Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು...

ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ ಪಾಕಿಸ್ತಾನನ ಎದುರಿನ ಪಂದ್ಯ ಹಲವಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಪಾಕ್ ನೀಡಿದ 160 ರನ್‌ಗಳ ಗುರಿಯನ್ನು ಭಾರತ ತಂಡ ಕೊನೆಯ ಎಸೆತದಲ್ಲಿ ಮುಟ್ಟಿತು. ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಶತಕದ ಜೊತೆಯಾಟದ ನೆರವಿನೊಂದಿಗೆ ಗೆಲುವಿನ ಪತಾಕೆ ಹಾರಿಸಿತು. ಕೊನೆಯ 8 ಎಸೆತಗಳಲ್ಲಿ 28 ರನ್ ಗಳಿಸಿದ ಭಾರತ ತಂಡ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಆ ಒಂದೊಂದು ಎಸೆತವು ಪಂದ್ಯದ ದಿಕ್ಕು ಬದಲಿಸುವಂತಿದ್ದವು. ಆ 8 ಎಸೆತಗಳ ನೋಟ ಇಲ್ಲಿದೆ.

18 ಓವರ್ ಮುಗಿದಾಗ ಭಾರತ ತಂಡ ನಾಲ್ಕು ವಿಕೆಟ್ ಕಳೆದುಕೊಂಡು 129 ರನ್ ಗಳಿಸಿತ್ತು. ಗೆಲುವಿಗೆ 12 ಎಸೆತಗಳಲ್ಲಿ 31 ಬೇಕಿತ್ತು. ಪಾಕ್ ಬೌಲರ್ ಹ್ಯಾರಿಸ್ ರೌಫ್ ಎಸೆದ 19ನೇ ಓವರ್‌ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಒಂದು ರನ್ ಗಳಿಸಿದರೆ ಮರು ಎಸೆತದಲ್ಲಿ ಕೊಹ್ಲಿ ಸಹ ಒಂದು ರನ್ ಗಳಿಸಿದರು. ಆದರೆ ಮೂರನೇ ಎಸೆತದಲ್ಲಿ ಹಾರ್ದಿಕ್ ರನ್ ಗಳಿಸದೆ ನಾಲ್ಕನೆ ಎಸೆತದಲ್ಲಿ 1 ರನ್ ಗಳಿಸಿದರು. ಆಗ ಭಾರತ 131 ರನ್ ಗಳಿಸಿತ್ತು. ಗೆಲುವಿಗೆ 8 ಎಸೆತಗಳಲ್ಲಿ 28 ರನ್ ಗಳಿಸಬೇಕಿತ್ತು. ಪಂದ್ಯ ಪಾಕ್‌ ಪರವಾಗಿತ್ತು. ಆನಂತರ ನಡೆದಿದ್ದು ಕೊಹ್ಲಿ ಆಟ. ಅದು ಹೀಗಿತ್ತು..

18.5: ಸ್ಲೊ ಬಾಲ್ ಅನ್ನು ವಿರಾಟ್ ಕೊಹ್ಲಿ ನೇರ ಸಿಕ್ಸ್‌ ಭಾರಿಸಿದರು.

18.6: ಫೈನ್‌ ಲೆಗ್‌ನಲ್ಲಿ ವಿರಾಟ್ ಕೊಹ್ಲಿ ಸಿಕ್ಸರ್ ಭಾರಿಸಿದರು. ಅಲ್ಲಿಗೆ ಕೊನೆಯ ಓವರ್‌ನಲ್ಲಿ 16 ರನ್ ಗಳಿಸಬೇಕಾಗಿತ್ತು.

19.1: ಸ್ಪಿನ್ ಬೌಲರ್ ಮೊಹಮ್ಮದ್ ನವಾಜ್ ಎಸೆತ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಬಾಬರ್ ಅಜಂಗೆ ಕ್ಯಾಚಿತ್ತು ಔಟಾದರು. ಭಾರತಕ್ಕೆ ಆಗ 5 ಎಸೆತಗಳಲ್ಲಿ 16 ರನ್ ಬೇಕಿತ್ತು.

19.2:  ಕ್ರಿಸ್‌ಗೆ ಬಂದಿದ್ದ ಹೊಸ ಬ್ಯಾಟರ್ ದಿನೇಶ್ ಕಾರ್ತಿಕ್ ಫುಲ್ ಟಾಸ್ ಬಾಲನ್ನು ಲಾಂಗ್‌ಆನ್‌ನತ್ತ ಬಾರಿಸಿ ಕೇವಲ ಒಂದು ರನ್ ಗಳಿಸಿದರು. ಭಾರತಕ್ಕೆ ಆಗ 4 ಎಸೆತಗಳಲ್ಲಿ 15 ರನ್ ಬೇಕಿತ್ತು.

19.3: ವಿರಾಟ್ ಕೊಹ್ಲಿ ಲಾಂಗ್ ಆನ್‌ನತ್ತ ಭಾರಿಸಿ ಎರಡು ರನ್ ಗಳಿಸಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 13 ರನ್ ಬೇಕಿತ್ತು.

19.4: ಫುಲ್ ಟಾಸ್ ಬಂದ ಬಾಲನ್ನು ಕೊಹ್ಲಿ ಲೈನ್ ಮತ್ತು ಡೀಪ್ ಸ್ಕ್ವೇರ್‌ ನಡುವೆ ಸಿಕ್ಸರ್ ಬಾರಿಸಿದರು. ಅದು ಹೈ ಪುಲ್ ಟಾಸ್ ಇದ್ದ ಕಾರಣ ಅಂಪೈರ್ ನೋಬಾಲ್ ಎಂದು ಘೋಷಿಸಿದರು.  ಅಲ್ಲಿಗೆ ಪಂದ್ಯ ಭಾರತದ ಕಡೆ ವಾಲಿತು. ಭಾರತಕ್ಕೆ ಆಗ 3 ಎಸೆತಗಳಲ್ಲಿ 6 ರನ್ ಬೇಕಿತ್ತು.

