Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 1ರಲ್ಲಿ ಶ್ರೀಲಂಕಾ ತಂಡದ ಎದುರು ಜಯ ಸಾಧಿಸಿದ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ತಂಡದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲಿ ಎಂದು ಕಾದು ಕುಳಿತಿದ್ದ ಅತಿಥೇಯ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಭಾರೀ ನಿರಾಸೆಯಾಗಿದೆ.

ಶ್ರೀಲಂಕಾ ನೀಡಿದ್ದ 142 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡ ತಿಣುಕಾಡಿ ಕೊನೆಯ ಓವರ್‌ನಲ್ಲಿ ತಲುಪಿತು. ಆ ಮೂಲಕ 4 ವಿಕೆಟ್‌ಗಳಿಂದ ಗೆದ್ದು ನಿಟ್ಟುಸಿರು ಬಿಟ್ಟಿತ್ತಲ್ಲದೇ ಸೆಮಿಫೈನಲ್ ಪ್ರವೇಶ ಪಡೆಯಿತು.

ಗ್ರೂಪ್ 1ರ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 7 ಅಂಕ ಪಡೆದಿವೆ. ಆದರ್ ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಸೆಮಿಗೆ ಅವಕಾಶ ಪಡೆದರೆ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಶುಕ್ರವಾರ ಆಫ್ಘಾನಿಸ್ಥಾನ ಎದುರಿನ ಭಾರೀ ಅಂತರದಲ್ಲಿ ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 4 ರನ್‌ ಗಳಿಂದ ಗೆದ್ದಿದ್ದು ಅದಕ್ಕೆ ಮುಳವಾಗಿ ಪರಿಣಮಿಸಿತು. ಆ ಪಂದ್ಯದಲ್ಲಿ ಆಫ್ಘಾನಿಸ್ತಾನ ಬೌಲರ್ ರಶೀದ್ ಖಾನ್ ಕೊನೆಯ ಹಂತದಲ್ಲಿ ಕೇವಲ 23 ಎಸೆತಗಳಲ್ಲಿ 48 ರನ್ ಚಚ್ಚಿ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದ್ದರು. ಆದರೆ ಕೊನೆಗೂ 4 ರನ್‌ನಿಂದ ಸೋಲಬೇಕಾಗಿತ್ತು. ಈಗಾಗಿ ಪಂದ್ಯ ಗೆದ್ದರೂ ಆಸ್ಟ್ರೇಲಿಯಾದ ನೆಟ್ ರನ್‌ ರೇಟ್ ಏರಿಕೆಯಾಗಲಿಲ್ಲ.

ಇಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ಗೆಲುವು ಸಾಧಿಸಿದ್ದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳು ಟೂರ್ನಿಯಿಂದ ಹೊರಬೀಳುತ್ತಿದ್ದವು. 7 ಅಂಕ ಗಳಿಸಿದ್ದ ಆಸ್ಟ್ರೇಲಿಯಾಗೆ ವರದಾನವಾಗುತ್ತಿತ್ತು. ಆದರೆ ಅದಕ್ಕೆ ಇಂಗ್ಲೆಂಡ್ ಆಟಗಾರರು ಅವಕಾಶ ಮಾಡಿಕೊಡದೆ ಗೆಲುವಿನ ಮೂಲಕ ಸೆಮಿಫೈನಲ್ ತಲುಪಿದ್ದಾರೆ.

ಇನ್ನು 2ನೇ ಗುಂಪಿನಲ್ಲಿ ಸೆಮಿಫೈನಲ್‌ ಪ್ರವೇಶಕ್ಕಾಗಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಭಾರತದ ಸಾಧ್ಯತೆಗಳು

