Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು...

ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ ಪಾಕಿಸ್ತಾನನ ಎದುರಿನ ಪಂದ್ಯ ಹಲವಾರು ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಪಾಕ್ ನೀಡಿದ 160 ರನ್‌ಗಳ ಗುರಿಯನ್ನು ಭಾರತ ತಂಡ ಕೊನೆಯ ಎಸೆತದಲ್ಲಿ ಮುಟ್ಟಿತು. ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಶತಕದ ಜೊತೆಯಾಟದ ನೆರವಿನೊಂದಿಗೆ ಗೆಲುವಿನ ಪತಾಕೆ ಹಾರಿಸಿತು. ಕೊನೆಯ 8 ಎಸೆತಗಳಲ್ಲಿ 28 ರನ್ ಗಳಿಸಿದ ಭಾರತ ತಂಡ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಆ ಒಂದೊಂದು ಎಸೆತವು ಪಂದ್ಯದ ದಿಕ್ಕು ಬದಲಿಸುವಂತಿದ್ದವು. ಆ 8 ಎಸೆತಗಳ ನೋಟ ಇಲ್ಲಿದೆ.

18 ಓವರ್ ಮುಗಿದಾಗ ಭಾರತ ತಂಡ ನಾಲ್ಕು ವಿಕೆಟ್ ಕಳೆದುಕೊಂಡು 129 ರನ್ ಗಳಿಸಿತ್ತು. ಗೆಲುವಿಗೆ 12 ಎಸೆತಗಳಲ್ಲಿ 31 ಬೇಕಿತ್ತು. ಪಾಕ್ ಬೌಲರ್ ಹ್ಯಾರಿಸ್ ರೌಫ್ ಎಸೆದ 19ನೇ ಓವರ್‌ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಒಂದು ರನ್ ಗಳಿಸಿದರೆ ಮರು ಎಸೆತದಲ್ಲಿ ಕೊಹ್ಲಿ ಸಹ ಒಂದು ರನ್ ಗಳಿಸಿದರು. ಆದರೆ ಮೂರನೇ ಎಸೆತದಲ್ಲಿ ಹಾರ್ದಿಕ್ ರನ್ ಗಳಿಸದೆ ನಾಲ್ಕನೆ ಎಸೆತದಲ್ಲಿ 1 ರನ್ ಗಳಿಸಿದರು. ಆಗ ಭಾರತ 131 ರನ್ ಗಳಿಸಿತ್ತು. ಗೆಲುವಿಗೆ 8 ಎಸೆತಗಳಲ್ಲಿ 28 ರನ್ ಗಳಿಸಬೇಕಿತ್ತು. ಪಂದ್ಯ ಪಾಕ್‌ ಪರವಾಗಿತ್ತು. ಆನಂತರ ನಡೆದಿದ್ದು ಕೊಹ್ಲಿ ಆಟ. ಅದು ಹೀಗಿತ್ತು..

18.5: ಸ್ಲೊ ಬಾಲ್ ಅನ್ನು ವಿರಾಟ್ ಕೊಹ್ಲಿ ನೇರ ಸಿಕ್ಸ್‌ ಭಾರಿಸಿದರು.

18.6: ಫೈನ್‌ ಲೆಗ್‌ನಲ್ಲಿ ವಿರಾಟ್ ಕೊಹ್ಲಿ ಸಿಕ್ಸರ್ ಭಾರಿಸಿದರು. ಅಲ್ಲಿಗೆ ಕೊನೆಯ ಓವರ್‌ನಲ್ಲಿ 16 ರನ್ ಗಳಿಸಬೇಕಾಗಿತ್ತು.

19.1: ಸ್ಪಿನ್ ಬೌಲರ್ ಮೊಹಮ್ಮದ್ ನವಾಜ್ ಎಸೆತ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಬಾಬರ್ ಅಜಂಗೆ ಕ್ಯಾಚಿತ್ತು ಔಟಾದರು. ಭಾರತಕ್ಕೆ ಆಗ 5 ಎಸೆತಗಳಲ್ಲಿ 16 ರನ್ ಬೇಕಿತ್ತು.

