Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

- Advertisement -
- Advertisement -

ಗುರುವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲುತ್ತಿದ್ದಂತೆ ತಂಡದ ಆಯ್ಕೆಯ ಬಗ್ಗೆಯೇ ಇದೀಗ ಅಪಸ್ವರ ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಸೇರಿದಂತೆ ಯಾವುದೇ ಪ್ರಮುಖ ಟೂರ್ನಿಗಳಲ್ಲಿ ಭಾರತ ಲೆಗ್ ಸ್ಪಿನ್ನರ್ ಇಲ್ಲದೆ ಕಣಕ್ಕೆ ಇಳಿಯುವುದೇ ಇಲ್ಲ. ಆದರೆ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಒಂದು ಪಂದ್ಯದಲ್ಲೂ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸದ ಬಗ್ಗೆ ಹಲವರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಫರೂಕ್ ಇಂಜಿನಿಯರ್, “ನಾನು ಭಾರತ ತಂಡದ ನಾಯಕನಾಗಿದ್ದರೆ ಖಚಿತವಾಗಿ ಎಲ್ಲ ಪಂದ್ಯದಲ್ಲೂ ಯಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುತ್ತಿದ್ದೆ. ಆದರೆ, ಆತನನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಲಾಯಿತೇ ವಿನಃ ಪ್ರಮುಖ ಪಂದ್ಯಗಳಲ್ಲಿ ಕೈಬಿಡಲಾಗಿತ್ತು. ಭಾರತದ ಸೋಲಿಗೆ ಪರಿಣತ ಲೆಗ್ ಸ್ಪಿನ್ನರ್ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲದೇ ಇದ್ದುದ್ದೇ ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯನ್ನೇ ಅಲ್ಲಗೆಳೆದಿರುವ ಅವರು, “ಯಜುವೇಂದ್ರ ಚಹಲ್ ಮತ್ತು ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಇಬ್ಬರೂ ಪ್ರತಿಭಾನ್ವಿತರು. ಈ ಹಿಂದೆ ಅನೇಕ ಪಂದ್ಯಗಳಲ್ಲಿ ಅವರು ತಮ್ಮ ವಿಕೆಟ್ ತೆಗೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಸಿಸಿಐ ಆಯ್ಕೆ ಮಂಡಳಿ ಈ ಇಬ್ಬರೂ ಬೌಲರ್‌ಗಳನ್ನು ಆಯ್ಕೆ ಮಾಡಬೇಕಿತ್ತು. ಕನಿಷ್ಟ ಒಬ್ಬರನ್ನಾದರೂ ಎಲ್ಲ ಪಂದ್ಯದಲ್ಲಿ ಕಣಕ್ಕಿಳಿಸಬೇಕಾಗಿತ್ತು. ಇಂತಹ ಪ್ರಮಾದಗಳಿಂದಲೇ ಇಂದು ಭಾರತ ತಂಡ ಸವಾಲೊಡ್ಡದೆ ಸೋಲೊಪ್ಪಲು ಕಾರಣವಾಗಿದೆ” ಎಂದು ಫಾರೂಕ್ ಇಂಜಿನಿಯರ್ ಅಸಮಾಧಾನ ಹೊರಹಾಕಿದ್ದಾರೆ.

ಅಶ್ವಿನ್ ಆಯ್ಕೆಯ ಬಗ್ಗೆಯೂ ಪ್ರಶ್ನೆ:

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪಾಲಿನ ಅನುಭವಿ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅವರು ಭಾರತದ ನೆಲದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದಾರೆ ವಿನಃ ವಿದೇಶಿ ನೆಲದಲ್ಲಿ ಅವರ ಸಾಧನೆ ಅಷ್ಟಕ್ಕಷ್ಟೆ. ಇದೇ ಕಾರಣಕ್ಕೆ ಈ ಹಿಂದೆ ಭಾರತ ತಂಡ ಹಲವು ವಿದೇಶಿ ಟೂರ್ನಿಗಳಿಗೆ ಅವರನ್ನು ಫಾರ್ಮ್‌ನಲ್ಲಿ ಇದ್ದಾಗ್ಯೂ ಆಯ್ಕೆ ಮಾಡದೆ ಕೈಬಿಟ್ಟ ಉದಾಹರಣೆಗಳಿವೆ.

