Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಭಾರತ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಭಾರತ ನೀಡಿದ 169 ರನ್‌ಗಳ ಗುರಿಯನ್ನು ಇಂಗ್ಲೆಂಡ್ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಸುಲಭವಾಗಿ ತಲುಪಿ ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯ ಸೂಪರ್ 12 ಹಂತದಲ್ಲಿ 5 ಪಂದ್ಯಗಳಲ್ಲಿ 4ಅನ್ನು ಗೆದ್ದಿದ್ದ ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತು ಶರಣಾಯಿತು.

ಐಸಿಸಿ ಟೆಸ್ಟ್ ಮತ್ತು ಟಿ20 ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಭಾರತ ಏಕದಿನ ಕ್ರಿಕೆಟ್‌ನಲ್ಲಿ 3 ನೇ ಸ್ಥಾನದಲ್ಲಿದೆ. 2007ರಲ್ಲಿ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ 15 ವರ್ಷ ಕಳದರೂ ಮತ್ತೆ ಆ ಸಾಧನೆ ಮಾಡಲಾಗಲಿಲ್ಲ. 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ, 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿತ್ತು. ಆದರೆ ಆನಂತರ ಐಸಿಸಿಯ ಯಾವುದೇ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ದ್ವಿಪಕ್ಷೀಯ ಈ ಟೂರ್ನಿಯಲ್ಲಿ ಭಾರತದ ನೀರಸ ಪ್ರದರ್ಶನಕ್ಕೆ 3 ಕಾರಣಗಳು ಇಲ್ಲಿವೆ.

  1. ಉತ್ತಮ ಆರಂಭಿಕ ಜೊತೆಯಾಟದ ವೈಫಲ್ಯ: ಸದ್ಯಕ್ಕೆ ಟಿ20ಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಜೋಡಿಯಿಂದ ಉತ್ತಮ ಜೊತೆಯಾಟ ಬಂದಿಲ್ಲ. ಇದು ಮೊದಲ 6 ಓವರ್‌ಗಳ ಪವರ್‌ ಪ್ಲೆ ಹಂತದಲ್ಲಿ ಬಹಳ ಮುಖ್ಯವಾಗಿದೆ. ಆದರೆ ಭಾರತ ತಂಡ ಬಹುಬೇಗನೆ ವಿಕೆಟ್ ಕಳೆದುಕೊಳ್ಳುವುದರಿಂದ ಉಳಿದ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಅತಿಯಾಗುತ್ತಿದೆ. ಅಲ್ಲದೆ ತಂಡದ ರನ್‌ರೇಟ್‌ ನಿಧಾನವಾಗಲು ಕಾರಣವಾಗುತ್ತಿದೆ. ಭಾರತವು ಮಧ್ಯದ 6ರಿಂದ 15 ಮತ್ತು ಕೊನೆಯ 15-20ನೇ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಉತ್ತಮ ಆರಂಭಕ್ಕೆ ಕೊರತೆಯಾಗಿದೆ. ಈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಕೇವಲ 116 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ ಕೇವಲ 128 ರನ್ ಗಳಿಸಿದ್ದಾರೆ.
  2. ವೇಗದ ಬೌಲರ್‌ಗಳಿಂದ ಬಾರದ ಉತ್ತಮ ಪ್ರದರ್ಶನ: ಇಡೀ ಟೂರ್ನಿಯಲ್ಲಿ ಭಾರತದ ಬೌಲರ್‌ಗಳು ಸಾಧಾರಣ ಪ್ರದರ್ಶನ ನೀಡಿದ್ದಾರೆ ಹೊರತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. 6 ಪಂದ್ಯಗಳಿಂದ ಅರ್ಶದೀಪ್ 10 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 8 ವಿಕೆಟ್ ಗಳಿಸಿದ್ದಾರೆ. ಮೊಹಮ್ಮದ್ ಶಮಿ 6 ವಿಕೆಟ್ ಗಳಿಸಿದರೆ ಭುವನೇಶ್ವರ್ ಕುಮಾರ್ ಕೇವಲ 4 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಎಲ್ಲಾ ಬೌಲರ್‌ಗಳು ನೀರಸ ಪ್ರದರ್ಶನ ನೀಡಿ ಸೋಲಿಗೆ ಕಾರಣವಾದರು. ಜಸ್ಪ್ರಿತ್ ಬೂಮ್ರ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಗುಳಿದಿದ್ದು ಭಾರತಕ್ಕೆ ದೊಡ್ಡ ಹೊಡೆತವಾಯಿತು.
  3. ಯುವ ಸ್ಪಿನ್ ಬೌಲರ್‌ಗಳಿಗೆ ಸಿಗದ ಅವಕಾಶ: ಭಾರತದ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಇಡೀ ಟೂರ್ನಿಯಲ್ಲಿ 6 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಕೇವಲ 3 ವಿಕೆಟ್ ಪಡೆದರು. ಅಕ್ಸರ್ ಪಟೇಲ್ ಬ್ಯಾಟಿಂಗ್ ಸಹ ಮಾಡಬಲ್ಲರು ಎಂದು ಆಡಿಸಿದರೂ ಸಹ ಅವರು ಗಮನ ಸೆಳೆಯಲಿಲ್ಲ. ವಿಕೆಟ್ ತೆಗೆಯುವ ಸಾಮರ್ಥ್ಯವಿರುವ ಯುಜುವೆಂದ್ರ ಚಹಲ್, ರವಿ ಬಿಷ್ಣೋಯ್‌ರಂತಹ ಯುವ ಸ್ಪಿನ್ ಪ್ರತಿಭೆಗಳಿದ್ದರೂ ಸಹ ಅವರಿಗೆ ಯಾವುದೇ ಪಂದ್ಯಗಳಲ್ಲಿ ಅವಕಾಶ ಸಿಗಲಿಲ್ಲ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿರುವ ಭಾರತ ಮುಂದಿನ ಸರಣಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಬೇಕಿದೆ. ನವೆಂಬರ್ 18 ರಿಂದ ಭಾರತ- ನ್ಯೂಜಿಲೆಂಡ್ ಎದುರು 3 ಟಿ20 ಮತ್ತು 3 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಈ ಸರಣಿಯ ಪಂದ್ಯಗಳ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಓಟಿಟಿಯಲ್ಲಿಯೂ ನೋಡಬಹುದು.

ಇದನ್ನೂ ಓದಿ: ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...