Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಭಾರತ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಭಾರತ ನೀಡಿದ 169 ರನ್‌ಗಳ ಗುರಿಯನ್ನು ಇಂಗ್ಲೆಂಡ್ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಸುಲಭವಾಗಿ ತಲುಪಿ ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯ ಸೂಪರ್ 12 ಹಂತದಲ್ಲಿ 5 ಪಂದ್ಯಗಳಲ್ಲಿ 4ಅನ್ನು ಗೆದ್ದಿದ್ದ ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತು ಶರಣಾಯಿತು.

ಐಸಿಸಿ ಟೆಸ್ಟ್ ಮತ್ತು ಟಿ20 ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಭಾರತ ಏಕದಿನ ಕ್ರಿಕೆಟ್‌ನಲ್ಲಿ 3 ನೇ ಸ್ಥಾನದಲ್ಲಿದೆ. 2007ರಲ್ಲಿ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ 15 ವರ್ಷ ಕಳದರೂ ಮತ್ತೆ ಆ ಸಾಧನೆ ಮಾಡಲಾಗಲಿಲ್ಲ. 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ, 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿತ್ತು. ಆದರೆ ಆನಂತರ ಐಸಿಸಿಯ ಯಾವುದೇ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ದ್ವಿಪಕ್ಷೀಯ ಈ ಟೂರ್ನಿಯಲ್ಲಿ ಭಾರತದ ನೀರಸ ಪ್ರದರ್ಶನಕ್ಕೆ 3 ಕಾರಣಗಳು ಇಲ್ಲಿವೆ.

  1. ಉತ್ತಮ ಆರಂಭಿಕ ಜೊತೆಯಾಟದ ವೈಫಲ್ಯ: ಸದ್ಯಕ್ಕೆ ಟಿ20ಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಜೋಡಿಯಿಂದ ಉತ್ತಮ ಜೊತೆಯಾಟ ಬಂದಿಲ್ಲ. ಇದು ಮೊದಲ 6 ಓವರ್‌ಗಳ ಪವರ್‌ ಪ್ಲೆ ಹಂತದಲ್ಲಿ ಬಹಳ ಮುಖ್ಯವಾಗಿದೆ. ಆದರೆ ಭಾರತ ತಂಡ ಬಹುಬೇಗನೆ ವಿಕೆಟ್ ಕಳೆದುಕೊಳ್ಳುವುದರಿಂದ ಉಳಿದ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಅತಿಯಾಗುತ್ತಿದೆ. ಅಲ್ಲದೆ ತಂಡದ ರನ್‌ರೇಟ್‌ ನಿಧಾನವಾಗಲು ಕಾರಣವಾಗುತ್ತಿದೆ. ಭಾರತವು ಮಧ್ಯದ 6ರಿಂದ 15 ಮತ್ತು ಕೊನೆಯ 15-20ನೇ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಉತ್ತಮ ಆರಂಭಕ್ಕೆ ಕೊರತೆಯಾಗಿದೆ. ಈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಕೇವಲ 116 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ ಕೇವಲ 128 ರನ್ ಗಳಿಸಿದ್ದಾರೆ.
  2. ವೇಗದ ಬೌಲರ್‌ಗಳಿಂದ ಬಾರದ ಉತ್ತಮ ಪ್ರದರ್ಶನ: ಇಡೀ ಟೂರ್ನಿಯಲ್ಲಿ ಭಾರತದ ಬೌಲರ್‌ಗಳು ಸಾಧಾರಣ ಪ್ರದರ್ಶನ ನೀಡಿದ್ದಾರೆ ಹೊರತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. 6 ಪಂದ್ಯಗಳಿಂದ ಅರ್ಶದೀಪ್ 10 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 8 ವಿಕೆಟ್ ಗಳಿಸಿದ್ದಾರೆ. ಮೊಹಮ್ಮದ್ ಶಮಿ 6 ವಿಕೆಟ್ ಗಳಿಸಿದರೆ ಭುವನೇಶ್ವರ್ ಕುಮಾರ್ ಕೇವಲ 4 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಎಲ್ಲಾ ಬೌಲರ್‌ಗಳು ನೀರಸ ಪ್ರದರ್ಶನ ನೀಡಿ ಸೋಲಿಗೆ ಕಾರಣವಾದರು. ಜಸ್ಪ್ರಿತ್ ಬೂಮ್ರ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಗುಳಿದಿದ್ದು ಭಾರತಕ್ಕೆ ದೊಡ್ಡ ಹೊಡೆತವಾಯಿತು.
  3. ಯುವ ಸ್ಪಿನ್ ಬೌಲರ್‌ಗಳಿಗೆ ಸಿಗದ ಅವಕಾಶ: ಭಾರತದ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಇಡೀ ಟೂರ್ನಿಯಲ್ಲಿ 6 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಕೇವಲ 3 ವಿಕೆಟ್ ಪಡೆದರು. ಅಕ್ಸರ್ ಪಟೇಲ್ ಬ್ಯಾಟಿಂಗ್ ಸಹ ಮಾಡಬಲ್ಲರು ಎಂದು ಆಡಿಸಿದರೂ ಸಹ ಅವರು ಗಮನ ಸೆಳೆಯಲಿಲ್ಲ. ವಿಕೆಟ್ ತೆಗೆಯುವ ಸಾಮರ್ಥ್ಯವಿರುವ ಯುಜುವೆಂದ್ರ ಚಹಲ್, ರವಿ ಬಿಷ್ಣೋಯ್‌ರಂತಹ ಯುವ ಸ್ಪಿನ್ ಪ್ರತಿಭೆಗಳಿದ್ದರೂ ಸಹ ಅವರಿಗೆ ಯಾವುದೇ ಪಂದ್ಯಗಳಲ್ಲಿ ಅವಕಾಶ ಸಿಗಲಿಲ್ಲ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿರುವ ಭಾರತ ಮುಂದಿನ ಸರಣಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಬೇಕಿದೆ. ನವೆಂಬರ್ 18 ರಿಂದ ಭಾರತ- ನ್ಯೂಜಿಲೆಂಡ್ ಎದುರು 3 ಟಿ20 ಮತ್ತು 3 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಈ ಸರಣಿಯ ಪಂದ್ಯಗಳ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಓಟಿಟಿಯಲ್ಲಿಯೂ ನೋಡಬಹುದು.

ಇದನ್ನೂ ಓದಿ: ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...