Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

- Advertisement -
- Advertisement -

ಗುರುವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲುತ್ತಿದ್ದಂತೆ ತಂಡದ ಆಯ್ಕೆಯ ಬಗ್ಗೆಯೇ ಇದೀಗ ಅಪಸ್ವರ ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಸೇರಿದಂತೆ ಯಾವುದೇ ಪ್ರಮುಖ ಟೂರ್ನಿಗಳಲ್ಲಿ ಭಾರತ ಲೆಗ್ ಸ್ಪಿನ್ನರ್ ಇಲ್ಲದೆ ಕಣಕ್ಕೆ ಇಳಿಯುವುದೇ ಇಲ್ಲ. ಆದರೆ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಒಂದು ಪಂದ್ಯದಲ್ಲೂ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸದ ಬಗ್ಗೆ ಹಲವರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಫರೂಕ್ ಇಂಜಿನಿಯರ್, “ನಾನು ಭಾರತ ತಂಡದ ನಾಯಕನಾಗಿದ್ದರೆ ಖಚಿತವಾಗಿ ಎಲ್ಲ ಪಂದ್ಯದಲ್ಲೂ ಯಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುತ್ತಿದ್ದೆ. ಆದರೆ, ಆತನನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಲಾಯಿತೇ ವಿನಃ ಪ್ರಮುಖ ಪಂದ್ಯಗಳಲ್ಲಿ ಕೈಬಿಡಲಾಗಿತ್ತು. ಭಾರತದ ಸೋಲಿಗೆ ಪರಿಣತ ಲೆಗ್ ಸ್ಪಿನ್ನರ್ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲದೇ ಇದ್ದುದ್ದೇ ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯನ್ನೇ ಅಲ್ಲಗೆಳೆದಿರುವ ಅವರು, “ಯಜುವೇಂದ್ರ ಚಹಲ್ ಮತ್ತು ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಇಬ್ಬರೂ ಪ್ರತಿಭಾನ್ವಿತರು. ಈ ಹಿಂದೆ ಅನೇಕ ಪಂದ್ಯಗಳಲ್ಲಿ ಅವರು ತಮ್ಮ ವಿಕೆಟ್ ತೆಗೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಸಿಸಿಐ ಆಯ್ಕೆ ಮಂಡಳಿ ಈ ಇಬ್ಬರೂ ಬೌಲರ್‌ಗಳನ್ನು ಆಯ್ಕೆ ಮಾಡಬೇಕಿತ್ತು. ಕನಿಷ್ಟ ಒಬ್ಬರನ್ನಾದರೂ ಎಲ್ಲ ಪಂದ್ಯದಲ್ಲಿ ಕಣಕ್ಕಿಳಿಸಬೇಕಾಗಿತ್ತು. ಇಂತಹ ಪ್ರಮಾದಗಳಿಂದಲೇ ಇಂದು ಭಾರತ ತಂಡ ಸವಾಲೊಡ್ಡದೆ ಸೋಲೊಪ್ಪಲು ಕಾರಣವಾಗಿದೆ” ಎಂದು ಫಾರೂಕ್ ಇಂಜಿನಿಯರ್ ಅಸಮಾಧಾನ ಹೊರಹಾಕಿದ್ದಾರೆ.

ಅಶ್ವಿನ್ ಆಯ್ಕೆಯ ಬಗ್ಗೆಯೂ ಪ್ರಶ್ನೆ:

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪಾಲಿನ ಅನುಭವಿ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅವರು ಭಾರತದ ನೆಲದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದಾರೆ ವಿನಃ ವಿದೇಶಿ ನೆಲದಲ್ಲಿ ಅವರ ಸಾಧನೆ ಅಷ್ಟಕ್ಕಷ್ಟೆ. ಇದೇ ಕಾರಣಕ್ಕೆ ಈ ಹಿಂದೆ ಭಾರತ ತಂಡ ಹಲವು ವಿದೇಶಿ ಟೂರ್ನಿಗಳಿಗೆ ಅವರನ್ನು ಫಾರ್ಮ್‌ನಲ್ಲಿ ಇದ್ದಾಗ್ಯೂ ಆಯ್ಕೆ ಮಾಡದೆ ಕೈಬಿಟ್ಟ ಉದಾಹರಣೆಗಳಿವೆ.

