Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

- Advertisement -
- Advertisement -

ಗುರುವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲುತ್ತಿದ್ದಂತೆ ತಂಡದ ಆಯ್ಕೆಯ ಬಗ್ಗೆಯೇ ಇದೀಗ ಅಪಸ್ವರ ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಸೇರಿದಂತೆ ಯಾವುದೇ ಪ್ರಮುಖ ಟೂರ್ನಿಗಳಲ್ಲಿ ಭಾರತ ಲೆಗ್ ಸ್ಪಿನ್ನರ್ ಇಲ್ಲದೆ ಕಣಕ್ಕೆ ಇಳಿಯುವುದೇ ಇಲ್ಲ. ಆದರೆ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಒಂದು ಪಂದ್ಯದಲ್ಲೂ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸದ ಬಗ್ಗೆ ಹಲವರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಫರೂಕ್ ಇಂಜಿನಿಯರ್, “ನಾನು ಭಾರತ ತಂಡದ ನಾಯಕನಾಗಿದ್ದರೆ ಖಚಿತವಾಗಿ ಎಲ್ಲ ಪಂದ್ಯದಲ್ಲೂ ಯಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುತ್ತಿದ್ದೆ. ಆದರೆ, ಆತನನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಲಾಯಿತೇ ವಿನಃ ಪ್ರಮುಖ ಪಂದ್ಯಗಳಲ್ಲಿ ಕೈಬಿಡಲಾಗಿತ್ತು. ಭಾರತದ ಸೋಲಿಗೆ ಪರಿಣತ ಲೆಗ್ ಸ್ಪಿನ್ನರ್ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲದೇ ಇದ್ದುದ್ದೇ ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯನ್ನೇ ಅಲ್ಲಗೆಳೆದಿರುವ ಅವರು, “ಯಜುವೇಂದ್ರ ಚಹಲ್ ಮತ್ತು ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಇಬ್ಬರೂ ಪ್ರತಿಭಾನ್ವಿತರು. ಈ ಹಿಂದೆ ಅನೇಕ ಪಂದ್ಯಗಳಲ್ಲಿ ಅವರು ತಮ್ಮ ವಿಕೆಟ್ ತೆಗೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಸಿಸಿಐ ಆಯ್ಕೆ ಮಂಡಳಿ ಈ ಇಬ್ಬರೂ ಬೌಲರ್‌ಗಳನ್ನು ಆಯ್ಕೆ ಮಾಡಬೇಕಿತ್ತು. ಕನಿಷ್ಟ ಒಬ್ಬರನ್ನಾದರೂ ಎಲ್ಲ ಪಂದ್ಯದಲ್ಲಿ ಕಣಕ್ಕಿಳಿಸಬೇಕಾಗಿತ್ತು. ಇಂತಹ ಪ್ರಮಾದಗಳಿಂದಲೇ ಇಂದು ಭಾರತ ತಂಡ ಸವಾಲೊಡ್ಡದೆ ಸೋಲೊಪ್ಪಲು ಕಾರಣವಾಗಿದೆ” ಎಂದು ಫಾರೂಕ್ ಇಂಜಿನಿಯರ್ ಅಸಮಾಧಾನ ಹೊರಹಾಕಿದ್ದಾರೆ.

ಅಶ್ವಿನ್ ಆಯ್ಕೆಯ ಬಗ್ಗೆಯೂ ಪ್ರಶ್ನೆ:

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪಾಲಿನ ಅನುಭವಿ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅವರು ಭಾರತದ ನೆಲದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದಾರೆ ವಿನಃ ವಿದೇಶಿ ನೆಲದಲ್ಲಿ ಅವರ ಸಾಧನೆ ಅಷ್ಟಕ್ಕಷ್ಟೆ. ಇದೇ ಕಾರಣಕ್ಕೆ ಈ ಹಿಂದೆ ಭಾರತ ತಂಡ ಹಲವು ವಿದೇಶಿ ಟೂರ್ನಿಗಳಿಗೆ ಅವರನ್ನು ಫಾರ್ಮ್‌ನಲ್ಲಿ ಇದ್ದಾಗ್ಯೂ ಆಯ್ಕೆ ಮಾಡದೆ ಕೈಬಿಟ್ಟ ಉದಾಹರಣೆಗಳಿವೆ.