ಇನ್ನೂ ಆಸ್ಟ್ರೇಲಿಯಾ ನೆಲದಲ್ಲಿ ಅಶ್ವಿನ್ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆರು ಪಂದ್ಯಗಳಲ್ಲಿ ಅವರ ಆರು ವಿಕೆಟ್‌ಗಳಲ್ಲಿ ಮೂರು ಜಿಂಬಾಬ್ವೆ ಪಂದ್ಯದಲ್ಲಿ ಬಂದಿವೆ. ಆದರೆ ಅವರ ಎಕಾನಮಿ 8.15 ಇದೆ. ಆದರೂ, ಅವರನ್ನು ಈ ವಿಶ್ವಕಪ್‌ಗೆ ಏಕೆ ಆಯ್ಕೆ ಮಾಡಲಾಯಿತು? ಎಂದು ಹಲವು ಹಿರಿಯ ಕ್ರಿಕೆಟಿಗರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಈ ನಡುವೆ ರವೀಂದ್ರ ಜಡೇಜ ಅನುಪಸ್ಥಿತಿಯ ಕಾರಣಕ್ಕೆ ಆಲ್‌ರೌಂಡರ್‌ ಕೋಟಾದ ಅಡಿಯಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನೂ ಸಹ ವಿಶ್ವಕಪ್‌ನ ಪಂದ್ಯಗಳಲ್ಲೂ ಕಣಕ್ಕಿಳಿಸಲಾಗಿತ್ತು. ಆದರೆ, ಅವರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ವಿಫಲರಾದರು. ಆದರೂ, ಸಹ ಸೆಮಿಫೈನಲ್ ಪಂದ್ಯದಲ್ಲಿ ಅವರನ್ನು ಏಕೆ ಆಡಿಸಲಾಯಿತು. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬಹುದಿತ್ತಲ್ಲ? ಎಂದೂ ಸಹ ಹಲವರು ಕಿಡಿಕಾರುತ್ತಿದ್ದಾರೆ.

ಹಿರಿಯ ಆಟಗಾರರಿಗೆ ಕೋಕ್

ಸದ್ಯಕ್ಕೆ 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣಿಟ್ಟಿದೆ. ಅದಕ್ಕಾಗಿ ಮುಂದಿನ ವರ್ಷದವರೆಗೆ ಸುಮಾರು 25 ಏಕದಿನ ಪಂದ್ಯಗಳನ್ನಾಡಲಿದೆ. ಆದರೆ ತೊಂದರೆ ಇರುವುದು 2024 ರ ಟಿ20 ವಿಶ್ವಕಪ್ ಆಗಿದೆ. ಆ ಸಮಯಕ್ಕೆ ಈ ಬಾರಿ ಆಡಿದ ಹಲವು ಆಟಗಾರರು ಇರುವುದಿಲ್ಲ ಎನ್ನಲಾಗುತ್ತಿದೆ.

2024ರ ವಿಶ್ವಕಪ್‌ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೂ ಆ ವೇಳೆಗೆ ಹಲವು ಹಿರಿಯ ಆಟಗಾರರಿಗೆ ಕೋಕ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಮುಖ್ಯವಾಗಿ ರೋಹಿತ್ ಶರ್ಮಾ, ಆರ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆ ಪಟ್ಟಿಯಲ್ಲಿದ್ದು ವಿರಾಟ್ ಕೊಹ್ಲಿಯವರನ್ನು ಸಹ ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಇನ್ನು ಭಾರತ ತಂಡದ ಆರಂಭಿಕ ಆಟಗಾರರಾಗಿ ಶುಭ್‌ಮನ್ ಗಿಲ್, ಪೃಥ್ವಿ ಶಾ ರನ್ನು ಹೆಚ್ಚು ಆಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಕಳಪೆ ಪ್ರದರ್ಶನ ನೀಡಿರುವ ಕೆ.ಎಲ್ ರಾಹುಲ್ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

ಪೈಪೋಟಿಯಿಲ್ಲದೆ ಸೋಲೊಪ್ಪಿಕೊಂಡ ಭಾರತ

ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 168ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಆದರೆ, ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಆಂಗ್ಲರು ಒಂದು ವಿಕೆಟ್ ಸಹ ನಷ್ಟವಿಲ್ಲದೆ ಕೇವಲ 16 ಓವರ್ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನಿಂದ ಭಾರತ ತಂಡ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...