Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ಎರಡು ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳಿಸಿದ್ದ ಐರ್ಲೆಂಡ್ ತಂಡವು ಇಂದು ಮತ್ತೊಂದು ಭರ್ಜರಿ ಜಯ ದಾಖಲಿಸಿದೆ.

- Advertisement -
- Advertisement -

ಎರಡು ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳಿಸಿದ್ದ ಐರ್ಲೆಂಡ್ ತಂಡವು ಇಂದು ಮತ್ತೊಂದು ಭರ್ಜರಿ ಜಯ ದಾಖಲಿಸಿದೆ. ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲನೇ ಗುಂಪಿನ ಇಂಗ್ಲೆಂಡ್ ಮತ್ತು ಐರ್ಲೆಂಡ್ ನಡುವಿನ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದಿಂದ ಐರ್ಲೆಂಡ್ ತಂಡವು 5 ರನ್‌ಗಳ ಜಯಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡದ ನಾಯಕ ಆಂಡಿ ಬಾಲ್ಬಿರ್ನಿಯವರ ಸೊಗಸಾದ ಆಟದಿಂದ ಗಮನ ಸೆಳೆಯಿತು. ಅವರು 47 ಎಸೆತಗಳಲ್ಲಿ 62 ರನ್ ಗಳಿಸಿದರೆ, ಲೋರ್ಕನ್ ಟಕರ್ 27 ಎಸೆತಗಳಲ್ಲಿ 34 ರನ್ ಗಳಿಸಿದರು. ಇವರಿಬ್ಬರೂ ಮೂರನೇ ವಿಕೆಟ್‌ಗೆ 82 ರನ್‌ಗಳ ಜೊತೆಯಾಟದ ಮೂಲಕ ಐರ್ಲೆಂಡ್ 19.2 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 157 ರನ್ ಗಳಿಸಲು ಸಹಾಯಕರಾದರು.

158 ರನ್‌ಗಳ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ ಆರಂಭಿಕ ಆಘಾತ ಕಂಡಿತು. ರನ್ ಖಾತೆ ತೆರೆಯುವ ಮುನ್ನವೇ ಜಾಸ್ ಬಟ್ಲರ್ ಔಟಾದರೆ ಅಲೆಕ್ಸ್ ಹೇಲ್ಸ್ 7 ರನ್‌ಗೆ ವಿಕೆಟ್ ಒಪ್ಪಿಸಿದರು. ತಂಡ 29 ರನ್ ಗಳಿಸಿದ್ದಾಗ ಬೆನ್ ಸ್ಟೋಕ್ ಔಟಾದರು. ಐರ್ಲೆಂಡ್ ತಂಡದ ಜೋಸ್ವ ಲಿಟಲ್ 02 ವಿಕೆಟ್ ಪಡೆದು ಮಿಂಚಿದರು. ಡೇವಿಡ್ ಮಲಾನ್ 35 ರನ್ ಮತ್ತು ಮೋಹಿನ್ ಅಲಿ 24 ರನ್ ಗಳಿಸಿ ಇಂಗ್ಲೆಂಡ್ 100 ರ ಗಡಿ ದಾಟಲು ನೆರವಾದರು. ಆದರೆ ಆಗ ಸುರಿದ ಮಳೆಯಿಂದಾಗಿ ಪಂದ್ಯ ಮುಂದುವರೆಸಲಾಗಲಿಲ್ಲ.

ಇಂಗ್ಲೆಂಡ್ ತಂಡ 14.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 105 ರನ್ ಗಳಿಸಿದಾಗ ಭಾರೀ ಮಳೆ ಸುರಿದ ಪರಿಣಾಮ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಐರ್ಲೆಂಡ್ ವಿಜಯಿ ಎಂದು ಘೋಷಿಸಲಾಯಿತು. ನಿಯಮದ ಪ್ರಕಾರ ಇಂಗ್ಲೆಂಡ್ 05 ರನ್ ಹಿಂದಿತ್ತು.

ಅರ್ಹತಾ ಪಂದ್ಯದಲ್ಲಿ ಐರ್ಲೆಂಡ್ ತಂಡವು ವೆಸ್ಟ್ ಇಂಡಿಯಾ ನೀಡಿದ 147 ರನ್‌ಗಳ ಗುರಿಯನ್ನು 17.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಮುಟ್ಟಿ ವಿಜಯ ಸಾಧಿಸಿತ್ತು. ಆ ಮೂಲಕ ಸೂಪರ್ 12ಗೆ ಅರ್ಹತೆ ಪಡೆದ ಅದು ಈಗ ಇಂಗ್ಲೆಂಡ್ ಅನ್ನು ಸಹ ಮಣಿಸಿ ಹೆಚ್ಚಿಸಿಕೊಂಡಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....