ಇನ್ನೂ ಆಸ್ಟ್ರೇಲಿಯಾ ನೆಲದಲ್ಲಿ ಅಶ್ವಿನ್ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆರು ಪಂದ್ಯಗಳಲ್ಲಿ ಅವರ ಆರು ವಿಕೆಟ್‌ಗಳಲ್ಲಿ ಮೂರು ಜಿಂಬಾಬ್ವೆ ಪಂದ್ಯದಲ್ಲಿ ಬಂದಿವೆ. ಆದರೆ ಅವರ ಎಕಾನಮಿ 8.15 ಇದೆ. ಆದರೂ, ಅವರನ್ನು ಈ ವಿಶ್ವಕಪ್‌ಗೆ ಏಕೆ ಆಯ್ಕೆ ಮಾಡಲಾಯಿತು? ಎಂದು ಹಲವು ಹಿರಿಯ ಕ್ರಿಕೆಟಿಗರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಈ ನಡುವೆ ರವೀಂದ್ರ ಜಡೇಜ ಅನುಪಸ್ಥಿತಿಯ ಕಾರಣಕ್ಕೆ ಆಲ್‌ರೌಂಡರ್‌ ಕೋಟಾದ ಅಡಿಯಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನೂ ಸಹ ವಿಶ್ವಕಪ್‌ನ ಪಂದ್ಯಗಳಲ್ಲೂ ಕಣಕ್ಕಿಳಿಸಲಾಗಿತ್ತು. ಆದರೆ, ಅವರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ವಿಫಲರಾದರು. ಆದರೂ, ಸಹ ಸೆಮಿಫೈನಲ್ ಪಂದ್ಯದಲ್ಲಿ ಅವರನ್ನು ಏಕೆ ಆಡಿಸಲಾಯಿತು. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬಹುದಿತ್ತಲ್ಲ? ಎಂದೂ ಸಹ ಹಲವರು ಕಿಡಿಕಾರುತ್ತಿದ್ದಾರೆ.

ಹಿರಿಯ ಆಟಗಾರರಿಗೆ ಕೋಕ್

ಸದ್ಯಕ್ಕೆ 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣಿಟ್ಟಿದೆ. ಅದಕ್ಕಾಗಿ ಮುಂದಿನ ವರ್ಷದವರೆಗೆ ಸುಮಾರು 25 ಏಕದಿನ ಪಂದ್ಯಗಳನ್ನಾಡಲಿದೆ. ಆದರೆ ತೊಂದರೆ ಇರುವುದು 2024 ರ ಟಿ20 ವಿಶ್ವಕಪ್ ಆಗಿದೆ. ಆ ಸಮಯಕ್ಕೆ ಈ ಬಾರಿ ಆಡಿದ ಹಲವು ಆಟಗಾರರು ಇರುವುದಿಲ್ಲ ಎನ್ನಲಾಗುತ್ತಿದೆ.

2024ರ ವಿಶ್ವಕಪ್‌ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೂ ಆ ವೇಳೆಗೆ ಹಲವು ಹಿರಿಯ ಆಟಗಾರರಿಗೆ ಕೋಕ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಮುಖ್ಯವಾಗಿ ರೋಹಿತ್ ಶರ್ಮಾ, ಆರ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆ ಪಟ್ಟಿಯಲ್ಲಿದ್ದು ವಿರಾಟ್ ಕೊಹ್ಲಿಯವರನ್ನು ಸಹ ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಇನ್ನು ಭಾರತ ತಂಡದ ಆರಂಭಿಕ ಆಟಗಾರರಾಗಿ ಶುಭ್‌ಮನ್ ಗಿಲ್, ಪೃಥ್ವಿ ಶಾ ರನ್ನು ಹೆಚ್ಚು ಆಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಕಳಪೆ ಪ್ರದರ್ಶನ ನೀಡಿರುವ ಕೆ.ಎಲ್ ರಾಹುಲ್ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

ಪೈಪೋಟಿಯಿಲ್ಲದೆ ಸೋಲೊಪ್ಪಿಕೊಂಡ ಭಾರತ

ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 168ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಆದರೆ, ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಆಂಗ್ಲರು ಒಂದು ವಿಕೆಟ್ ಸಹ ನಷ್ಟವಿಲ್ಲದೆ ಕೇವಲ 16 ಓವರ್ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನಿಂದ ಭಾರತ ತಂಡ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...