Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ಎರಡು ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳಿಸಿದ್ದ ಐರ್ಲೆಂಡ್ ತಂಡವು ಇಂದು ಮತ್ತೊಂದು ಭರ್ಜರಿ ಜಯ ದಾಖಲಿಸಿದೆ.

- Advertisement -
- Advertisement -

ಎರಡು ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳಿಸಿದ್ದ ಐರ್ಲೆಂಡ್ ತಂಡವು ಇಂದು ಮತ್ತೊಂದು ಭರ್ಜರಿ ಜಯ ದಾಖಲಿಸಿದೆ. ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲನೇ ಗುಂಪಿನ ಇಂಗ್ಲೆಂಡ್ ಮತ್ತು ಐರ್ಲೆಂಡ್ ನಡುವಿನ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದಿಂದ ಐರ್ಲೆಂಡ್ ತಂಡವು 5 ರನ್‌ಗಳ ಜಯಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡದ ನಾಯಕ ಆಂಡಿ ಬಾಲ್ಬಿರ್ನಿಯವರ ಸೊಗಸಾದ ಆಟದಿಂದ ಗಮನ ಸೆಳೆಯಿತು. ಅವರು 47 ಎಸೆತಗಳಲ್ಲಿ 62 ರನ್ ಗಳಿಸಿದರೆ, ಲೋರ್ಕನ್ ಟಕರ್ 27 ಎಸೆತಗಳಲ್ಲಿ 34 ರನ್ ಗಳಿಸಿದರು. ಇವರಿಬ್ಬರೂ ಮೂರನೇ ವಿಕೆಟ್‌ಗೆ 82 ರನ್‌ಗಳ ಜೊತೆಯಾಟದ ಮೂಲಕ ಐರ್ಲೆಂಡ್ 19.2 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 157 ರನ್ ಗಳಿಸಲು ಸಹಾಯಕರಾದರು.

158 ರನ್‌ಗಳ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ ಆರಂಭಿಕ ಆಘಾತ ಕಂಡಿತು. ರನ್ ಖಾತೆ ತೆರೆಯುವ ಮುನ್ನವೇ ಜಾಸ್ ಬಟ್ಲರ್ ಔಟಾದರೆ ಅಲೆಕ್ಸ್ ಹೇಲ್ಸ್ 7 ರನ್‌ಗೆ ವಿಕೆಟ್ ಒಪ್ಪಿಸಿದರು. ತಂಡ 29 ರನ್ ಗಳಿಸಿದ್ದಾಗ ಬೆನ್ ಸ್ಟೋಕ್ ಔಟಾದರು. ಐರ್ಲೆಂಡ್ ತಂಡದ ಜೋಸ್ವ ಲಿಟಲ್ 02 ವಿಕೆಟ್ ಪಡೆದು ಮಿಂಚಿದರು. ಡೇವಿಡ್ ಮಲಾನ್ 35 ರನ್ ಮತ್ತು ಮೋಹಿನ್ ಅಲಿ 24 ರನ್ ಗಳಿಸಿ ಇಂಗ್ಲೆಂಡ್ 100 ರ ಗಡಿ ದಾಟಲು ನೆರವಾದರು. ಆದರೆ ಆಗ ಸುರಿದ ಮಳೆಯಿಂದಾಗಿ ಪಂದ್ಯ ಮುಂದುವರೆಸಲಾಗಲಿಲ್ಲ.

ಇಂಗ್ಲೆಂಡ್ ತಂಡ 14.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 105 ರನ್ ಗಳಿಸಿದಾಗ ಭಾರೀ ಮಳೆ ಸುರಿದ ಪರಿಣಾಮ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಐರ್ಲೆಂಡ್ ವಿಜಯಿ ಎಂದು ಘೋಷಿಸಲಾಯಿತು. ನಿಯಮದ ಪ್ರಕಾರ ಇಂಗ್ಲೆಂಡ್ 05 ರನ್ ಹಿಂದಿತ್ತು.

ಅರ್ಹತಾ ಪಂದ್ಯದಲ್ಲಿ ಐರ್ಲೆಂಡ್ ತಂಡವು ವೆಸ್ಟ್ ಇಂಡಿಯಾ ನೀಡಿದ 147 ರನ್‌ಗಳ ಗುರಿಯನ್ನು 17.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಮುಟ್ಟಿ ವಿಜಯ ಸಾಧಿಸಿತ್ತು. ಆ ಮೂಲಕ ಸೂಪರ್ 12ಗೆ ಅರ್ಹತೆ ಪಡೆದ ಅದು ಈಗ ಇಂಗ್ಲೆಂಡ್ ಅನ್ನು ಸಹ ಮಣಿಸಿ ಹೆಚ್ಚಿಸಿಕೊಂಡಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...