Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು...

ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ ಪಾಕಿಸ್ತಾನನ ಎದುರಿನ ಪಂದ್ಯ ಹಲವಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಪಾಕ್ ನೀಡಿದ 160 ರನ್‌ಗಳ ಗುರಿಯನ್ನು ಭಾರತ ತಂಡ ಕೊನೆಯ ಎಸೆತದಲ್ಲಿ ಮುಟ್ಟಿತು. ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಶತಕದ ಜೊತೆಯಾಟದ ನೆರವಿನೊಂದಿಗೆ ಗೆಲುವಿನ ಪತಾಕೆ ಹಾರಿಸಿತು. ಕೊನೆಯ 8 ಎಸೆತಗಳಲ್ಲಿ 28 ರನ್ ಗಳಿಸಿದ ಭಾರತ ತಂಡ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಆ ಒಂದೊಂದು ಎಸೆತವು ಪಂದ್ಯದ ದಿಕ್ಕು ಬದಲಿಸುವಂತಿದ್ದವು. ಆ 8 ಎಸೆತಗಳ ನೋಟ ಇಲ್ಲಿದೆ.

18 ಓವರ್ ಮುಗಿದಾಗ ಭಾರತ ತಂಡ ನಾಲ್ಕು ವಿಕೆಟ್ ಕಳೆದುಕೊಂಡು 129 ರನ್ ಗಳಿಸಿತ್ತು. ಗೆಲುವಿಗೆ 12 ಎಸೆತಗಳಲ್ಲಿ 31 ಬೇಕಿತ್ತು. ಪಾಕ್ ಬೌಲರ್ ಹ್ಯಾರಿಸ್ ರೌಫ್ ಎಸೆದ 19ನೇ ಓವರ್‌ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಒಂದು ರನ್ ಗಳಿಸಿದರೆ ಮರು ಎಸೆತದಲ್ಲಿ ಕೊಹ್ಲಿ ಸಹ ಒಂದು ರನ್ ಗಳಿಸಿದರು. ಆದರೆ ಮೂರನೇ ಎಸೆತದಲ್ಲಿ ಹಾರ್ದಿಕ್ ರನ್ ಗಳಿಸದೆ ನಾಲ್ಕನೆ ಎಸೆತದಲ್ಲಿ 1 ರನ್ ಗಳಿಸಿದರು. ಆಗ ಭಾರತ 131 ರನ್ ಗಳಿಸಿತ್ತು. ಗೆಲುವಿಗೆ 8 ಎಸೆತಗಳಲ್ಲಿ 28 ರನ್ ಗಳಿಸಬೇಕಿತ್ತು. ಪಂದ್ಯ ಪಾಕ್‌ ಪರವಾಗಿತ್ತು. ಆನಂತರ ನಡೆದಿದ್ದು ಕೊಹ್ಲಿ ಆಟ. ಅದು ಹೀಗಿತ್ತು..

18.5: ಸ್ಲೊ ಬಾಲ್ ಅನ್ನು ವಿರಾಟ್ ಕೊಹ್ಲಿ ನೇರ ಸಿಕ್ಸ್‌ ಭಾರಿಸಿದರು.

18.6: ಫೈನ್‌ ಲೆಗ್‌ನಲ್ಲಿ ವಿರಾಟ್ ಕೊಹ್ಲಿ ಸಿಕ್ಸರ್ ಭಾರಿಸಿದರು. ಅಲ್ಲಿಗೆ ಕೊನೆಯ ಓವರ್‌ನಲ್ಲಿ 16 ರನ್ ಗಳಿಸಬೇಕಾಗಿತ್ತು.

19.1: ಸ್ಪಿನ್ ಬೌಲರ್ ಮೊಹಮ್ಮದ್ ನವಾಜ್ ಎಸೆತ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಬಾಬರ್ ಅಜಂಗೆ ಕ್ಯಾಚಿತ್ತು ಔಟಾದರು. ಭಾರತಕ್ಕೆ ಆಗ 5 ಎಸೆತಗಳಲ್ಲಿ 16 ರನ್ ಬೇಕಿತ್ತು.

19.2:  ಕ್ರಿಸ್‌ಗೆ ಬಂದಿದ್ದ ಹೊಸ ಬ್ಯಾಟರ್ ದಿನೇಶ್ ಕಾರ್ತಿಕ್ ಫುಲ್ ಟಾಸ್ ಬಾಲನ್ನು ಲಾಂಗ್‌ಆನ್‌ನತ್ತ ಬಾರಿಸಿ ಕೇವಲ ಒಂದು ರನ್ ಗಳಿಸಿದರು. ಭಾರತಕ್ಕೆ ಆಗ 4 ಎಸೆತಗಳಲ್ಲಿ 15 ರನ್ ಬೇಕಿತ್ತು.

19.3: ವಿರಾಟ್ ಕೊಹ್ಲಿ ಲಾಂಗ್ ಆನ್‌ನತ್ತ ಭಾರಿಸಿ ಎರಡು ರನ್ ಗಳಿಸಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 13 ರನ್ ಬೇಕಿತ್ತು.

19.4: ಫುಲ್ ಟಾಸ್ ಬಂದ ಬಾಲನ್ನು ಕೊಹ್ಲಿ ಲೈನ್ ಮತ್ತು ಡೀಪ್ ಸ್ಕ್ವೇರ್‌ ನಡುವೆ ಸಿಕ್ಸರ್ ಬಾರಿಸಿದರು. ಅದು ಹೈ ಪುಲ್ ಟಾಸ್ ಇದ್ದ ಕಾರಣ ಅಂಪೈರ್ ನೋಬಾಲ್ ಎಂದು ಘೋಷಿಸಿದರು.  ಅಲ್ಲಿಗೆ ಪಂದ್ಯ ಭಾರತದ ಕಡೆ ವಾಲಿತು. ಭಾರತಕ್ಕೆ ಆಗ 3 ಎಸೆತಗಳಲ್ಲಿ 6 ರನ್ ಬೇಕಿತ್ತು.