ಇನ್ನೂ ಆಸ್ಟ್ರೇಲಿಯಾ ನೆಲದಲ್ಲಿ ಅಶ್ವಿನ್ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆರು ಪಂದ್ಯಗಳಲ್ಲಿ ಅವರ ಆರು ವಿಕೆಟ್‌ಗಳಲ್ಲಿ ಮೂರು ಜಿಂಬಾಬ್ವೆ ಪಂದ್ಯದಲ್ಲಿ ಬಂದಿವೆ. ಆದರೆ ಅವರ ಎಕಾನಮಿ 8.15 ಇದೆ. ಆದರೂ, ಅವರನ್ನು ಈ ವಿಶ್ವಕಪ್‌ಗೆ ಏಕೆ ಆಯ್ಕೆ ಮಾಡಲಾಯಿತು? ಎಂದು ಹಲವು ಹಿರಿಯ ಕ್ರಿಕೆಟಿಗರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಈ ನಡುವೆ ರವೀಂದ್ರ ಜಡೇಜ ಅನುಪಸ್ಥಿತಿಯ ಕಾರಣಕ್ಕೆ ಆಲ್‌ರೌಂಡರ್‌ ಕೋಟಾದ ಅಡಿಯಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನೂ ಸಹ ವಿಶ್ವಕಪ್‌ನ ಪಂದ್ಯಗಳಲ್ಲೂ ಕಣಕ್ಕಿಳಿಸಲಾಗಿತ್ತು. ಆದರೆ, ಅವರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ವಿಫಲರಾದರು. ಆದರೂ, ಸಹ ಸೆಮಿಫೈನಲ್ ಪಂದ್ಯದಲ್ಲಿ ಅವರನ್ನು ಏಕೆ ಆಡಿಸಲಾಯಿತು. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬಹುದಿತ್ತಲ್ಲ? ಎಂದೂ ಸಹ ಹಲವರು ಕಿಡಿಕಾರುತ್ತಿದ್ದಾರೆ.

ಹಿರಿಯ ಆಟಗಾರರಿಗೆ ಕೋಕ್

ಸದ್ಯಕ್ಕೆ 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣಿಟ್ಟಿದೆ. ಅದಕ್ಕಾಗಿ ಮುಂದಿನ ವರ್ಷದವರೆಗೆ ಸುಮಾರು 25 ಏಕದಿನ ಪಂದ್ಯಗಳನ್ನಾಡಲಿದೆ. ಆದರೆ ತೊಂದರೆ ಇರುವುದು 2024 ರ ಟಿ20 ವಿಶ್ವಕಪ್ ಆಗಿದೆ. ಆ ಸಮಯಕ್ಕೆ ಈ ಬಾರಿ ಆಡಿದ ಹಲವು ಆಟಗಾರರು ಇರುವುದಿಲ್ಲ ಎನ್ನಲಾಗುತ್ತಿದೆ.

2024ರ ವಿಶ್ವಕಪ್‌ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೂ ಆ ವೇಳೆಗೆ ಹಲವು ಹಿರಿಯ ಆಟಗಾರರಿಗೆ ಕೋಕ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಮುಖ್ಯವಾಗಿ ರೋಹಿತ್ ಶರ್ಮಾ, ಆರ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆ ಪಟ್ಟಿಯಲ್ಲಿದ್ದು ವಿರಾಟ್ ಕೊಹ್ಲಿಯವರನ್ನು ಸಹ ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಇನ್ನು ಭಾರತ ತಂಡದ ಆರಂಭಿಕ ಆಟಗಾರರಾಗಿ ಶುಭ್‌ಮನ್ ಗಿಲ್, ಪೃಥ್ವಿ ಶಾ ರನ್ನು ಹೆಚ್ಚು ಆಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಕಳಪೆ ಪ್ರದರ್ಶನ ನೀಡಿರುವ ಕೆ.ಎಲ್ ರಾಹುಲ್ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

ಪೈಪೋಟಿಯಿಲ್ಲದೆ ಸೋಲೊಪ್ಪಿಕೊಂಡ ಭಾರತ

ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 168ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಆದರೆ, ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಆಂಗ್ಲರು ಒಂದು ವಿಕೆಟ್ ಸಹ ನಷ್ಟವಿಲ್ಲದೆ ಕೇವಲ 16 ಓವರ್ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನಿಂದ ಭಾರತ ತಂಡ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...