ಭಾರತವು ತನ್ನ ಕೊನೆಯ ಪಂದ್ಯವನ್ನು ಜಿಂಬಾಬ್ವೆ ತಂಡದ ಎದುರು ನವೆಂಬರ್ 6 ರಂದು ಎದುರಿಸಲಿದೆ. ಆ ಪಂದ್ಯದಲ್ಲಿ ಭಾರತ ಗೆದ್ದಲ್ಲಿ ಒಟ್ಟು 08 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತ ಸೋತರೂ ಕೂಡ ಅದೇ ದಿನ ನಡೆಯುವ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತರೆ ಭಾರತಕ್ಕೆ ಅವಕಾಶವಿದೆ. ಒಂದು ವೇಳೆ ಭಾರತ ಸೋತು, ದಕ್ಷಿಣ ಆಫ್ರಿಕಾ ತಂಡ ಗೆದ್ದಲ್ಲಿ ಬಾಂಗ್ಲಾದೇಶ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕಡಿಮೆ ಅಂತರದಿಂದ ಸೋಲಿಸಬೇಕೆಂದು ಭಾರತ ಪ್ರಾರ್ಥಿಸಬೇಕಿರುತ್ತದೆ. ಆಗ ನೆಟ್ ರನ್ ರೇಟ್ ಆಧಾರದಲ್ಲಿ ಬಾಂಗ್ಲಾದೇಶಕ್ಕಿಂತ ಹೆಚ್ಚಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಸೆಮಿಫೈನಲ್ ತಲುಪಬಹುದು.

ದಕ್ಷಿಣ ಆಫ್ರಿಕಾ:

4 ಪಂದ್ಯಗಳಿಂದ 5 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಗೆಲ್ಲಲೇಬೇಕಿದೆ. ಅಲ್ಲಿ ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಅಂತಹ ಸಂದರ್ಭದಲ್ಲಿ ಕೊನೆಯ ಆಸೆಯಾಗಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪಂದ್ಯ ಮಳೆಯ ಕಾರಣಕ್ಕೆ ರದ್ದಾದರೆ ರನ್ ರೇಟ್ ಆಧಾರದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.

ಪಾಕಿಸ್ತಾನ:

ಪಾಕಿಸ್ತಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಎದುರು ಸೋಲುವುದನ್ನು ಕಾಯಬೇಕಿದೆ. ಅಲ್ಲದೆ ಭಾರತವು ಜಿಂಬಾಬ್ವೆ ವಿರುದ್ಧ ಸೋತಲ್ಲಿ ನೆಟ್ ರನ್ ರೇಟ್ ಆಧಾರದಲ್ಲಿ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಬಹುದಾಗಿದೆ.

ಬಾಂಗ್ಲಾದೇಶ

ಗ್ರೂಪ್ ಎರಡರಲ್ಲಿ ಅತಿ ಕೆಟ್ಟ ನೆಟ್ ರನ್ ರೇಟ್ ಹೊಂದಿರುವ ಬಾಂಗ್ಲಾದೇಶದ ಸೆಮಿಫೈನಲ್ ಪ್ರವೇಶ ತೀರಾ ಕಠಿಣವಾಗಿದೆ. ಪಾಕಿಸ್ತಾನದ ವಿರುದ್ಧ ದೊಡ್ಡ ಅಂತರದಲ್ಲಿ ಬಾಂಗ್ಲಾದೇಶ ಗೆದ್ದು ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತಲ್ಲಿ ಭಾರತದ ಜೊತೆಗೆ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಅವಕಾಶ ತೆರೆದುಕೊಳ್ಳುತ್ತದೆ.

ಜಿಂಬಾಬ್ವೆ ಮತ್ತು ನೆದರ್ಲೆಂಡ್ಸ್ ತಂಡಗಳು ಹೆಚ್ಚಿನ ಸೋಲು ಕಂಡಿರುವ ಕಾರಣ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿವೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...

ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್

ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ. ತೀರ್ಪುಗಾರರ ಅಧ್ಯಕ್ಷೆ ವಿಮ್ ವೆಂಡರ್ಸ್ ಅವರು, ಗಾಜಾ ಕುರಿತು ಪ್ರಶ್ನಿಸಿದಾಗ 'ರಾಜಕೀಯ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ' ಎಂದು ಹೇಳಿದ್ದರು. ಈ...

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...