Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು...

ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ ಪಾಕಿಸ್ತಾನನ ಎದುರಿನ ಪಂದ್ಯ ಹಲವಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಪಾಕ್ ನೀಡಿದ 160 ರನ್‌ಗಳ ಗುರಿಯನ್ನು ಭಾರತ ತಂಡ ಕೊನೆಯ ಎಸೆತದಲ್ಲಿ ಮುಟ್ಟಿತು. ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಶತಕದ ಜೊತೆಯಾಟದ ನೆರವಿನೊಂದಿಗೆ ಗೆಲುವಿನ ಪತಾಕೆ ಹಾರಿಸಿತು. ಕೊನೆಯ 8 ಎಸೆತಗಳಲ್ಲಿ 28 ರನ್ ಗಳಿಸಿದ ಭಾರತ ತಂಡ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಆ ಒಂದೊಂದು ಎಸೆತವು ಪಂದ್ಯದ ದಿಕ್ಕು ಬದಲಿಸುವಂತಿದ್ದವು. ಆ 8 ಎಸೆತಗಳ ನೋಟ ಇಲ್ಲಿದೆ.

18 ಓವರ್ ಮುಗಿದಾಗ ಭಾರತ ತಂಡ ನಾಲ್ಕು ವಿಕೆಟ್ ಕಳೆದುಕೊಂಡು 129 ರನ್ ಗಳಿಸಿತ್ತು. ಗೆಲುವಿಗೆ 12 ಎಸೆತಗಳಲ್ಲಿ 31 ಬೇಕಿತ್ತು. ಪಾಕ್ ಬೌಲರ್ ಹ್ಯಾರಿಸ್ ರೌಫ್ ಎಸೆದ 19ನೇ ಓವರ್‌ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಒಂದು ರನ್ ಗಳಿಸಿದರೆ ಮರು ಎಸೆತದಲ್ಲಿ ಕೊಹ್ಲಿ ಸಹ ಒಂದು ರನ್ ಗಳಿಸಿದರು. ಆದರೆ ಮೂರನೇ ಎಸೆತದಲ್ಲಿ ಹಾರ್ದಿಕ್ ರನ್ ಗಳಿಸದೆ ನಾಲ್ಕನೆ ಎಸೆತದಲ್ಲಿ 1 ರನ್ ಗಳಿಸಿದರು. ಆಗ ಭಾರತ 131 ರನ್ ಗಳಿಸಿತ್ತು. ಗೆಲುವಿಗೆ 8 ಎಸೆತಗಳಲ್ಲಿ 28 ರನ್ ಗಳಿಸಬೇಕಿತ್ತು. ಪಂದ್ಯ ಪಾಕ್‌ ಪರವಾಗಿತ್ತು. ಆನಂತರ ನಡೆದಿದ್ದು ಕೊಹ್ಲಿ ಆಟ. ಅದು ಹೀಗಿತ್ತು..

18.5: ಸ್ಲೊ ಬಾಲ್ ಅನ್ನು ವಿರಾಟ್ ಕೊಹ್ಲಿ ನೇರ ಸಿಕ್ಸ್‌ ಭಾರಿಸಿದರು.

18.6: ಫೈನ್‌ ಲೆಗ್‌ನಲ್ಲಿ ವಿರಾಟ್ ಕೊಹ್ಲಿ ಸಿಕ್ಸರ್ ಭಾರಿಸಿದರು. ಅಲ್ಲಿಗೆ ಕೊನೆಯ ಓವರ್‌ನಲ್ಲಿ 16 ರನ್ ಗಳಿಸಬೇಕಾಗಿತ್ತು.

19.1: ಸ್ಪಿನ್ ಬೌಲರ್ ಮೊಹಮ್ಮದ್ ನವಾಜ್ ಎಸೆತ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಬಾಬರ್ ಅಜಂಗೆ ಕ್ಯಾಚಿತ್ತು ಔಟಾದರು. ಭಾರತಕ್ಕೆ ಆಗ 5 ಎಸೆತಗಳಲ್ಲಿ 16 ರನ್ ಬೇಕಿತ್ತು.

19.2:  ಕ್ರಿಸ್‌ಗೆ ಬಂದಿದ್ದ ಹೊಸ ಬ್ಯಾಟರ್ ದಿನೇಶ್ ಕಾರ್ತಿಕ್ ಫುಲ್ ಟಾಸ್ ಬಾಲನ್ನು ಲಾಂಗ್‌ಆನ್‌ನತ್ತ ಬಾರಿಸಿ ಕೇವಲ ಒಂದು ರನ್ ಗಳಿಸಿದರು. ಭಾರತಕ್ಕೆ ಆಗ 4 ಎಸೆತಗಳಲ್ಲಿ 15 ರನ್ ಬೇಕಿತ್ತು.

19.3: ವಿರಾಟ್ ಕೊಹ್ಲಿ ಲಾಂಗ್ ಆನ್‌ನತ್ತ ಭಾರಿಸಿ ಎರಡು ರನ್ ಗಳಿಸಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 13 ರನ್ ಬೇಕಿತ್ತು.

19.4: ಫುಲ್ ಟಾಸ್ ಬಂದ ಬಾಲನ್ನು ಕೊಹ್ಲಿ ಲೈನ್ ಮತ್ತು ಡೀಪ್ ಸ್ಕ್ವೇರ್‌ ನಡುವೆ ಸಿಕ್ಸರ್ ಬಾರಿಸಿದರು. ಅದು ಹೈ ಪುಲ್ ಟಾಸ್ ಇದ್ದ ಕಾರಣ ಅಂಪೈರ್ ನೋಬಾಲ್ ಎಂದು ಘೋಷಿಸಿದರು.  ಅಲ್ಲಿಗೆ ಪಂದ್ಯ ಭಾರತದ ಕಡೆ ವಾಲಿತು. ಭಾರತಕ್ಕೆ ಆಗ 3 ಎಸೆತಗಳಲ್ಲಿ 6 ರನ್ ಬೇಕಿತ್ತು.

