Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು...

ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ ಪಾಕಿಸ್ತಾನನ ಎದುರಿನ ಪಂದ್ಯ ಹಲವಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಪಾಕ್ ನೀಡಿದ 160 ರನ್‌ಗಳ ಗುರಿಯನ್ನು ಭಾರತ ತಂಡ ಕೊನೆಯ ಎಸೆತದಲ್ಲಿ ಮುಟ್ಟಿತು. ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಶತಕದ ಜೊತೆಯಾಟದ ನೆರವಿನೊಂದಿಗೆ ಗೆಲುವಿನ ಪತಾಕೆ ಹಾರಿಸಿತು. ಕೊನೆಯ 8 ಎಸೆತಗಳಲ್ಲಿ 28 ರನ್ ಗಳಿಸಿದ ಭಾರತ ತಂಡ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಆ ಒಂದೊಂದು ಎಸೆತವು ಪಂದ್ಯದ ದಿಕ್ಕು ಬದಲಿಸುವಂತಿದ್ದವು. ಆ 8 ಎಸೆತಗಳ ನೋಟ ಇಲ್ಲಿದೆ.

18 ಓವರ್ ಮುಗಿದಾಗ ಭಾರತ ತಂಡ ನಾಲ್ಕು ವಿಕೆಟ್ ಕಳೆದುಕೊಂಡು 129 ರನ್ ಗಳಿಸಿತ್ತು. ಗೆಲುವಿಗೆ 12 ಎಸೆತಗಳಲ್ಲಿ 31 ಬೇಕಿತ್ತು. ಪಾಕ್ ಬೌಲರ್ ಹ್ಯಾರಿಸ್ ರೌಫ್ ಎಸೆದ 19ನೇ ಓವರ್‌ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಒಂದು ರನ್ ಗಳಿಸಿದರೆ ಮರು ಎಸೆತದಲ್ಲಿ ಕೊಹ್ಲಿ ಸಹ ಒಂದು ರನ್ ಗಳಿಸಿದರು. ಆದರೆ ಮೂರನೇ ಎಸೆತದಲ್ಲಿ ಹಾರ್ದಿಕ್ ರನ್ ಗಳಿಸದೆ ನಾಲ್ಕನೆ ಎಸೆತದಲ್ಲಿ 1 ರನ್ ಗಳಿಸಿದರು. ಆಗ ಭಾರತ 131 ರನ್ ಗಳಿಸಿತ್ತು. ಗೆಲುವಿಗೆ 8 ಎಸೆತಗಳಲ್ಲಿ 28 ರನ್ ಗಳಿಸಬೇಕಿತ್ತು. ಪಂದ್ಯ ಪಾಕ್‌ ಪರವಾಗಿತ್ತು. ಆನಂತರ ನಡೆದಿದ್ದು ಕೊಹ್ಲಿ ಆಟ. ಅದು ಹೀಗಿತ್ತು..

18.5: ಸ್ಲೊ ಬಾಲ್ ಅನ್ನು ವಿರಾಟ್ ಕೊಹ್ಲಿ ನೇರ ಸಿಕ್ಸ್‌ ಭಾರಿಸಿದರು.

18.6: ಫೈನ್‌ ಲೆಗ್‌ನಲ್ಲಿ ವಿರಾಟ್ ಕೊಹ್ಲಿ ಸಿಕ್ಸರ್ ಭಾರಿಸಿದರು. ಅಲ್ಲಿಗೆ ಕೊನೆಯ ಓವರ್‌ನಲ್ಲಿ 16 ರನ್ ಗಳಿಸಬೇಕಾಗಿತ್ತು.

19.1: ಸ್ಪಿನ್ ಬೌಲರ್ ಮೊಹಮ್ಮದ್ ನವಾಜ್ ಎಸೆತ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಬಾಬರ್ ಅಜಂಗೆ ಕ್ಯಾಚಿತ್ತು ಔಟಾದರು. ಭಾರತಕ್ಕೆ ಆಗ 5 ಎಸೆತಗಳಲ್ಲಿ 16 ರನ್ ಬೇಕಿತ್ತು.

19.2:  ಕ್ರಿಸ್‌ಗೆ ಬಂದಿದ್ದ ಹೊಸ ಬ್ಯಾಟರ್ ದಿನೇಶ್ ಕಾರ್ತಿಕ್ ಫುಲ್ ಟಾಸ್ ಬಾಲನ್ನು ಲಾಂಗ್‌ಆನ್‌ನತ್ತ ಬಾರಿಸಿ ಕೇವಲ ಒಂದು ರನ್ ಗಳಿಸಿದರು. ಭಾರತಕ್ಕೆ ಆಗ 4 ಎಸೆತಗಳಲ್ಲಿ 15 ರನ್ ಬೇಕಿತ್ತು.

19.3: ವಿರಾಟ್ ಕೊಹ್ಲಿ ಲಾಂಗ್ ಆನ್‌ನತ್ತ ಭಾರಿಸಿ ಎರಡು ರನ್ ಗಳಿಸಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 13 ರನ್ ಬೇಕಿತ್ತು.

19.4: ಫುಲ್ ಟಾಸ್ ಬಂದ ಬಾಲನ್ನು ಕೊಹ್ಲಿ ಲೈನ್ ಮತ್ತು ಡೀಪ್ ಸ್ಕ್ವೇರ್‌ ನಡುವೆ ಸಿಕ್ಸರ್ ಬಾರಿಸಿದರು. ಅದು ಹೈ ಪುಲ್ ಟಾಸ್ ಇದ್ದ ಕಾರಣ ಅಂಪೈರ್ ನೋಬಾಲ್ ಎಂದು ಘೋಷಿಸಿದರು.  ಅಲ್ಲಿಗೆ ಪಂದ್ಯ ಭಾರತದ ಕಡೆ ವಾಲಿತು. ಭಾರತಕ್ಕೆ ಆಗ 3 ಎಸೆತಗಳಲ್ಲಿ 6 ರನ್ ಬೇಕಿತ್ತು.

