Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 1ರಲ್ಲಿ ಶ್ರೀಲಂಕಾ ತಂಡದ ಎದುರು ಜಯ ಸಾಧಿಸಿದ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ತಂಡದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲಿ ಎಂದು ಕಾದು ಕುಳಿತಿದ್ದ ಅತಿಥೇಯ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಭಾರೀ ನಿರಾಸೆಯಾಗಿದೆ.

ಶ್ರೀಲಂಕಾ ನೀಡಿದ್ದ 142 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡ ತಿಣುಕಾಡಿ ಕೊನೆಯ ಓವರ್‌ನಲ್ಲಿ ತಲುಪಿತು. ಆ ಮೂಲಕ 4 ವಿಕೆಟ್‌ಗಳಿಂದ ಗೆದ್ದು ನಿಟ್ಟುಸಿರು ಬಿಟ್ಟಿತ್ತಲ್ಲದೇ ಸೆಮಿಫೈನಲ್ ಪ್ರವೇಶ ಪಡೆಯಿತು.

ಗ್ರೂಪ್ 1ರ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 7 ಅಂಕ ಪಡೆದಿವೆ. ಆದರ್ ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಸೆಮಿಗೆ ಅವಕಾಶ ಪಡೆದರೆ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಶುಕ್ರವಾರ ಆಫ್ಘಾನಿಸ್ಥಾನ ಎದುರಿನ ಭಾರೀ ಅಂತರದಲ್ಲಿ ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 4 ರನ್‌ ಗಳಿಂದ ಗೆದ್ದಿದ್ದು ಅದಕ್ಕೆ ಮುಳವಾಗಿ ಪರಿಣಮಿಸಿತು. ಆ ಪಂದ್ಯದಲ್ಲಿ ಆಫ್ಘಾನಿಸ್ತಾನ ಬೌಲರ್ ರಶೀದ್ ಖಾನ್ ಕೊನೆಯ ಹಂತದಲ್ಲಿ ಕೇವಲ 23 ಎಸೆತಗಳಲ್ಲಿ 48 ರನ್ ಚಚ್ಚಿ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದ್ದರು. ಆದರೆ ಕೊನೆಗೂ 4 ರನ್‌ನಿಂದ ಸೋಲಬೇಕಾಗಿತ್ತು. ಈಗಾಗಿ ಪಂದ್ಯ ಗೆದ್ದರೂ ಆಸ್ಟ್ರೇಲಿಯಾದ ನೆಟ್ ರನ್‌ ರೇಟ್ ಏರಿಕೆಯಾಗಲಿಲ್ಲ.

ಇಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ಗೆಲುವು ಸಾಧಿಸಿದ್ದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳು ಟೂರ್ನಿಯಿಂದ ಹೊರಬೀಳುತ್ತಿದ್ದವು. 7 ಅಂಕ ಗಳಿಸಿದ್ದ ಆಸ್ಟ್ರೇಲಿಯಾಗೆ ವರದಾನವಾಗುತ್ತಿತ್ತು. ಆದರೆ ಅದಕ್ಕೆ ಇಂಗ್ಲೆಂಡ್ ಆಟಗಾರರು ಅವಕಾಶ ಮಾಡಿಕೊಡದೆ ಗೆಲುವಿನ ಮೂಲಕ ಸೆಮಿಫೈನಲ್ ತಲುಪಿದ್ದಾರೆ.

ಇನ್ನು 2ನೇ ಗುಂಪಿನಲ್ಲಿ ಸೆಮಿಫೈನಲ್‌ ಪ್ರವೇಶಕ್ಕಾಗಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಭಾರತದ ಸಾಧ್ಯತೆಗಳು

ಭಾರತವು ತನ್ನ ಕೊನೆಯ ಪಂದ್ಯವನ್ನು ಜಿಂಬಾಬ್ವೆ ತಂಡದ ಎದುರು ನವೆಂಬರ್ 6 ರಂದು ಎದುರಿಸಲಿದೆ. ಆ ಪಂದ್ಯದಲ್ಲಿ ಭಾರತ ಗೆದ್ದಲ್ಲಿ ಒಟ್ಟು 08 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತ ಸೋತರೂ ಕೂಡ ಅದೇ ದಿನ ನಡೆಯುವ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತರೆ ಭಾರತಕ್ಕೆ ಅವಕಾಶವಿದೆ. ಒಂದು ವೇಳೆ ಭಾರತ ಸೋತು, ದಕ್ಷಿಣ ಆಫ್ರಿಕಾ ತಂಡ ಗೆದ್ದಲ್ಲಿ ಬಾಂಗ್ಲಾದೇಶ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕಡಿಮೆ ಅಂತರದಿಂದ ಸೋಲಿಸಬೇಕೆಂದು ಭಾರತ ಪ್ರಾರ್ಥಿಸಬೇಕಿರುತ್ತದೆ. ಆಗ ನೆಟ್ ರನ್ ರೇಟ್ ಆಧಾರದಲ್ಲಿ ಬಾಂಗ್ಲಾದೇಶಕ್ಕಿಂತ ಹೆಚ್ಚಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಸೆಮಿಫೈನಲ್ ತಲುಪಬಹುದು.

ದಕ್ಷಿಣ ಆಫ್ರಿಕಾ:

4 ಪಂದ್ಯಗಳಿಂದ 5 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಗೆಲ್ಲಲೇಬೇಕಿದೆ. ಅಲ್ಲಿ ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಅಂತಹ ಸಂದರ್ಭದಲ್ಲಿ ಕೊನೆಯ ಆಸೆಯಾಗಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪಂದ್ಯ ಮಳೆಯ ಕಾರಣಕ್ಕೆ ರದ್ದಾದರೆ ರನ್ ರೇಟ್ ಆಧಾರದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.

ಪಾಕಿಸ್ತಾನ:

ಪಾಕಿಸ್ತಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಎದುರು ಸೋಲುವುದನ್ನು ಕಾಯಬೇಕಿದೆ. ಅಲ್ಲದೆ ಭಾರತವು ಜಿಂಬಾಬ್ವೆ ವಿರುದ್ಧ ಸೋತಲ್ಲಿ ನೆಟ್ ರನ್ ರೇಟ್ ಆಧಾರದಲ್ಲಿ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಬಹುದಾಗಿದೆ.

ಬಾಂಗ್ಲಾದೇಶ

ಗ್ರೂಪ್ ಎರಡರಲ್ಲಿ ಅತಿ ಕೆಟ್ಟ ನೆಟ್ ರನ್ ರೇಟ್ ಹೊಂದಿರುವ ಬಾಂಗ್ಲಾದೇಶದ ಸೆಮಿಫೈನಲ್ ಪ್ರವೇಶ ತೀರಾ ಕಠಿಣವಾಗಿದೆ. ಪಾಕಿಸ್ತಾನದ ವಿರುದ್ಧ ದೊಡ್ಡ ಅಂತರದಲ್ಲಿ ಬಾಂಗ್ಲಾದೇಶ ಗೆದ್ದು ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತಲ್ಲಿ ಭಾರತದ ಜೊತೆಗೆ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಅವಕಾಶ ತೆರೆದುಕೊಳ್ಳುತ್ತದೆ.

ಜಿಂಬಾಬ್ವೆ ಮತ್ತು ನೆದರ್ಲೆಂಡ್ಸ್ ತಂಡಗಳು ಹೆಚ್ಚಿನ ಸೋಲು ಕಂಡಿರುವ ಕಾರಣ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿವೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...