19.4- ಫ್ರಿ ಹಿಟ್: ನವಾಜ್ ಎಸೆದ ಬಾಲ್ ವೈಡ್ ಆಯಿತು. ಭಾರತಕ್ಕೆ ಒಂದು ರನ್ ಸಿಕ್ಕಿತು. ಪಾಕ್ ಆಟಗಾರರು ನೋಬಾಲ್ ಅಲ್ಲವೆಂದು ವಾದ ಮಾಡಿದರು. ಆದರೆ ಅಂಪೈರ್ ನೋಬಾಲ್ ನೀಡಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 5 ರನ್ ಬೇಕಿತ್ತು.

13.4 -ಫ್ರಿ ಹಿಟ್: ನವಾಜ್ ವೇಗದಲ್ಲಿ ಎಸೆದ ಬಾಲ್ ಕೊಹ್ಲಿಯನ್ನು ತಪ್ಪಿಸಿ ವಿಕೆಟ್‌ಗೆ ಬಡಿದು ಥರ್ಡ್ ಮ್ಯಾನ್ ಕಡೆಗೆ ಹೋದಾಗ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಚೆಂಡು ವಿಕೆಟ್‌ಗೆ ಬಡಿದ ಕಾರಣ ಬೈಸ್ ನೀಡಬಾರದೆಂದು ಪಾಕ್ ಆಟಗಾರರು ವಾದ ಮಾಡಿದರು. ಆದರೆ ಅಂಪೈರ್ ಬೈಸ್ ರನ್ ನೀಡಿದರು. ಭಾರತಕ್ಕೆ ಆಗ 2 ಎಸೆತಗಳಲ್ಲಿ 2 ರನ್ ಬೇಕಿತ್ತು.

13.5: ವೈಡ್ ಆಗುತ್ತಿದ್ದ ಬಾಲ್ ಆಡಿದ ದಿನೇಶ್ ಕಾರ್ತಿಕ್ ಸ್ಟಂಪ್ ಔಟ್ ಆದರು. ಅಲ್ಲಿಗೆ ಪಂದ್ಯ ಪಾಕ್ ಕಡೆಗೆ ವಾಲಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 2 ರನ್ ಬೇಕಿತ್ತು.

13.6: ನವಾಜ್ ವೈಡ್ ಮಾಡಿದರು. ಅಶ್ವಿನ್ ಬಾಲ್ ಮುಟ್ಟಲಿಲ್ಲ. ಭಾರತಕ್ಕೆ ಎಕ್ಸ್ಟ್ರಾ ರೂಪದಲ್ಲಿ ಒಂದು ರನ್ ಸಿಕ್ಕಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 1 ರನ್ ಬೇಕಿತ್ತು.

13.6: ನವಾಜ್ ಎಸೆತವನ್ನು ಆರ್ ಅಶ್ವಿನ್ ಓವರ್ ಮಿಡ್ ಆಫ್ ಕಡೆ ಬಾರಿಸಿ ಒಂದು ರನ್ ಓಡಿದರು. ಅಲ್ಲಿಗೆ ಭಾರತ ತಂಡಕ್ಕೆ ನಾಲ್ಕು ವಿಕೆಟ್ ಜಯ ಲಭಿಸಿತು. ಅಶ್ವಿನ್ ಕುಣಿದು ಕುಪ್ಪಳಿಸಿದರೆ, ಮೈದಾನಕ್ಕೆ ನುಗ್ಗಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೊಹ್ಲಿಯನ್ನು ಭುಜದ ಮೇಲೆತ್ತಿ ಸಂಭ್ರಮಿಸಿದರು.

53 ಎಸೆತಗಳಲ್ಲಿ 06 ಬೌಂಡರಿ ಮತ್ತು 04 ಸಿಕ್ಸರ್ ಸೇರಿ 82 ರನ್ ಚಚ್ಚಿದ ವಿರಾಟ್ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತ ಕಂಡಿತು. ಆನಂತರ ಮಸೂದ್ (52) ಮತ್ತು ಇಫ್ತಿಕಾರ್ ಅಹ್ಮದ್‌ರವರ (51) ರನ್‌ಗಳ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಪೇರಿಸಿತ್ತು. ಭಾರತದ ಪರವಾಗಿ ಹಾರ್ದಿಕ್ ಪಾಂಡ್ಯ ಮತ್ತು ಅರ್ಶದೀಪ್ ಸಿಂಗ್ ತಲಾ ಮೂರು ವಿಕೆಟ್ ಪಡೆದರು.

ಆನಂತರ ಭಾರತವೂ ತಂಡವೂ ಸಹ ಆರಂಭಿಕ ಆಘಾತ ಕಂಡಿತು. 31 ರನ್ ಗಳಿಸುವಷ್ಟಲ್ಲಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಅಕ್ಸರ್ ಪಟೇಲ್ ಔಟ್ ಆಗಿ ಪೆವಿಲಿಯನ್ ಸೇರಿದ್ದರು. ಆನಂತರ ಜೊತೆಗೂಡಿದ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಜೊತೆಯಾಟ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು. ಪಾಕ್ ಪರವಾಗಿ ಹ್ಯಾರಿಸ್ ರೌಫ್ ಮತ್ತು ಮೊಹಮ್ಮದ್ ನವಾಜ್ ತಲಾ ಎರಡು ವಿಕೆಟ್ ಪಡೆದರು.

ಇದನ್ನೂ ಓದಿ: 2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...