Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಭಾರತ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಭಾರತ ನೀಡಿದ 169 ರನ್‌ಗಳ ಗುರಿಯನ್ನು ಇಂಗ್ಲೆಂಡ್ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಸುಲಭವಾಗಿ ತಲುಪಿ ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯ ಸೂಪರ್ 12 ಹಂತದಲ್ಲಿ 5 ಪಂದ್ಯಗಳಲ್ಲಿ 4ಅನ್ನು ಗೆದ್ದಿದ್ದ ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತು ಶರಣಾಯಿತು.

ಐಸಿಸಿ ಟೆಸ್ಟ್ ಮತ್ತು ಟಿ20 ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಭಾರತ ಏಕದಿನ ಕ್ರಿಕೆಟ್‌ನಲ್ಲಿ 3 ನೇ ಸ್ಥಾನದಲ್ಲಿದೆ. 2007ರಲ್ಲಿ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ 15 ವರ್ಷ ಕಳದರೂ ಮತ್ತೆ ಆ ಸಾಧನೆ ಮಾಡಲಾಗಲಿಲ್ಲ. 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ, 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿತ್ತು. ಆದರೆ ಆನಂತರ ಐಸಿಸಿಯ ಯಾವುದೇ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ದ್ವಿಪಕ್ಷೀಯ ಈ ಟೂರ್ನಿಯಲ್ಲಿ ಭಾರತದ ನೀರಸ ಪ್ರದರ್ಶನಕ್ಕೆ 3 ಕಾರಣಗಳು ಇಲ್ಲಿವೆ.

  1. ಉತ್ತಮ ಆರಂಭಿಕ ಜೊತೆಯಾಟದ ವೈಫಲ್ಯ: ಸದ್ಯಕ್ಕೆ ಟಿ20ಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಜೋಡಿಯಿಂದ ಉತ್ತಮ ಜೊತೆಯಾಟ ಬಂದಿಲ್ಲ. ಇದು ಮೊದಲ 6 ಓವರ್‌ಗಳ ಪವರ್‌ ಪ್ಲೆ ಹಂತದಲ್ಲಿ ಬಹಳ ಮುಖ್ಯವಾಗಿದೆ. ಆದರೆ ಭಾರತ ತಂಡ ಬಹುಬೇಗನೆ ವಿಕೆಟ್ ಕಳೆದುಕೊಳ್ಳುವುದರಿಂದ ಉಳಿದ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಅತಿಯಾಗುತ್ತಿದೆ. ಅಲ್ಲದೆ ತಂಡದ ರನ್‌ರೇಟ್‌ ನಿಧಾನವಾಗಲು ಕಾರಣವಾಗುತ್ತಿದೆ. ಭಾರತವು ಮಧ್ಯದ 6ರಿಂದ 15 ಮತ್ತು ಕೊನೆಯ 15-20ನೇ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಉತ್ತಮ ಆರಂಭಕ್ಕೆ ಕೊರತೆಯಾಗಿದೆ. ಈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಕೇವಲ 116 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ ಕೇವಲ 128 ರನ್ ಗಳಿಸಿದ್ದಾರೆ.
  2. ವೇಗದ ಬೌಲರ್‌ಗಳಿಂದ ಬಾರದ ಉತ್ತಮ ಪ್ರದರ್ಶನ: ಇಡೀ ಟೂರ್ನಿಯಲ್ಲಿ ಭಾರತದ ಬೌಲರ್‌ಗಳು ಸಾಧಾರಣ ಪ್ರದರ್ಶನ ನೀಡಿದ್ದಾರೆ ಹೊರತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. 6 ಪಂದ್ಯಗಳಿಂದ ಅರ್ಶದೀಪ್ 10 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 8 ವಿಕೆಟ್ ಗಳಿಸಿದ್ದಾರೆ. ಮೊಹಮ್ಮದ್ ಶಮಿ 6 ವಿಕೆಟ್ ಗಳಿಸಿದರೆ ಭುವನೇಶ್ವರ್ ಕುಮಾರ್ ಕೇವಲ 4 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಎಲ್ಲಾ ಬೌಲರ್‌ಗಳು ನೀರಸ ಪ್ರದರ್ಶನ ನೀಡಿ ಸೋಲಿಗೆ ಕಾರಣವಾದರು. ಜಸ್ಪ್ರಿತ್ ಬೂಮ್ರ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಗುಳಿದಿದ್ದು ಭಾರತಕ್ಕೆ ದೊಡ್ಡ ಹೊಡೆತವಾಯಿತು.
  3. ಯುವ ಸ್ಪಿನ್ ಬೌಲರ್‌ಗಳಿಗೆ ಸಿಗದ ಅವಕಾಶ: ಭಾರತದ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಇಡೀ ಟೂರ್ನಿಯಲ್ಲಿ 6 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಕೇವಲ 3 ವಿಕೆಟ್ ಪಡೆದರು. ಅಕ್ಸರ್ ಪಟೇಲ್ ಬ್ಯಾಟಿಂಗ್ ಸಹ ಮಾಡಬಲ್ಲರು ಎಂದು ಆಡಿಸಿದರೂ ಸಹ ಅವರು ಗಮನ ಸೆಳೆಯಲಿಲ್ಲ. ವಿಕೆಟ್ ತೆಗೆಯುವ ಸಾಮರ್ಥ್ಯವಿರುವ ಯುಜುವೆಂದ್ರ ಚಹಲ್, ರವಿ ಬಿಷ್ಣೋಯ್‌ರಂತಹ ಯುವ ಸ್ಪಿನ್ ಪ್ರತಿಭೆಗಳಿದ್ದರೂ ಸಹ ಅವರಿಗೆ ಯಾವುದೇ ಪಂದ್ಯಗಳಲ್ಲಿ ಅವಕಾಶ ಸಿಗಲಿಲ್ಲ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿರುವ ಭಾರತ ಮುಂದಿನ ಸರಣಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಬೇಕಿದೆ. ನವೆಂಬರ್ 18 ರಿಂದ ಭಾರತ- ನ್ಯೂಜಿಲೆಂಡ್ ಎದುರು 3 ಟಿ20 ಮತ್ತು 3 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಈ ಸರಣಿಯ ಪಂದ್ಯಗಳ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಓಟಿಟಿಯಲ್ಲಿಯೂ ನೋಡಬಹುದು.

ಇದನ್ನೂ ಓದಿ: ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...