19.4- ಫ್ರಿ ಹಿಟ್: ನವಾಜ್ ಎಸೆದ ಬಾಲ್ ವೈಡ್ ಆಯಿತು. ಭಾರತಕ್ಕೆ ಒಂದು ರನ್ ಸಿಕ್ಕಿತು. ಪಾಕ್ ಆಟಗಾರರು ನೋಬಾಲ್ ಅಲ್ಲವೆಂದು ವಾದ ಮಾಡಿದರು. ಆದರೆ ಅಂಪೈರ್ ನೋಬಾಲ್ ನೀಡಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 5 ರನ್ ಬೇಕಿತ್ತು.

13.4 -ಫ್ರಿ ಹಿಟ್: ನವಾಜ್ ವೇಗದಲ್ಲಿ ಎಸೆದ ಬಾಲ್ ಕೊಹ್ಲಿಯನ್ನು ತಪ್ಪಿಸಿ ವಿಕೆಟ್‌ಗೆ ಬಡಿದು ಥರ್ಡ್ ಮ್ಯಾನ್ ಕಡೆಗೆ ಹೋದಾಗ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಚೆಂಡು ವಿಕೆಟ್‌ಗೆ ಬಡಿದ ಕಾರಣ ಬೈಸ್ ನೀಡಬಾರದೆಂದು ಪಾಕ್ ಆಟಗಾರರು ವಾದ ಮಾಡಿದರು. ಆದರೆ ಅಂಪೈರ್ ಬೈಸ್ ರನ್ ನೀಡಿದರು. ಭಾರತಕ್ಕೆ ಆಗ 2 ಎಸೆತಗಳಲ್ಲಿ 2 ರನ್ ಬೇಕಿತ್ತು.

13.5: ವೈಡ್ ಆಗುತ್ತಿದ್ದ ಬಾಲ್ ಆಡಿದ ದಿನೇಶ್ ಕಾರ್ತಿಕ್ ಸ್ಟಂಪ್ ಔಟ್ ಆದರು. ಅಲ್ಲಿಗೆ ಪಂದ್ಯ ಪಾಕ್ ಕಡೆಗೆ ವಾಲಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 2 ರನ್ ಬೇಕಿತ್ತು.

13.6: ನವಾಜ್ ವೈಡ್ ಮಾಡಿದರು. ಅಶ್ವಿನ್ ಬಾಲ್ ಮುಟ್ಟಲಿಲ್ಲ. ಭಾರತಕ್ಕೆ ಎಕ್ಸ್ಟ್ರಾ ರೂಪದಲ್ಲಿ ಒಂದು ರನ್ ಸಿಕ್ಕಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 1 ರನ್ ಬೇಕಿತ್ತು.

13.6: ನವಾಜ್ ಎಸೆತವನ್ನು ಆರ್ ಅಶ್ವಿನ್ ಓವರ್ ಮಿಡ್ ಆಫ್ ಕಡೆ ಬಾರಿಸಿ ಒಂದು ರನ್ ಓಡಿದರು. ಅಲ್ಲಿಗೆ ಭಾರತ ತಂಡಕ್ಕೆ ನಾಲ್ಕು ವಿಕೆಟ್ ಜಯ ಲಭಿಸಿತು. ಅಶ್ವಿನ್ ಕುಣಿದು ಕುಪ್ಪಳಿಸಿದರೆ, ಮೈದಾನಕ್ಕೆ ನುಗ್ಗಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೊಹ್ಲಿಯನ್ನು ಭುಜದ ಮೇಲೆತ್ತಿ ಸಂಭ್ರಮಿಸಿದರು.

53 ಎಸೆತಗಳಲ್ಲಿ 06 ಬೌಂಡರಿ ಮತ್ತು 04 ಸಿಕ್ಸರ್ ಸೇರಿ 82 ರನ್ ಚಚ್ಚಿದ ವಿರಾಟ್ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತ ಕಂಡಿತು. ಆನಂತರ ಮಸೂದ್ (52) ಮತ್ತು ಇಫ್ತಿಕಾರ್ ಅಹ್ಮದ್‌ರವರ (51) ರನ್‌ಗಳ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಪೇರಿಸಿತ್ತು. ಭಾರತದ ಪರವಾಗಿ ಹಾರ್ದಿಕ್ ಪಾಂಡ್ಯ ಮತ್ತು ಅರ್ಶದೀಪ್ ಸಿಂಗ್ ತಲಾ ಮೂರು ವಿಕೆಟ್ ಪಡೆದರು.

ಆನಂತರ ಭಾರತವೂ ತಂಡವೂ ಸಹ ಆರಂಭಿಕ ಆಘಾತ ಕಂಡಿತು. 31 ರನ್ ಗಳಿಸುವಷ್ಟಲ್ಲಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಅಕ್ಸರ್ ಪಟೇಲ್ ಔಟ್ ಆಗಿ ಪೆವಿಲಿಯನ್ ಸೇರಿದ್ದರು. ಆನಂತರ ಜೊತೆಗೂಡಿದ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಜೊತೆಯಾಟ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು. ಪಾಕ್ ಪರವಾಗಿ ಹ್ಯಾರಿಸ್ ರೌಫ್ ಮತ್ತು ಮೊಹಮ್ಮದ್ ನವಾಜ್ ತಲಾ ಎರಡು ವಿಕೆಟ್ ಪಡೆದರು.

ಇದನ್ನೂ ಓದಿ: 2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...