19.2:  ಕ್ರಿಸ್‌ಗೆ ಬಂದಿದ್ದ ಹೊಸ ಬ್ಯಾಟರ್ ದಿನೇಶ್ ಕಾರ್ತಿಕ್ ಫುಲ್ ಟಾಸ್ ಬಾಲನ್ನು ಲಾಂಗ್‌ಆನ್‌ನತ್ತ ಬಾರಿಸಿ ಕೇವಲ ಒಂದು ರನ್ ಗಳಿಸಿದರು. ಭಾರತಕ್ಕೆ ಆಗ 4 ಎಸೆತಗಳಲ್ಲಿ 15 ರನ್ ಬೇಕಿತ್ತು.

19.3: ವಿರಾಟ್ ಕೊಹ್ಲಿ ಲಾಂಗ್ ಆನ್‌ನತ್ತ ಭಾರಿಸಿ ಎರಡು ರನ್ ಗಳಿಸಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 13 ರನ್ ಬೇಕಿತ್ತು.

19.4: ಫುಲ್ ಟಾಸ್ ಬಂದ ಬಾಲನ್ನು ಕೊಹ್ಲಿ ಲೈನ್ ಮತ್ತು ಡೀಪ್ ಸ್ಕ್ವೇರ್‌ ನಡುವೆ ಸಿಕ್ಸರ್ ಬಾರಿಸಿದರು. ಅದು ಹೈ ಪುಲ್ ಟಾಸ್ ಇದ್ದ ಕಾರಣ ಅಂಪೈರ್ ನೋಬಾಲ್ ಎಂದು ಘೋಷಿಸಿದರು.  ಅಲ್ಲಿಗೆ ಪಂದ್ಯ ಭಾರತದ ಕಡೆ ವಾಲಿತು. ಭಾರತಕ್ಕೆ ಆಗ 3 ಎಸೆತಗಳಲ್ಲಿ 6 ರನ್ ಬೇಕಿತ್ತು.

19.4- ಫ್ರಿ ಹಿಟ್: ನವಾಜ್ ಎಸೆದ ಬಾಲ್ ವೈಡ್ ಆಯಿತು. ಭಾರತಕ್ಕೆ ಒಂದು ರನ್ ಸಿಕ್ಕಿತು. ಪಾಕ್ ಆಟಗಾರರು ನೋಬಾಲ್ ಅಲ್ಲವೆಂದು ವಾದ ಮಾಡಿದರು. ಆದರೆ ಅಂಪೈರ್ ನೋಬಾಲ್ ನೀಡಿದರು. ಭಾರತಕ್ಕೆ ಆಗ 3 ಎಸೆತಗಳಲ್ಲಿ 5 ರನ್ ಬೇಕಿತ್ತು.

13.4 -ಫ್ರಿ ಹಿಟ್: ನವಾಜ್ ವೇಗದಲ್ಲಿ ಎಸೆದ ಬಾಲ್ ಕೊಹ್ಲಿಯನ್ನು ತಪ್ಪಿಸಿ ವಿಕೆಟ್‌ಗೆ ಬಡಿದು ಥರ್ಡ್ ಮ್ಯಾನ್ ಕಡೆಗೆ ಹೋದಾಗ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಚೆಂಡು ವಿಕೆಟ್‌ಗೆ ಬಡಿದ ಕಾರಣ ಬೈಸ್ ನೀಡಬಾರದೆಂದು ಪಾಕ್ ಆಟಗಾರರು ವಾದ ಮಾಡಿದರು. ಆದರೆ ಅಂಪೈರ್ ಬೈಸ್ ರನ್ ನೀಡಿದರು. ಭಾರತಕ್ಕೆ ಆಗ 2 ಎಸೆತಗಳಲ್ಲಿ 2 ರನ್ ಬೇಕಿತ್ತು.