19.4- ಫ್ರಿ ಹಿಟ್: ನವಾಜ್ ಎಸೆದ ಬಾಲ್ ವೈಡ್ ಆಯಿತು. ಭಾರತಕ್ಕೆ ಒಂದು ರನ್ ಸಿಕ್ಕಿತು. ಪಾಕ್ ಆಟಗಾರರು ನೋಬಾಲ್ ಅಲ್ಲವೆಂದು ವಾದ ಮಾಡಿದರು. ಆದರೆ ಅಂಪೈರ್ ನೋಬಾಲ್ ನೀಡಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 5 ರನ್ ಬೇಕಿತ್ತು.

13.4 -ಫ್ರಿ ಹಿಟ್: ನವಾಜ್ ವೇಗದಲ್ಲಿ ಎಸೆದ ಬಾಲ್ ಕೊಹ್ಲಿಯನ್ನು ತಪ್ಪಿಸಿ ವಿಕೆಟ್‌ಗೆ ಬಡಿದು ಥರ್ಡ್ ಮ್ಯಾನ್ ಕಡೆಗೆ ಹೋದಾಗ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಚೆಂಡು ವಿಕೆಟ್‌ಗೆ ಬಡಿದ ಕಾರಣ ಬೈಸ್ ನೀಡಬಾರದೆಂದು ಪಾಕ್ ಆಟಗಾರರು ವಾದ ಮಾಡಿದರು. ಆದರೆ ಅಂಪೈರ್ ಬೈಸ್ ರನ್ ನೀಡಿದರು. ಭಾರತಕ್ಕೆ ಆಗ 2 ಎಸೆತಗಳಲ್ಲಿ 2 ರನ್ ಬೇಕಿತ್ತು.

13.5: ವೈಡ್ ಆಗುತ್ತಿದ್ದ ಬಾಲ್ ಆಡಿದ ದಿನೇಶ್ ಕಾರ್ತಿಕ್ ಸ್ಟಂಪ್ ಔಟ್ ಆದರು. ಅಲ್ಲಿಗೆ ಪಂದ್ಯ ಪಾಕ್ ಕಡೆಗೆ ವಾಲಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 2 ರನ್ ಬೇಕಿತ್ತು.

13.6: ನವಾಜ್ ವೈಡ್ ಮಾಡಿದರು. ಅಶ್ವಿನ್ ಬಾಲ್ ಮುಟ್ಟಲಿಲ್ಲ. ಭಾರತಕ್ಕೆ ಎಕ್ಸ್ಟ್ರಾ ರೂಪದಲ್ಲಿ ಒಂದು ರನ್ ಸಿಕ್ಕಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 1 ರನ್ ಬೇಕಿತ್ತು.

13.6: ನವಾಜ್ ಎಸೆತವನ್ನು ಆರ್ ಅಶ್ವಿನ್ ಓವರ್ ಮಿಡ್ ಆಫ್ ಕಡೆ ಬಾರಿಸಿ ಒಂದು ರನ್ ಓಡಿದರು. ಅಲ್ಲಿಗೆ ಭಾರತ ತಂಡಕ್ಕೆ ನಾಲ್ಕು ವಿಕೆಟ್ ಜಯ ಲಭಿಸಿತು. ಅಶ್ವಿನ್ ಕುಣಿದು ಕುಪ್ಪಳಿಸಿದರೆ, ಮೈದಾನಕ್ಕೆ ನುಗ್ಗಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೊಹ್ಲಿಯನ್ನು ಭುಜದ ಮೇಲೆತ್ತಿ ಸಂಭ್ರಮಿಸಿದರು.

53 ಎಸೆತಗಳಲ್ಲಿ 06 ಬೌಂಡರಿ ಮತ್ತು 04 ಸಿಕ್ಸರ್ ಸೇರಿ 82 ರನ್ ಚಚ್ಚಿದ ವಿರಾಟ್ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತ ಕಂಡಿತು. ಆನಂತರ ಮಸೂದ್ (52) ಮತ್ತು ಇಫ್ತಿಕಾರ್ ಅಹ್ಮದ್‌ರವರ (51) ರನ್‌ಗಳ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಪೇರಿಸಿತ್ತು. ಭಾರತದ ಪರವಾಗಿ ಹಾರ್ದಿಕ್ ಪಾಂಡ್ಯ ಮತ್ತು ಅರ್ಶದೀಪ್ ಸಿಂಗ್ ತಲಾ ಮೂರು ವಿಕೆಟ್ ಪಡೆದರು.

ಆನಂತರ ಭಾರತವೂ ತಂಡವೂ ಸಹ ಆರಂಭಿಕ ಆಘಾತ ಕಂಡಿತು. 31 ರನ್ ಗಳಿಸುವಷ್ಟಲ್ಲಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಅಕ್ಸರ್ ಪಟೇಲ್ ಔಟ್ ಆಗಿ ಪೆವಿಲಿಯನ್ ಸೇರಿದ್ದರು. ಆನಂತರ ಜೊತೆಗೂಡಿದ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಜೊತೆಯಾಟ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು. ಪಾಕ್ ಪರವಾಗಿ ಹ್ಯಾರಿಸ್ ರೌಫ್ ಮತ್ತು ಮೊಹಮ್ಮದ್ ನವಾಜ್ ತಲಾ ಎರಡು ವಿಕೆಟ್ ಪಡೆದರು.

ಇದನ್ನೂ ಓದಿ: 2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...