Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

- Advertisement -
- Advertisement -

ಗುರುವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲುತ್ತಿದ್ದಂತೆ ತಂಡದ ಆಯ್ಕೆಯ ಬಗ್ಗೆಯೇ ಇದೀಗ ಅಪಸ್ವರ ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಸೇರಿದಂತೆ ಯಾವುದೇ ಪ್ರಮುಖ ಟೂರ್ನಿಗಳಲ್ಲಿ ಭಾರತ ಲೆಗ್ ಸ್ಪಿನ್ನರ್ ಇಲ್ಲದೆ ಕಣಕ್ಕೆ ಇಳಿಯುವುದೇ ಇಲ್ಲ. ಆದರೆ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಒಂದು ಪಂದ್ಯದಲ್ಲೂ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸದ ಬಗ್ಗೆ ಹಲವರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಫರೂಕ್ ಇಂಜಿನಿಯರ್, “ನಾನು ಭಾರತ ತಂಡದ ನಾಯಕನಾಗಿದ್ದರೆ ಖಚಿತವಾಗಿ ಎಲ್ಲ ಪಂದ್ಯದಲ್ಲೂ ಯಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುತ್ತಿದ್ದೆ. ಆದರೆ, ಆತನನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಲಾಯಿತೇ ವಿನಃ ಪ್ರಮುಖ ಪಂದ್ಯಗಳಲ್ಲಿ ಕೈಬಿಡಲಾಗಿತ್ತು. ಭಾರತದ ಸೋಲಿಗೆ ಪರಿಣತ ಲೆಗ್ ಸ್ಪಿನ್ನರ್ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲದೇ ಇದ್ದುದ್ದೇ ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯನ್ನೇ ಅಲ್ಲಗೆಳೆದಿರುವ ಅವರು, “ಯಜುವೇಂದ್ರ ಚಹಲ್ ಮತ್ತು ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಇಬ್ಬರೂ ಪ್ರತಿಭಾನ್ವಿತರು. ಈ ಹಿಂದೆ ಅನೇಕ ಪಂದ್ಯಗಳಲ್ಲಿ ಅವರು ತಮ್ಮ ವಿಕೆಟ್ ತೆಗೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಸಿಸಿಐ ಆಯ್ಕೆ ಮಂಡಳಿ ಈ ಇಬ್ಬರೂ ಬೌಲರ್‌ಗಳನ್ನು ಆಯ್ಕೆ ಮಾಡಬೇಕಿತ್ತು. ಕನಿಷ್ಟ ಒಬ್ಬರನ್ನಾದರೂ ಎಲ್ಲ ಪಂದ್ಯದಲ್ಲಿ ಕಣಕ್ಕಿಳಿಸಬೇಕಾಗಿತ್ತು. ಇಂತಹ ಪ್ರಮಾದಗಳಿಂದಲೇ ಇಂದು ಭಾರತ ತಂಡ ಸವಾಲೊಡ್ಡದೆ ಸೋಲೊಪ್ಪಲು ಕಾರಣವಾಗಿದೆ” ಎಂದು ಫಾರೂಕ್ ಇಂಜಿನಿಯರ್ ಅಸಮಾಧಾನ ಹೊರಹಾಕಿದ್ದಾರೆ.

ಅಶ್ವಿನ್ ಆಯ್ಕೆಯ ಬಗ್ಗೆಯೂ ಪ್ರಶ್ನೆ:

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪಾಲಿನ ಅನುಭವಿ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅವರು ಭಾರತದ ನೆಲದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದಾರೆ ವಿನಃ ವಿದೇಶಿ ನೆಲದಲ್ಲಿ ಅವರ ಸಾಧನೆ ಅಷ್ಟಕ್ಕಷ್ಟೆ. ಇದೇ ಕಾರಣಕ್ಕೆ ಈ ಹಿಂದೆ ಭಾರತ ತಂಡ ಹಲವು ವಿದೇಶಿ ಟೂರ್ನಿಗಳಿಗೆ ಅವರನ್ನು ಫಾರ್ಮ್‌ನಲ್ಲಿ ಇದ್ದಾಗ್ಯೂ ಆಯ್ಕೆ ಮಾಡದೆ ಕೈಬಿಟ್ಟ ಉದಾಹರಣೆಗಳಿವೆ.

