆ. ಈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಕೇವಲ 116 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ ಕೇವಲ 128 ರನ್ ಗಳಿಸಿದ್ದಾರೆ.
  2. ವೇಗದ ಬೌಲರ್‌ಗಳಿಂದ ಬಾರದ ಉತ್ತಮ ಪ್ರದರ್ಶನ: ಇಡೀ ಟೂರ್ನಿಯಲ್ಲಿ ಭಾರತದ ಬೌಲರ್‌ಗಳು ಸಾಧಾರಣ ಪ್ರದರ್ಶನ ನೀಡಿದ್ದಾರೆ ಹೊರತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. 6 ಪಂದ್ಯಗಳಿಂದ ಅರ್ಶದೀಪ್ 10 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 8 ವಿಕೆಟ್ ಗಳಿಸಿದ್ದಾರೆ. ಮೊಹಮ್ಮದ್ ಶಮಿ 6 ವಿಕೆಟ್ ಗಳಿಸಿದರೆ ಭುವನೇಶ್ವರ್ ಕುಮಾರ್ ಕೇವಲ 4 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಎಲ್ಲಾ ಬೌಲರ್‌ಗಳು ನೀರಸ ಪ್ರದರ್ಶನ ನೀಡಿ ಸೋಲಿಗೆ ಕಾರಣವಾದರು. ಜಸ್ಪ್ರಿತ್ ಬೂಮ್ರ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಗುಳಿದಿದ್ದು ಭಾರತಕ್ಕೆ ದೊಡ್ಡ ಹೊಡೆತವಾಯಿತು.
  3. ಯುವ ಸ್ಪಿನ್ ಬೌಲರ್‌ಗಳಿಗೆ ಸಿಗದ ಅವಕಾಶ: ಭಾರತದ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಇಡೀ ಟೂರ್ನಿಯಲ್ಲಿ 6 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಕೇವಲ 3 ವಿಕೆಟ್ ಪಡೆದರು. ಅಕ್ಸರ್ ಪಟೇಲ್ ಬ್ಯಾಟಿಂಗ್ ಸಹ ಮಾಡಬಲ್ಲರು ಎಂದು ಆಡಿಸಿದರೂ ಸಹ ಅವರು ಗಮನ ಸೆಳೆಯಲಿಲ್ಲ. ವಿಕೆಟ್ ತೆಗೆಯುವ ಸಾಮರ್ಥ್ಯವಿರುವ ಯುಜುವೆಂದ್ರ ಚಹಲ್, ರವಿ ಬಿಷ್ಣೋಯ್‌ರಂತಹ ಯುವ ಸ್ಪಿನ್ ಪ್ರತಿಭೆಗಳಿದ್ದರೂ ಸಹ ಅವರಿಗೆ ಯಾವುದೇ ಪಂದ್ಯಗಳಲ್ಲಿ ಅವಕಾಶ ಸಿಗಲಿಲ್ಲ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿರುವ ಭಾರತ ಮುಂದಿನ ಸರಣಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಬೇಕಿದೆ. ನವೆಂಬರ್ 18 ರಿಂದ ಭಾರತ- ನ್ಯೂಜಿಲೆಂಡ್ ಎದುರು 3 ಟಿ20 ಮತ್ತು 3 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಈ ಸರಣಿಯ ಪಂದ್ಯಗಳ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಓಟಿಟಿಯಲ್ಲಿಯೂ ನೋಡಬಹುದು.

ಇದನ್ನೂ ಓದಿ: ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...