Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಭಾರತ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಭಾರತ ನೀಡಿದ 169 ರನ್‌ಗಳ ಗುರಿಯನ್ನು ಇಂಗ್ಲೆಂಡ್ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಸುಲಭವಾಗಿ ತಲುಪಿ ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯ ಸೂಪರ್ 12 ಹಂತದಲ್ಲಿ 5 ಪಂದ್ಯಗಳಲ್ಲಿ 4ಅನ್ನು ಗೆದ್ದಿದ್ದ ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತು ಶರಣಾಯಿತು.

ಐಸಿಸಿ ಟೆಸ್ಟ್ ಮತ್ತು ಟಿ20 ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಭಾರತ ಏಕದಿನ ಕ್ರಿಕೆಟ್‌ನಲ್ಲಿ 3 ನೇ ಸ್ಥಾನದಲ್ಲಿದೆ. 2007ರಲ್ಲಿ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ 15 ವರ್ಷ ಕಳದರೂ ಮತ್ತೆ ಆ ಸಾಧನೆ ಮಾಡಲಾಗಲಿಲ್ಲ. 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ, 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿತ್ತು. ಆದರೆ ಆನಂತರ ಐಸಿಸಿಯ ಯಾವುದೇ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ದ್ವಿಪಕ್ಷೀಯ ಈ ಟೂರ್ನಿಯಲ್ಲಿ ಭಾರತದ ನೀರಸ ಪ್ರದರ್ಶನಕ್ಕೆ 3 ಕಾರಣಗಳು ಇಲ್ಲಿವೆ.

  1. ಉತ್ತಮ ಆರಂಭಿಕ ಜೊತೆಯಾಟದ ವೈಫಲ್ಯ: ಸದ್ಯಕ್ಕೆ ಟಿ20ಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಜೋಡಿಯಿಂದ ಉತ್ತಮ ಜೊತೆಯಾಟ ಬಂದಿಲ್ಲ. ಇದು ಮೊದಲ 6 ಓವರ್‌ಗಳ ಪವರ್‌ ಪ್ಲೆ ಹಂತದಲ್ಲಿ ಬಹಳ ಮುಖ್ಯವಾಗಿದೆ. ಆದರೆ ಭಾರತ ತಂಡ ಬಹುಬೇಗನೆ ವಿಕೆಟ್ ಕಳೆದುಕೊಳ್ಳುವುದರಿಂದ ಉಳಿದ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಅತಿಯಾಗುತ್ತಿದೆ. ಅಲ್ಲದೆ ತಂಡದ ರನ್‌ರೇಟ್‌ ನಿಧಾನವಾಗಲು ಕಾರಣವಾಗುತ್ತಿದೆ. ಭಾರತವು ಮಧ್ಯದ 6ರಿಂದ 15 ಮತ್ತು ಕೊನೆಯ 15-20ನೇ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಉತ್ತಮ ಆರಂಭಕ್ಕೆ ಕೊರತೆಯಾಗಿದೆ. ಈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಕೇವಲ 116 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ ಕೇವಲ 128 ರನ್ ಗಳಿಸಿದ್ದಾರೆ.
  2. ವೇಗದ ಬೌಲರ್‌ಗಳಿಂದ ಬಾರದ ಉತ್ತಮ ಪ್ರದರ್ಶನ: ಇಡೀ ಟೂರ್ನಿಯಲ್ಲಿ ಭಾರತದ ಬೌಲರ್‌ಗಳು ಸಾಧಾರಣ ಪ್ರದರ್ಶನ ನೀಡಿದ್ದಾರೆ ಹೊರತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. 6 ಪಂದ್ಯಗಳಿಂದ ಅರ್ಶದೀಪ್ 10 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 8 ವಿಕೆಟ್ ಗಳಿಸಿದ್ದಾರೆ. ಮೊಹಮ್ಮದ್ ಶಮಿ 6 ವಿಕೆಟ್ ಗಳಿಸಿದರೆ ಭುವನೇಶ್ವರ್ ಕುಮಾರ್ ಕೇವಲ 4 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಎಲ್ಲಾ ಬೌಲರ್‌ಗಳು ನೀರಸ ಪ್ರದರ್ಶನ ನೀಡಿ ಸೋಲಿಗೆ ಕಾರಣವಾದರು. ಜಸ್ಪ್ರಿತ್ ಬೂಮ್ರ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಗುಳಿದಿದ್ದು ಭಾರತಕ್ಕೆ ದೊಡ್ಡ ಹೊಡೆತವಾಯಿತು.
  3. ಯುವ ಸ್ಪಿನ್ ಬೌಲರ್‌ಗಳಿಗೆ ಸಿಗದ ಅವಕಾಶ: ಭಾರತದ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಇಡೀ ಟೂರ್ನಿಯಲ್ಲಿ 6 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಕೇವಲ 3 ವಿಕೆಟ್ ಪಡೆದರು. ಅಕ್ಸರ್ ಪಟೇಲ್ ಬ್ಯಾಟಿಂಗ್ ಸಹ ಮಾಡಬಲ್ಲರು ಎಂದು ಆಡಿಸಿದರೂ ಸಹ ಅವರು ಗಮನ ಸೆಳೆಯಲಿಲ್ಲ. ವಿಕೆಟ್ ತೆಗೆಯುವ ಸಾಮರ್ಥ್ಯವಿರುವ ಯುಜುವೆಂದ್ರ ಚಹಲ್, ರವಿ ಬಿಷ್ಣೋಯ್‌ರಂತಹ ಯುವ ಸ್ಪಿನ್ ಪ್ರತಿಭೆಗಳಿದ್ದರೂ ಸಹ ಅವರಿಗೆ ಯಾವುದೇ ಪಂದ್ಯಗಳಲ್ಲಿ ಅವಕಾಶ ಸಿಗಲಿಲ್ಲ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿರುವ ಭಾರತ ಮುಂದಿನ ಸರಣಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಬೇಕಿದೆ. ನವೆಂಬರ್ 18 ರಿಂದ ಭಾರತ- ನ್ಯೂಜಿಲೆಂಡ್ ಎದುರು 3 ಟಿ20 ಮತ್ತು 3 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಈ ಸರಣಿಯ ಪಂದ್ಯಗಳ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಓಟಿಟಿಯಲ್ಲಿಯೂ ನೋಡಬಹುದು.

ಇದನ್ನೂ ಓದಿ: ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...