13.5: ವೈಡ್ ಆಗುತ್ತಿದ್ದ ಬಾಲ್ ಆಡಿದ ದಿನೇಶ್ ಕಾರ್ತಿಕ್ ಸ್ಟಂಪ್ ಔಟ್ ಆದರು. ಅಲ್ಲಿಗೆ ಪಂದ್ಯ ಪಾಕ್ ಕಡೆಗೆ ವಾಲಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 2 ರನ್ ಬೇಕಿತ್ತು.

13.6: ನವಾಜ್ ವೈಡ್ ಮಾಡಿದರು. ಅಶ್ವಿನ್ ಬಾಲ್ ಮುಟ್ಟಲಿಲ್ಲ. ಭಾರತಕ್ಕೆ ಎಕ್ಸ್ಟ್ರಾ ರೂಪದಲ್ಲಿ ಒಂದು ರನ್ ಸಿಕ್ಕಿತು. ಭಾರತಕ್ಕೆ ಆಗ 1 ಎಸೆತಗಳಲ್ಲಿ 1 ರನ್ ಬೇಕಿತ್ತು.

13.6: ನವಾಜ್ ಎಸೆತವನ್ನು ಆರ್ ಅಶ್ವಿನ್ ಓವರ್ ಮಿಡ್ ಆಫ್ ಕಡೆ ಬಾರಿಸಿ ಒಂದು ರನ್ ಓಡಿದರು. ಅಲ್ಲಿಗೆ ಭಾರತ ತಂಡಕ್ಕೆ ನಾಲ್ಕು ವಿಕೆಟ್ ಜಯ ಲಭಿಸಿತು. ಅಶ್ವಿನ್ ಕುಣಿದು ಕುಪ್ಪಳಿಸಿದರೆ, ಮೈದಾನಕ್ಕೆ ನುಗ್ಗಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೊಹ್ಲಿಯನ್ನು ಭುಜದ ಮೇಲೆತ್ತಿ ಸಂಭ್ರಮಿಸಿದರು.

53 ಎಸೆತಗಳಲ್ಲಿ 06 ಬೌಂಡರಿ ಮತ್ತು 04 ಸಿಕ್ಸರ್ ಸೇರಿ 82 ರನ್ ಚಚ್ಚಿದ ವಿರಾಟ್ ಕೊಹ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತ ಕಂಡಿತು. ಆನಂತರ ಮಸೂದ್ (52) ಮತ್ತು ಇಫ್ತಿಕಾರ್ ಅಹ್ಮದ್‌ರವರ (51) ರನ್‌ಗಳ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಪೇರಿಸಿತ್ತು. ಭಾರತದ ಪರವಾಗಿ ಹಾರ್ದಿಕ್ ಪಾಂಡ್ಯ ಮತ್ತು ಅರ್ಶದೀಪ್ ಸಿಂಗ್ ತಲಾ ಮೂರು ವಿಕೆಟ್ ಪಡೆದರು.

ಆನಂತರ ಭಾರತವೂ ತಂಡವೂ ಸಹ ಆರಂಭಿಕ ಆಘಾತ ಕಂಡಿತು. 31 ರನ್ ಗಳಿಸುವಷ್ಟಲ್ಲಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಅಕ್ಸರ್ ಪಟೇಲ್ ಔಟ್ ಆಗಿ ಪೆವಿಲಿಯನ್ ಸೇರಿದ್ದರು. ಆನಂತರ ಜೊತೆಗೂಡಿದ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಜೊತೆಯಾಟ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು. ಪಾಕ್ ಪರವಾಗಿ ಹ್ಯಾರಿಸ್ ರೌಫ್ ಮತ್ತು ಮೊಹಮ್ಮದ್ ನವಾಜ್ ತಲಾ ಎರಡು ವಿಕೆಟ್ ಪಡೆದರು.

ಇದನ್ನೂ ಓದಿ: 2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...