Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 1ರಲ್ಲಿ ಶ್ರೀಲಂಕಾ ತಂಡದ ಎದುರು ಜಯ ಸಾಧಿಸಿದ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ತಂಡದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲಿ ಎಂದು ಕಾದು ಕುಳಿತಿದ್ದ ಅತಿಥೇಯ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಭಾರೀ ನಿರಾಸೆಯಾಗಿದೆ.

ಶ್ರೀಲಂಕಾ ನೀಡಿದ್ದ 142 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡ ತಿಣುಕಾಡಿ ಕೊನೆಯ ಓವರ್‌ನಲ್ಲಿ ತಲುಪಿತು. ಆ ಮೂಲಕ 4 ವಿಕೆಟ್‌ಗಳಿಂದ ಗೆದ್ದು ನಿಟ್ಟುಸಿರು ಬಿಟ್ಟಿತ್ತಲ್ಲದೇ ಸೆಮಿಫೈನಲ್ ಪ್ರವೇಶ ಪಡೆಯಿತು.

ಗ್ರೂಪ್ 1ರ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 7 ಅಂಕ ಪಡೆದಿವೆ. ಆದರ್ ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಸೆಮಿಗೆ ಅವಕಾಶ ಪಡೆದರೆ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಶುಕ್ರವಾರ ಆಫ್ಘಾನಿಸ್ಥಾನ ಎದುರಿನ ಭಾರೀ ಅಂತರದಲ್ಲಿ ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 4 ರನ್‌ ಗಳಿಂದ ಗೆದ್ದಿದ್ದು ಅದಕ್ಕೆ ಮುಳವಾಗಿ ಪರಿಣಮಿಸಿತು. ಆ ಪಂದ್ಯದಲ್ಲಿ ಆಫ್ಘಾನಿಸ್ತಾನ ಬೌಲರ್ ರಶೀದ್ ಖಾನ್ ಕೊನೆಯ ಹಂತದಲ್ಲಿ ಕೇವಲ 23 ಎಸೆತಗಳಲ್ಲಿ 48 ರನ್ ಚಚ್ಚಿ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದ್ದರು. ಆದರೆ ಕೊನೆಗೂ 4 ರನ್‌ನಿಂದ ಸೋಲಬೇಕಾಗಿತ್ತು. ಈಗಾಗಿ ಪಂದ್ಯ ಗೆದ್ದರೂ ಆಸ್ಟ್ರೇಲಿಯಾದ ನೆಟ್ ರನ್‌ ರೇಟ್ ಏರಿಕೆಯಾಗಲಿಲ್ಲ.

ಇಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ಗೆಲುವು ಸಾಧಿಸಿದ್ದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳು ಟೂರ್ನಿಯಿಂದ ಹೊರಬೀಳುತ್ತಿದ್ದವು. 7 ಅಂಕ ಗಳಿಸಿದ್ದ ಆಸ್ಟ್ರೇಲಿಯಾಗೆ ವರದಾನವಾಗುತ್ತಿತ್ತು. ಆದರೆ ಅದಕ್ಕೆ ಇಂಗ್ಲೆಂಡ್ ಆಟಗಾರರು ಅವಕಾಶ ಮಾಡಿಕೊಡದೆ ಗೆಲುವಿನ ಮೂಲಕ ಸೆಮಿಫೈನಲ್ ತಲುಪಿದ್ದಾರೆ.

ಇನ್ನು 2ನೇ ಗುಂಪಿನಲ್ಲಿ ಸೆಮಿಫೈನಲ್‌ ಪ್ರವೇಶಕ್ಕಾಗಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಭಾರತದ ಸಾಧ್ಯತೆಗಳು

ಭಾರತವು ತನ್ನ ಕೊನೆಯ ಪಂದ್ಯವನ್ನು ಜಿಂಬಾಬ್ವೆ ತಂಡದ ಎದುರು ನವೆಂಬರ್ 6 ರಂದು ಎದುರಿಸಲಿದೆ. ಆ ಪಂದ್ಯದಲ್ಲಿ ಭಾರತ ಗೆದ್ದಲ್ಲಿ ಒಟ್ಟು 08 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತ ಸೋತರೂ ಕೂಡ ಅದೇ ದಿನ ನಡೆಯುವ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತರೆ ಭಾರತಕ್ಕೆ ಅವಕಾಶವಿದೆ. ಒಂದು ವೇಳೆ ಭಾರತ ಸೋತು, ದಕ್ಷಿಣ ಆಫ್ರಿಕಾ ತಂಡ ಗೆದ್ದಲ್ಲಿ ಬಾಂಗ್ಲಾದೇಶ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕಡಿಮೆ ಅಂತರದಿಂದ ಸೋಲಿಸಬೇಕೆಂದು ಭಾರತ ಪ್ರಾರ್ಥಿಸಬೇಕಿರುತ್ತದೆ. ಆಗ ನೆಟ್ ರನ್ ರೇಟ್ ಆಧಾರದಲ್ಲಿ ಬಾಂಗ್ಲಾದೇಶಕ್ಕಿಂತ ಹೆಚ್ಚಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಸೆಮಿಫೈನಲ್ ತಲುಪಬಹುದು.

ದಕ್ಷಿಣ ಆಫ್ರಿಕಾ:

4 ಪಂದ್ಯಗಳಿಂದ 5 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಗೆಲ್ಲಲೇಬೇಕಿದೆ. ಅಲ್ಲಿ ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಅಂತಹ ಸಂದರ್ಭದಲ್ಲಿ ಕೊನೆಯ ಆಸೆಯಾಗಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪಂದ್ಯ ಮಳೆಯ ಕಾರಣಕ್ಕೆ ರದ್ದಾದರೆ ರನ್ ರೇಟ್ ಆಧಾರದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.

ಪಾಕಿಸ್ತಾನ:

ಪಾಕಿಸ್ತಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಎದುರು ಸೋಲುವುದನ್ನು ಕಾಯಬೇಕಿದೆ. ಅಲ್ಲದೆ ಭಾರತವು ಜಿಂಬಾಬ್ವೆ ವಿರುದ್ಧ ಸೋತಲ್ಲಿ ನೆಟ್ ರನ್ ರೇಟ್ ಆಧಾರದಲ್ಲಿ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಬಹುದಾಗಿದೆ.

ಬಾಂಗ್ಲಾದೇಶ

ಗ್ರೂಪ್ ಎರಡರಲ್ಲಿ ಅತಿ ಕೆಟ್ಟ ನೆಟ್ ರನ್ ರೇಟ್ ಹೊಂದಿರುವ ಬಾಂಗ್ಲಾದೇಶದ ಸೆಮಿಫೈನಲ್ ಪ್ರವೇಶ ತೀರಾ ಕಠಿಣವಾಗಿದೆ. ಪಾಕಿಸ್ತಾನದ ವಿರುದ್ಧ ದೊಡ್ಡ ಅಂತರದಲ್ಲಿ ಬಾಂಗ್ಲಾದೇಶ ಗೆದ್ದು ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತಲ್ಲಿ ಭಾರತದ ಜೊತೆಗೆ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಅವಕಾಶ ತೆರೆದುಕೊಳ್ಳುತ್ತದೆ.

ಜಿಂಬಾಬ್ವೆ ಮತ್ತು ನೆದರ್ಲೆಂಡ್ಸ್ ತಂಡಗಳು ಹೆಚ್ಚಿನ ಸೋಲು ಕಂಡಿರುವ ಕಾರಣ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿವೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...