19.4- ಫ್ರಿ ಹಿಟ್: ನವಾಜ್ ಎಸೆದ ಬಾಲ್ ವೈಡ್ ಆಯಿತು. ಭಾರತಕ್ಕೆ ಒಂದು ರನ್ ಸಿಕ್ಕಿತು. ಪಾಕ್ ಆಟಗಾರರು ನೋಬಾಲ್ ಅಲ್ಲವೆಂದು ವಾದ ಮಾಡಿದರು. ಆದರೆ ಅಂಪೈರ್ ನೋಬಾಲ್ ನೀಡಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 5 ರನ್ ಬೇಕಿತ್ತು.

13.4 -ಫ್ರಿ ಹಿಟ್: ನವಾಜ್ ವೇಗದಲ್ಲಿ ಎಸೆದ ಬಾಲ್ ಕೊಹ್ಲಿಯನ್ನು ತಪ್ಪಿಸಿ ವಿಕೆಟ್‌ಗೆ ಬಡಿದು ಥರ್ಡ್ ಮ್ಯಾನ್ ಕಡೆಗೆ ಹೋದಾಗ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಚೆಂಡು ವಿಕೆಟ್‌ಗೆ ಬಡಿದ ಕಾರಣ ಬೈಸ್ ನೀಡಬಾರದೆಂದು ಪಾಕ್ ಆಟಗಾರರು ವಾದ ಮಾಡಿದರು. ಆದರೆ ಅಂಪೈರ್ ಬೈಸ್ ರನ್ ನೀಡಿದರು. ಭಾರತಕ್ಕೆ ಆಗ 2 ಎಸೆತಗಳಲ್ಲಿ 2 ರನ್ ಬೇಕಿತ್ತು.

13.5: ವೈಡ್ ಆಗುತ್ತಿದ್ದ ಬಾಲ್ ಆಡಿದ ದಿನೇಶ್ ಕಾರ್ತಿಕ್ ಸ್ಟಂಪ್ ಔಟ್ ಆದರು. ಅಲ್ಲಿಗೆ ಪಂದ್ಯ ಪಾಕ್ ಕಡೆಗೆ ವಾಲಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 2 ರನ್ ಬೇಕಿತ್ತು.

13.6: ನವಾಜ್ ವೈಡ್ ಮಾಡಿದರು. ಅಶ್ವಿನ್ ಬಾಲ್ ಮುಟ್ಟಲಿಲ್ಲ. ಭಾರತಕ್ಕೆ ಎಕ್ಸ್ಟ್ರಾ ರೂಪದಲ್ಲಿ ಒಂದು ರನ್ ಸಿಕ್ಕಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 1 ರನ್ ಬೇಕಿತ್ತು.

13.6: ನವಾಜ್ ಎಸೆತವನ್ನು ಆರ್ ಅಶ್ವಿನ್ ಓವರ್ ಮಿಡ್ ಆಫ್ ಕಡೆ ಬಾರಿಸಿ ಒಂದು ರನ್ ಓಡಿದರು. ಅಲ್ಲಿಗೆ ಭಾರತ ತಂಡಕ್ಕೆ ನಾಲ್ಕು ವಿಕೆಟ್ ಜಯ ಲಭಿಸಿತು. ಅಶ್ವಿನ್ ಕುಣಿದು ಕುಪ್ಪಳಿಸಿದರೆ, ಮೈದಾನಕ್ಕೆ ನುಗ್ಗಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೊಹ್ಲಿಯನ್ನು ಭುಜದ ಮೇಲೆತ್ತಿ ಸಂಭ್ರಮಿಸಿದರು.

53 ಎಸೆತಗಳಲ್ಲಿ 06 ಬೌಂಡರಿ ಮತ್ತು 04 ಸಿಕ್ಸರ್ ಸೇರಿ 82 ರನ್ ಚಚ್ಚಿದ ವಿರಾಟ್ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತ ಕಂಡಿತು. ಆನಂತರ ಮಸೂದ್ (52) ಮತ್ತು ಇಫ್ತಿಕಾರ್ ಅಹ್ಮದ್‌ರವರ (51) ರನ್‌ಗಳ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಪೇರಿಸಿತ್ತು. ಭಾರತದ ಪರವಾಗಿ ಹಾರ್ದಿಕ್ ಪಾಂಡ್ಯ ಮತ್ತು ಅರ್ಶದೀಪ್ ಸಿಂಗ್ ತಲಾ ಮೂರು ವಿಕೆಟ್ ಪಡೆದರು.

ಆನಂತರ ಭಾರತವೂ ತಂಡವೂ ಸಹ ಆರಂಭಿಕ ಆಘಾತ ಕಂಡಿತು. 31 ರನ್ ಗಳಿಸುವಷ್ಟಲ್ಲಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಅಕ್ಸರ್ ಪಟೇಲ್ ಔಟ್ ಆಗಿ ಪೆವಿಲಿಯನ್ ಸೇರಿದ್ದರು. ಆನಂತರ ಜೊತೆಗೂಡಿದ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಜೊತೆಯಾಟ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು. ಪಾಕ್ ಪರವಾಗಿ ಹ್ಯಾರಿಸ್ ರೌಫ್ ಮತ್ತು ಮೊಹಮ್ಮದ್ ನವಾಜ್ ತಲಾ ಎರಡು ವಿಕೆಟ್ ಪಡೆದರು.

ಇದನ್ನೂ ಓದಿ: 2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...