Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 1ರಲ್ಲಿ ಶ್ರೀಲಂಕಾ ತಂಡದ ಎದುರು ಜಯ ಸಾಧಿಸಿದ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ತಂಡದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲಿ ಎಂದು ಕಾದು ಕುಳಿತಿದ್ದ ಅತಿಥೇಯ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಭಾರೀ ನಿರಾಸೆಯಾಗಿದೆ.

ಶ್ರೀಲಂಕಾ ನೀಡಿದ್ದ 142 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡ ತಿಣುಕಾಡಿ ಕೊನೆಯ ಓವರ್‌ನಲ್ಲಿ ತಲುಪಿತು. ಆ ಮೂಲಕ 4 ವಿಕೆಟ್‌ಗಳಿಂದ ಗೆದ್ದು ನಿಟ್ಟುಸಿರು ಬಿಟ್ಟಿತ್ತಲ್ಲದೇ ಸೆಮಿಫೈನಲ್ ಪ್ರವೇಶ ಪಡೆಯಿತು.

ಗ್ರೂಪ್ 1ರ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 7 ಅಂಕ ಪಡೆದಿವೆ. ಆದರ್ ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಸೆಮಿಗೆ ಅವಕಾಶ ಪಡೆದರೆ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಶುಕ್ರವಾರ ಆಫ್ಘಾನಿಸ್ಥಾನ ಎದುರಿನ ಭಾರೀ ಅಂತರದಲ್ಲಿ ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 4 ರನ್‌ ಗಳಿಂದ ಗೆದ್ದಿದ್ದು ಅದಕ್ಕೆ ಮುಳವಾಗಿ ಪರಿಣಮಿಸಿತು. ಆ ಪಂದ್ಯದಲ್ಲಿ ಆಫ್ಘಾನಿಸ್ತಾನ ಬೌಲರ್ ರಶೀದ್ ಖಾನ್ ಕೊನೆಯ ಹಂತದಲ್ಲಿ ಕೇವಲ 23 ಎಸೆತಗಳಲ್ಲಿ 48 ರನ್ ಚಚ್ಚಿ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದ್ದರು. ಆದರೆ ಕೊನೆಗೂ 4 ರನ್‌ನಿಂದ ಸೋಲಬೇಕಾಗಿತ್ತು. ಈಗಾಗಿ ಪಂದ್ಯ ಗೆದ್ದರೂ ಆಸ್ಟ್ರೇಲಿಯಾದ ನೆಟ್ ರನ್‌ ರೇಟ್ ಏರಿಕೆಯಾಗಲಿಲ್ಲ.

ಇಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ಗೆಲುವು ಸಾಧಿಸಿದ್ದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳು ಟೂರ್ನಿಯಿಂದ ಹೊರಬೀಳುತ್ತಿದ್ದವು. 7 ಅಂಕ ಗಳಿಸಿದ್ದ ಆಸ್ಟ್ರೇಲಿಯಾಗೆ ವರದಾನವಾಗುತ್ತಿತ್ತು. ಆದರೆ ಅದಕ್ಕೆ ಇಂಗ್ಲೆಂಡ್ ಆಟಗಾರರು ಅವಕಾಶ ಮಾಡಿಕೊಡದೆ ಗೆಲುವಿನ ಮೂಲಕ ಸೆಮಿಫೈನಲ್ ತಲುಪಿದ್ದಾರೆ.

ಇನ್ನು 2ನೇ ಗುಂಪಿನಲ್ಲಿ ಸೆಮಿಫೈನಲ್‌ ಪ್ರವೇಶಕ್ಕಾಗಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಭಾರತದ ಸಾಧ್ಯತೆಗಳು

ಭಾರತವು ತನ್ನ ಕೊನೆಯ ಪಂದ್ಯವನ್ನು ಜಿಂಬಾಬ್ವೆ ತಂಡದ ಎದುರು ನವೆಂಬರ್ 6 ರಂದು ಎದುರಿಸಲಿದೆ. ಆ ಪಂದ್ಯದಲ್ಲಿ ಭಾರತ ಗೆದ್ದಲ್ಲಿ ಒಟ್ಟು 08 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತ ಸೋತರೂ ಕೂಡ ಅದೇ ದಿನ ನಡೆಯುವ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತರೆ ಭಾರತಕ್ಕೆ ಅವಕಾಶವಿದೆ. ಒಂದು ವೇಳೆ ಭಾರತ ಸೋತು, ದಕ್ಷಿಣ ಆಫ್ರಿಕಾ ತಂಡ ಗೆದ್ದಲ್ಲಿ ಬಾಂಗ್ಲಾದೇಶ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕಡಿಮೆ ಅಂತರದಿಂದ ಸೋಲಿಸಬೇಕೆಂದು ಭಾರತ ಪ್ರಾರ್ಥಿಸಬೇಕಿರುತ್ತದೆ. ಆಗ ನೆಟ್ ರನ್ ರೇಟ್ ಆಧಾರದಲ್ಲಿ ಬಾಂಗ್ಲಾದೇಶಕ್ಕಿಂತ ಹೆಚ್ಚಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಸೆಮಿಫೈನಲ್ ತಲುಪಬಹುದು.

ದಕ್ಷಿಣ ಆಫ್ರಿಕಾ:

4 ಪಂದ್ಯಗಳಿಂದ 5 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಗೆಲ್ಲಲೇಬೇಕಿದೆ. ಅಲ್ಲಿ ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಅಂತಹ ಸಂದರ್ಭದಲ್ಲಿ ಕೊನೆಯ ಆಸೆಯಾಗಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪಂದ್ಯ ಮಳೆಯ ಕಾರಣಕ್ಕೆ ರದ್ದಾದರೆ ರನ್ ರೇಟ್ ಆಧಾರದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.

ಪಾಕಿಸ್ತಾನ:

ಪಾಕಿಸ್ತಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಎದುರು ಸೋಲುವುದನ್ನು ಕಾಯಬೇಕಿದೆ. ಅಲ್ಲದೆ ಭಾರತವು ಜಿಂಬಾಬ್ವೆ ವಿರುದ್ಧ ಸೋತಲ್ಲಿ ನೆಟ್ ರನ್ ರೇಟ್ ಆಧಾರದಲ್ಲಿ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಬಹುದಾಗಿದೆ.

ಬಾಂಗ್ಲಾದೇಶ

ಗ್ರೂಪ್ ಎರಡರಲ್ಲಿ ಅತಿ ಕೆಟ್ಟ ನೆಟ್ ರನ್ ರೇಟ್ ಹೊಂದಿರುವ ಬಾಂಗ್ಲಾದೇಶದ ಸೆಮಿಫೈನಲ್ ಪ್ರವೇಶ ತೀರಾ ಕಠಿಣವಾಗಿದೆ. ಪಾಕಿಸ್ತಾನದ ವಿರುದ್ಧ ದೊಡ್ಡ ಅಂತರದಲ್ಲಿ ಬಾಂಗ್ಲಾದೇಶ ಗೆದ್ದು ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತಲ್ಲಿ ಭಾರತದ ಜೊತೆಗೆ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಅವಕಾಶ ತೆರೆದುಕೊಳ್ಳುತ್ತದೆ.

ಜಿಂಬಾಬ್ವೆ ಮತ್ತು ನೆದರ್ಲೆಂಡ್ಸ್ ತಂಡಗಳು ಹೆಚ್ಚಿನ ಸೋಲು ಕಂಡಿರುವ ಕಾರಣ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿವೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...