Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 1ರಲ್ಲಿ ಶ್ರೀಲಂಕಾ ತಂಡದ ಎದುರು ಜಯ ಸಾಧಿಸಿದ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ತಂಡದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲಿ ಎಂದು ಕಾದು ಕುಳಿತಿದ್ದ ಅತಿಥೇಯ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಭಾರೀ ನಿರಾಸೆಯಾಗಿದೆ.

ಶ್ರೀಲಂಕಾ ನೀಡಿದ್ದ 142 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡ ತಿಣುಕಾಡಿ ಕೊನೆಯ ಓವರ್‌ನಲ್ಲಿ ತಲುಪಿತು. ಆ ಮೂಲಕ 4 ವಿಕೆಟ್‌ಗಳಿಂದ ಗೆದ್ದು ನಿಟ್ಟುಸಿರು ಬಿಟ್ಟಿತ್ತಲ್ಲದೇ ಸೆಮಿಫೈನಲ್ ಪ್ರವೇಶ ಪಡೆಯಿತು.

ಗ್ರೂಪ್ 1ರ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 7 ಅಂಕ ಪಡೆದಿವೆ. ಆದರ್ ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಸೆಮಿಗೆ ಅವಕಾಶ ಪಡೆದರೆ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಶುಕ್ರವಾರ ಆಫ್ಘಾನಿಸ್ಥಾನ ಎದುರಿನ ಭಾರೀ ಅಂತರದಲ್ಲಿ ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 4 ರನ್‌ ಗಳಿಂದ ಗೆದ್ದಿದ್ದು ಅದಕ್ಕೆ ಮುಳವಾಗಿ ಪರಿಣಮಿಸಿತು. ಆ ಪಂದ್ಯದಲ್ಲಿ ಆಫ್ಘಾನಿಸ್ತಾನ ಬೌಲರ್ ರಶೀದ್ ಖಾನ್ ಕೊನೆಯ ಹಂತದಲ್ಲಿ ಕೇವಲ 23 ಎಸೆತಗಳಲ್ಲಿ 48 ರನ್ ಚಚ್ಚಿ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದ್ದರು. ಆದರೆ ಕೊನೆಗೂ 4 ರನ್‌ನಿಂದ ಸೋಲಬೇಕಾಗಿತ್ತು. ಈಗಾಗಿ ಪಂದ್ಯ ಗೆದ್ದರೂ ಆಸ್ಟ್ರೇಲಿಯಾದ ನೆಟ್ ರನ್‌ ರೇಟ್ ಏರಿಕೆಯಾಗಲಿಲ್ಲ.

ಇಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ಗೆಲುವು ಸಾಧಿಸಿದ್ದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳು ಟೂರ್ನಿಯಿಂದ ಹೊರಬೀಳುತ್ತಿದ್ದವು. 7 ಅಂಕ ಗಳಿಸಿದ್ದ ಆಸ್ಟ್ರೇಲಿಯಾಗೆ ವರದಾನವಾಗುತ್ತಿತ್ತು. ಆದರೆ ಅದಕ್ಕೆ ಇಂಗ್ಲೆಂಡ್ ಆಟಗಾರರು ಅವಕಾಶ ಮಾಡಿಕೊಡದೆ ಗೆಲುವಿನ ಮೂಲಕ ಸೆಮಿಫೈನಲ್ ತಲುಪಿದ್ದಾರೆ.

ಇನ್ನು 2ನೇ ಗುಂಪಿನಲ್ಲಿ ಸೆಮಿಫೈನಲ್‌ ಪ್ರವೇಶಕ್ಕಾಗಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಭಾರತದ ಸಾಧ್ಯತೆಗಳು

ಭಾರತವು ತನ್ನ ಕೊನೆಯ ಪಂದ್ಯವನ್ನು ಜಿಂಬಾಬ್ವೆ ತಂಡದ ಎದುರು ನವೆಂಬರ್ 6 ರಂದು ಎದುರಿಸಲಿದೆ. ಆ ಪಂದ್ಯದಲ್ಲಿ ಭಾರತ ಗೆದ್ದಲ್ಲಿ ಒಟ್ಟು 08 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತ ಸೋತರೂ ಕೂಡ ಅದೇ ದಿನ ನಡೆಯುವ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತರೆ ಭಾರತಕ್ಕೆ ಅವಕಾಶವಿದೆ. ಒಂದು ವೇಳೆ ಭಾರತ ಸೋತು, ದಕ್ಷಿಣ ಆಫ್ರಿಕಾ ತಂಡ ಗೆದ್ದಲ್ಲಿ ಬಾಂಗ್ಲಾದೇಶ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕಡಿಮೆ ಅಂತರದಿಂದ ಸೋಲಿಸಬೇಕೆಂದು ಭಾರತ ಪ್ರಾರ್ಥಿಸಬೇಕಿರುತ್ತದೆ. ಆಗ ನೆಟ್ ರನ್ ರೇಟ್ ಆಧಾರದಲ್ಲಿ ಬಾಂಗ್ಲಾದೇಶಕ್ಕಿಂತ ಹೆಚ್ಚಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಸೆಮಿಫೈನಲ್ ತಲುಪಬಹುದು.

ದಕ್ಷಿಣ ಆಫ್ರಿಕಾ:

4 ಪಂದ್ಯಗಳಿಂದ 5 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಗೆಲ್ಲಲೇಬೇಕಿದೆ. ಅಲ್ಲಿ ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಅಂತಹ ಸಂದರ್ಭದಲ್ಲಿ ಕೊನೆಯ ಆಸೆಯಾಗಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪಂದ್ಯ ಮಳೆಯ ಕಾರಣಕ್ಕೆ ರದ್ದಾದರೆ ರನ್ ರೇಟ್ ಆಧಾರದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.

ಪಾಕಿಸ್ತಾನ:

ಪಾಕಿಸ್ತಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಎದುರು ಸೋಲುವುದನ್ನು ಕಾಯಬೇಕಿದೆ. ಅಲ್ಲದೆ ಭಾರತವು ಜಿಂಬಾಬ್ವೆ ವಿರುದ್ಧ ಸೋತಲ್ಲಿ ನೆಟ್ ರನ್ ರೇಟ್ ಆಧಾರದಲ್ಲಿ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಬಹುದಾಗಿದೆ.

ಬಾಂಗ್ಲಾದೇಶ

ಗ್ರೂಪ್ ಎರಡರಲ್ಲಿ ಅತಿ ಕೆಟ್ಟ ನೆಟ್ ರನ್ ರೇಟ್ ಹೊಂದಿರುವ ಬಾಂಗ್ಲಾದೇಶದ ಸೆಮಿಫೈನಲ್ ಪ್ರವೇಶ ತೀರಾ ಕಠಿಣವಾಗಿದೆ. ಪಾಕಿಸ್ತಾನದ ವಿರುದ್ಧ ದೊಡ್ಡ ಅಂತರದಲ್ಲಿ ಬಾಂಗ್ಲಾದೇಶ ಗೆದ್ದು ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತಲ್ಲಿ ಭಾರತದ ಜೊತೆಗೆ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಅವಕಾಶ ತೆರೆದುಕೊಳ್ಳುತ್ತದೆ.

ಜಿಂಬಾಬ್ವೆ ಮತ್ತು ನೆದರ್ಲೆಂಡ್ಸ್ ತಂಡಗಳು ಹೆಚ್ಚಿನ ಸೋಲು ಕಂಡಿರುವ ಕಾರಣ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿವೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...