Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 1ರಲ್ಲಿ ಶ್ರೀಲಂಕಾ ತಂಡದ ಎದುರು ಜಯ ಸಾಧಿಸಿದ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ತಂಡದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲಿ ಎಂದು ಕಾದು ಕುಳಿತಿದ್ದ ಅತಿಥೇಯ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಭಾರೀ ನಿರಾಸೆಯಾಗಿದೆ.

ಶ್ರೀಲಂಕಾ ನೀಡಿದ್ದ 142 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡ ತಿಣುಕಾಡಿ ಕೊನೆಯ ಓವರ್‌ನಲ್ಲಿ ತಲುಪಿತು. ಆ ಮೂಲಕ 4 ವಿಕೆಟ್‌ಗಳಿಂದ ಗೆದ್ದು ನಿಟ್ಟುಸಿರು ಬಿಟ್ಟಿತ್ತಲ್ಲದೇ ಸೆಮಿಫೈನಲ್ ಪ್ರವೇಶ ಪಡೆಯಿತು.

ಗ್ರೂಪ್ 1ರ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 7 ಅಂಕ ಪಡೆದಿವೆ. ಆದರ್ ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಸೆಮಿಗೆ ಅವಕಾಶ ಪಡೆದರೆ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಶುಕ್ರವಾರ ಆಫ್ಘಾನಿಸ್ಥಾನ ಎದುರಿನ ಭಾರೀ ಅಂತರದಲ್ಲಿ ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 4 ರನ್‌ ಗಳಿಂದ ಗೆದ್ದಿದ್ದು ಅದಕ್ಕೆ ಮುಳವಾಗಿ ಪರಿಣಮಿಸಿತು. ಆ ಪಂದ್ಯದಲ್ಲಿ ಆಫ್ಘಾನಿಸ್ತಾನ ಬೌಲರ್ ರಶೀದ್ ಖಾನ್ ಕೊನೆಯ ಹಂತದಲ್ಲಿ ಕೇವಲ 23 ಎಸೆತಗಳಲ್ಲಿ 48 ರನ್ ಚಚ್ಚಿ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದ್ದರು. ಆದರೆ ಕೊನೆಗೂ 4 ರನ್‌ನಿಂದ ಸೋಲಬೇಕಾಗಿತ್ತು. ಈಗಾಗಿ ಪಂದ್ಯ ಗೆದ್ದರೂ ಆಸ್ಟ್ರೇಲಿಯಾದ ನೆಟ್ ರನ್‌ ರೇಟ್ ಏರಿಕೆಯಾಗಲಿಲ್ಲ.

ಇಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ಗೆಲುವು ಸಾಧಿಸಿದ್ದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳು ಟೂರ್ನಿಯಿಂದ ಹೊರಬೀಳುತ್ತಿದ್ದವು. 7 ಅಂಕ ಗಳಿಸಿದ್ದ ಆಸ್ಟ್ರೇಲಿಯಾಗೆ ವರದಾನವಾಗುತ್ತಿತ್ತು. ಆದರೆ ಅದಕ್ಕೆ ಇಂಗ್ಲೆಂಡ್ ಆಟಗಾರರು ಅವಕಾಶ ಮಾಡಿಕೊಡದೆ ಗೆಲುವಿನ ಮೂಲಕ ಸೆಮಿಫೈನಲ್ ತಲುಪಿದ್ದಾರೆ.

ಇನ್ನು 2ನೇ ಗುಂಪಿನಲ್ಲಿ ಸೆಮಿಫೈನಲ್‌ ಪ್ರವೇಶಕ್ಕಾಗಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಭಾರತದ ಸಾಧ್ಯತೆಗಳು

ಭಾರತವು ತನ್ನ ಕೊನೆಯ ಪಂದ್ಯವನ್ನು ಜಿಂಬಾಬ್ವೆ ತಂಡದ ಎದುರು ನವೆಂಬರ್ 6 ರಂದು ಎದುರಿಸಲಿದೆ. ಆ ಪಂದ್ಯದಲ್ಲಿ ಭಾರತ ಗೆದ್ದಲ್ಲಿ ಒಟ್ಟು 08 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತ ಸೋತರೂ ಕೂಡ ಅದೇ ದಿನ ನಡೆಯುವ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತರೆ ಭಾರತಕ್ಕೆ ಅವಕಾಶವಿದೆ. ಒಂದು ವೇಳೆ ಭಾರತ ಸೋತು, ದಕ್ಷಿಣ ಆಫ್ರಿಕಾ ತಂಡ ಗೆದ್ದಲ್ಲಿ ಬಾಂಗ್ಲಾದೇಶ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕಡಿಮೆ ಅಂತರದಿಂದ ಸೋಲಿಸಬೇಕೆಂದು ಭಾರತ ಪ್ರಾರ್ಥಿಸಬೇಕಿರುತ್ತದೆ. ಆಗ ನೆಟ್ ರನ್ ರೇಟ್ ಆಧಾರದಲ್ಲಿ ಬಾಂಗ್ಲಾದೇಶಕ್ಕಿಂತ ಹೆಚ್ಚಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಸೆಮಿಫೈನಲ್ ತಲುಪಬಹುದು.

ದಕ್ಷಿಣ ಆಫ್ರಿಕಾ:

4 ಪಂದ್ಯಗಳಿಂದ 5 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಗೆಲ್ಲಲೇಬೇಕಿದೆ. ಅಲ್ಲಿ ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಅಂತಹ ಸಂದರ್ಭದಲ್ಲಿ ಕೊನೆಯ ಆಸೆಯಾಗಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪಂದ್ಯ ಮಳೆಯ ಕಾರಣಕ್ಕೆ ರದ್ದಾದರೆ ರನ್ ರೇಟ್ ಆಧಾರದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.

ಪಾಕಿಸ್ತಾನ:

ಪಾಕಿಸ್ತಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಎದುರು ಸೋಲುವುದನ್ನು ಕಾಯಬೇಕಿದೆ. ಅಲ್ಲದೆ ಭಾರತವು ಜಿಂಬಾಬ್ವೆ ವಿರುದ್ಧ ಸೋತಲ್ಲಿ ನೆಟ್ ರನ್ ರೇಟ್ ಆಧಾರದಲ್ಲಿ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಬಹುದಾಗಿದೆ.

ಬಾಂಗ್ಲಾದೇಶ

ಗ್ರೂಪ್ ಎರಡರಲ್ಲಿ ಅತಿ ಕೆಟ್ಟ ನೆಟ್ ರನ್ ರೇಟ್ ಹೊಂದಿರುವ ಬಾಂಗ್ಲಾದೇಶದ ಸೆಮಿಫೈನಲ್ ಪ್ರವೇಶ ತೀರಾ ಕಠಿಣವಾಗಿದೆ. ಪಾಕಿಸ್ತಾನದ ವಿರುದ್ಧ ದೊಡ್ಡ ಅಂತರದಲ್ಲಿ ಬಾಂಗ್ಲಾದೇಶ ಗೆದ್ದು ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತಲ್ಲಿ ಭಾರತದ ಜೊತೆಗೆ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಅವಕಾಶ ತೆರೆದುಕೊಳ್ಳುತ್ತದೆ.

ಜಿಂಬಾಬ್ವೆ ಮತ್ತು ನೆದರ್ಲೆಂಡ್ಸ್ ತಂಡಗಳು ಹೆಚ್ಚಿನ ಸೋಲು ಕಂಡಿರುವ ಕಾರಣ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿವೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ...

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...