Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಭಾರತ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಭಾರತ ನೀಡಿದ 169 ರನ್‌ಗಳ ಗುರಿಯನ್ನು ಇಂಗ್ಲೆಂಡ್ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಸುಲಭವಾಗಿ ತಲುಪಿ ಭರ್ಜರಿ ಗೆಲುವಿನೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೂರ್ನಿಯ ಸೂಪರ್ 12 ಹಂತದಲ್ಲಿ 5 ಪಂದ್ಯಗಳಲ್ಲಿ 4ಅನ್ನು ಗೆದ್ದಿದ್ದ ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತು ಶರಣಾಯಿತು.

ಐಸಿಸಿ ಟೆಸ್ಟ್ ಮತ್ತು ಟಿ20 ಫಾರ್ಮೆಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಭಾರತ ಏಕದಿನ ಕ್ರಿಕೆಟ್‌ನಲ್ಲಿ 3 ನೇ ಸ್ಥಾನದಲ್ಲಿದೆ. 2007ರಲ್ಲಿ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ 15 ವರ್ಷ ಕಳದರೂ ಮತ್ತೆ ಆ ಸಾಧನೆ ಮಾಡಲಾಗಲಿಲ್ಲ. 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ, 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿತ್ತು. ಆದರೆ ಆನಂತರ ಐಸಿಸಿಯ ಯಾವುದೇ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ದ್ವಿಪಕ್ಷೀಯ ಈ ಟೂರ್ನಿಯಲ್ಲಿ ಭಾರತದ ನೀರಸ ಪ್ರದರ್ಶನಕ್ಕೆ 3 ಕಾರಣಗಳು ಇಲ್ಲಿವೆ.

  1. ಉತ್ತಮ ಆರಂಭಿಕ ಜೊತೆಯಾಟದ ವೈಫಲ್ಯ: ಸದ್ಯಕ್ಕೆ ಟಿ20ಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಜೋಡಿಯಿಂದ ಉತ್ತಮ ಜೊತೆಯಾಟ ಬಂದಿಲ್ಲ. ಇದು ಮೊದಲ 6 ಓವರ್‌ಗಳ ಪವರ್‌ ಪ್ಲೆ ಹಂತದಲ್ಲಿ ಬಹಳ ಮುಖ್ಯವಾಗಿದೆ. ಆದರೆ ಭಾರತ ತಂಡ ಬಹುಬೇಗನೆ ವಿಕೆಟ್ ಕಳೆದುಕೊಳ್ಳುವುದರಿಂದ ಉಳಿದ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಅತಿಯಾಗುತ್ತಿದೆ. ಅಲ್ಲದೆ ತಂಡದ ರನ್‌ರೇಟ್‌ ನಿಧಾನವಾಗಲು ಕಾರಣವಾಗುತ್ತಿದೆ. ಭಾರತವು ಮಧ್ಯದ 6ರಿಂದ 15 ಮತ್ತು ಕೊನೆಯ 15-20ನೇ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಉತ್ತಮ ಆರಂಭಕ್ಕೆ ಕೊರತೆಯಾಗಿದೆ. ಈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಕೇವಲ 116 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ ಕೇವಲ 128 ರನ್ ಗಳಿಸಿದ್ದಾರೆ.
  2. ವೇಗದ ಬೌಲರ್‌ಗಳಿಂದ ಬಾರದ ಉತ್ತಮ ಪ್ರದರ್ಶನ: ಇಡೀ ಟೂರ್ನಿಯಲ್ಲಿ ಭಾರತದ ಬೌಲರ್‌ಗಳು ಸಾಧಾರಣ ಪ್ರದರ್ಶನ ನೀಡಿದ್ದಾರೆ ಹೊರತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. 6 ಪಂದ್ಯಗಳಿಂದ ಅರ್ಶದೀಪ್ 10 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 8 ವಿಕೆಟ್ ಗಳಿಸಿದ್ದಾರೆ. ಮೊಹಮ್ಮದ್ ಶಮಿ 6 ವಿಕೆಟ್ ಗಳಿಸಿದರೆ ಭುವನೇಶ್ವರ್ ಕುಮಾರ್ ಕೇವಲ 4 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಎಲ್ಲಾ ಬೌಲರ್‌ಗಳು ನೀರಸ ಪ್ರದರ್ಶನ ನೀಡಿ ಸೋಲಿಗೆ ಕಾರಣವಾದರು. ಜಸ್ಪ್ರಿತ್ ಬೂಮ್ರ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಗುಳಿದಿದ್ದು ಭಾರತಕ್ಕೆ ದೊಡ್ಡ ಹೊಡೆತವಾಯಿತು.
  3. ಯುವ ಸ್ಪಿನ್ ಬೌಲರ್‌ಗಳಿಗೆ ಸಿಗದ ಅವಕಾಶ: ಭಾರತದ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಇಡೀ ಟೂರ್ನಿಯಲ್ಲಿ 6 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಕೇವಲ 3 ವಿಕೆಟ್ ಪಡೆದರು. ಅಕ್ಸರ್ ಪಟೇಲ್ ಬ್ಯಾಟಿಂಗ್ ಸಹ ಮಾಡಬಲ್ಲರು ಎಂದು ಆಡಿಸಿದರೂ ಸಹ ಅವರು ಗಮನ ಸೆಳೆಯಲಿಲ್ಲ. ವಿಕೆಟ್ ತೆಗೆಯುವ ಸಾಮರ್ಥ್ಯವಿರುವ ಯುಜುವೆಂದ್ರ ಚಹಲ್, ರವಿ ಬಿಷ್ಣೋಯ್‌ರಂತಹ ಯುವ ಸ್ಪಿನ್ ಪ್ರತಿಭೆಗಳಿದ್ದರೂ ಸಹ ಅವರಿಗೆ ಯಾವುದೇ ಪಂದ್ಯಗಳಲ್ಲಿ ಅವಕಾಶ ಸಿಗಲಿಲ್ಲ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿರುವ ಭಾರತ ಮುಂದಿನ ಸರಣಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಬೇಕಿದೆ. ನವೆಂಬರ್ 18 ರಿಂದ ಭಾರತ- ನ್ಯೂಜಿಲೆಂಡ್ ಎದುರು 3 ಟಿ20 ಮತ್ತು 3 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಈ ಸರಣಿಯ ಪಂದ್ಯಗಳ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಓಟಿಟಿಯಲ್ಲಿಯೂ ನೋಡಬಹುದು.

ಇದನ್ನೂ ಓದಿ: ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...