ಇನ್ನೂ ಆಸ್ಟ್ರೇಲಿಯಾ ನೆಲದಲ್ಲಿ ಅಶ್ವಿನ್ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆರು ಪಂದ್ಯಗಳಲ್ಲಿ ಅವರ ಆರು ವಿಕೆಟ್‌ಗಳಲ್ಲಿ ಮೂರು ಜಿಂಬಾಬ್ವೆ ಪಂದ್ಯದಲ್ಲಿ ಬಂದಿವೆ. ಆದರೆ ಅವರ ಎಕಾನಮಿ 8.15 ಇದೆ. ಆದರೂ, ಅವರನ್ನು ಈ ವಿಶ್ವಕಪ್‌ಗೆ ಏಕೆ ಆಯ್ಕೆ ಮಾಡಲಾಯಿತು? ಎಂದು ಹಲವು ಹಿರಿಯ ಕ್ರಿಕೆಟಿಗರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಈ ನಡುವೆ ರವೀಂದ್ರ ಜಡೇಜ ಅನುಪಸ್ಥಿತಿಯ ಕಾರಣಕ್ಕೆ ಆಲ್‌ರೌಂಡರ್‌ ಕೋಟಾದ ಅಡಿಯಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನೂ ಸಹ ವಿಶ್ವಕಪ್‌ನ ಪಂದ್ಯಗಳಲ್ಲೂ ಕಣಕ್ಕಿಳಿಸಲಾಗಿತ್ತು. ಆದರೆ, ಅವರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ವಿಫಲರಾದರು. ಆದರೂ, ಸಹ ಸೆಮಿಫೈನಲ್ ಪಂದ್ಯದಲ್ಲಿ ಅವರನ್ನು ಏಕೆ ಆಡಿಸಲಾಯಿತು. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬಹುದಿತ್ತಲ್ಲ? ಎಂದೂ ಸಹ ಹಲವರು ಕಿಡಿಕಾರುತ್ತಿದ್ದಾರೆ.

ಹಿರಿಯ ಆಟಗಾರರಿಗೆ ಕೋಕ್

ಸದ್ಯಕ್ಕೆ 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣಿಟ್ಟಿದೆ. ಅದಕ್ಕಾಗಿ ಮುಂದಿನ ವರ್ಷದವರೆಗೆ ಸುಮಾರು 25 ಏಕದಿನ ಪಂದ್ಯಗಳನ್ನಾಡಲಿದೆ. ಆದರೆ ತೊಂದರೆ ಇರುವುದು 2024 ರ ಟಿ20 ವಿಶ್ವಕಪ್ ಆಗಿದೆ. ಆ ಸಮಯಕ್ಕೆ ಈ ಬಾರಿ ಆಡಿದ ಹಲವು ಆಟಗಾರರು ಇರುವುದಿಲ್ಲ ಎನ್ನಲಾಗುತ್ತಿದೆ.

2024ರ ವಿಶ್ವಕಪ್‌ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೂ ಆ ವೇಳೆಗೆ ಹಲವು ಹಿರಿಯ ಆಟಗಾರರಿಗೆ ಕೋಕ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಮುಖ್ಯವಾಗಿ ರೋಹಿತ್ ಶರ್ಮಾ, ಆರ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆ ಪಟ್ಟಿಯಲ್ಲಿದ್ದು ವಿರಾಟ್ ಕೊಹ್ಲಿಯವರನ್ನು ಸಹ ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಇನ್ನು ಭಾರತ ತಂಡದ ಆರಂಭಿಕ ಆಟಗಾರರಾಗಿ ಶುಭ್‌ಮನ್ ಗಿಲ್, ಪೃಥ್ವಿ ಶಾ ರನ್ನು ಹೆಚ್ಚು ಆಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಕಳಪೆ ಪ್ರದರ್ಶನ ನೀಡಿರುವ ಕೆ.ಎಲ್ ರಾಹುಲ್ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

ಪೈಪೋಟಿಯಿಲ್ಲದೆ ಸೋಲೊಪ್ಪಿಕೊಂಡ ಭಾರತ

ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 168ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಆದರೆ, ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಆಂಗ್ಲರು ಒಂದು ವಿಕೆಟ್ ಸಹ ನಷ್ಟವಿಲ್ಲದೆ ಕೇವಲ 16 ಓವರ್ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನಿಂದ ಭಾರತ ತಂಡ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...