Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 1ರಲ್ಲಿ ಶ್ರೀಲಂಕಾ ತಂಡದ ಎದುರು ಜಯ ಸಾಧಿಸಿದ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ತಂಡದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲಿ ಎಂದು ಕಾದು ಕುಳಿತಿದ್ದ ಅತಿಥೇಯ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಭಾರೀ ನಿರಾಸೆಯಾಗಿದೆ.

ಶ್ರೀಲಂಕಾ ನೀಡಿದ್ದ 142 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡ ತಿಣುಕಾಡಿ ಕೊನೆಯ ಓವರ್‌ನಲ್ಲಿ ತಲುಪಿತು. ಆ ಮೂಲಕ 4 ವಿಕೆಟ್‌ಗಳಿಂದ ಗೆದ್ದು ನಿಟ್ಟುಸಿರು ಬಿಟ್ಟಿತ್ತಲ್ಲದೇ ಸೆಮಿಫೈನಲ್ ಪ್ರವೇಶ ಪಡೆಯಿತು.

ಗ್ರೂಪ್ 1ರ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 7 ಅಂಕ ಪಡೆದಿವೆ. ಆದರ್ ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್ ಸೆಮಿಗೆ ಅವಕಾಶ ಪಡೆದರೆ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಶುಕ್ರವಾರ ಆಫ್ಘಾನಿಸ್ಥಾನ ಎದುರಿನ ಭಾರೀ ಅಂತರದಲ್ಲಿ ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 4 ರನ್‌ ಗಳಿಂದ ಗೆದ್ದಿದ್ದು ಅದಕ್ಕೆ ಮುಳವಾಗಿ ಪರಿಣಮಿಸಿತು. ಆ ಪಂದ್ಯದಲ್ಲಿ ಆಫ್ಘಾನಿಸ್ತಾನ ಬೌಲರ್ ರಶೀದ್ ಖಾನ್ ಕೊನೆಯ ಹಂತದಲ್ಲಿ ಕೇವಲ 23 ಎಸೆತಗಳಲ್ಲಿ 48 ರನ್ ಚಚ್ಚಿ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದ್ದರು. ಆದರೆ ಕೊನೆಗೂ 4 ರನ್‌ನಿಂದ ಸೋಲಬೇಕಾಗಿತ್ತು. ಈಗಾಗಿ ಪಂದ್ಯ ಗೆದ್ದರೂ ಆಸ್ಟ್ರೇಲಿಯಾದ ನೆಟ್ ರನ್‌ ರೇಟ್ ಏರಿಕೆಯಾಗಲಿಲ್ಲ.

ಇಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ಗೆಲುವು ಸಾಧಿಸಿದ್ದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳು ಟೂರ್ನಿಯಿಂದ ಹೊರಬೀಳುತ್ತಿದ್ದವು. 7 ಅಂಕ ಗಳಿಸಿದ್ದ ಆಸ್ಟ್ರೇಲಿಯಾಗೆ ವರದಾನವಾಗುತ್ತಿತ್ತು. ಆದರೆ ಅದಕ್ಕೆ ಇಂಗ್ಲೆಂಡ್ ಆಟಗಾರರು ಅವಕಾಶ ಮಾಡಿಕೊಡದೆ ಗೆಲುವಿನ ಮೂಲಕ ಸೆಮಿಫೈನಲ್ ತಲುಪಿದ್ದಾರೆ.

ಇನ್ನು 2ನೇ ಗುಂಪಿನಲ್ಲಿ ಸೆಮಿಫೈನಲ್‌ ಪ್ರವೇಶಕ್ಕಾಗಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಭಾರತದ ಸಾಧ್ಯತೆಗಳು

ಭಾರತವು ತನ್ನ ಕೊನೆಯ ಪಂದ್ಯವನ್ನು ಜಿಂಬಾಬ್ವೆ ತಂಡದ ಎದುರು ನವೆಂಬರ್ 6 ರಂದು ಎದುರಿಸಲಿದೆ. ಆ ಪಂದ್ಯದಲ್ಲಿ ಭಾರತ ಗೆದ್ದಲ್ಲಿ ಒಟ್ಟು 08 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತ ಸೋತರೂ ಕೂಡ ಅದೇ ದಿನ ನಡೆಯುವ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತರೆ ಭಾರತಕ್ಕೆ ಅವಕಾಶವಿದೆ. ಒಂದು ವೇಳೆ ಭಾರತ ಸೋತು, ದಕ್ಷಿಣ ಆಫ್ರಿಕಾ ತಂಡ ಗೆದ್ದಲ್ಲಿ ಬಾಂಗ್ಲಾದೇಶ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕಡಿಮೆ ಅಂತರದಿಂದ ಸೋಲಿಸಬೇಕೆಂದು ಭಾರತ ಪ್ರಾರ್ಥಿಸಬೇಕಿರುತ್ತದೆ. ಆಗ ನೆಟ್ ರನ್ ರೇಟ್ ಆಧಾರದಲ್ಲಿ ಬಾಂಗ್ಲಾದೇಶಕ್ಕಿಂತ ಹೆಚ್ಚಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಸೆಮಿಫೈನಲ್ ತಲುಪಬಹುದು.

ದಕ್ಷಿಣ ಆಫ್ರಿಕಾ:

4 ಪಂದ್ಯಗಳಿಂದ 5 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಗೆಲ್ಲಲೇಬೇಕಿದೆ. ಅಲ್ಲಿ ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಅಂತಹ ಸಂದರ್ಭದಲ್ಲಿ ಕೊನೆಯ ಆಸೆಯಾಗಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪಂದ್ಯ ಮಳೆಯ ಕಾರಣಕ್ಕೆ ರದ್ದಾದರೆ ರನ್ ರೇಟ್ ಆಧಾರದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.

ಪಾಕಿಸ್ತಾನ:

ಪಾಕಿಸ್ತಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಎದುರು ಸೋಲುವುದನ್ನು ಕಾಯಬೇಕಿದೆ. ಅಲ್ಲದೆ ಭಾರತವು ಜಿಂಬಾಬ್ವೆ ವಿರುದ್ಧ ಸೋತಲ್ಲಿ ನೆಟ್ ರನ್ ರೇಟ್ ಆಧಾರದಲ್ಲಿ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಬಹುದಾಗಿದೆ.

ಬಾಂಗ್ಲಾದೇಶ

ಗ್ರೂಪ್ ಎರಡರಲ್ಲಿ ಅತಿ ಕೆಟ್ಟ ನೆಟ್ ರನ್ ರೇಟ್ ಹೊಂದಿರುವ ಬಾಂಗ್ಲಾದೇಶದ ಸೆಮಿಫೈನಲ್ ಪ್ರವೇಶ ತೀರಾ ಕಠಿಣವಾಗಿದೆ. ಪಾಕಿಸ್ತಾನದ ವಿರುದ್ಧ ದೊಡ್ಡ ಅಂತರದಲ್ಲಿ ಬಾಂಗ್ಲಾದೇಶ ಗೆದ್ದು ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತಲ್ಲಿ ಭಾರತದ ಜೊತೆಗೆ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಅವಕಾಶ ತೆರೆದುಕೊಳ್ಳುತ್ತದೆ.

ಜಿಂಬಾಬ್ವೆ ಮತ್ತು ನೆದರ್ಲೆಂಡ್ಸ್ ತಂಡಗಳು ಹೆಚ್ಚಿನ ಸೋಲು ಕಂಡಿರುವ ಕಾರಣ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿವೆ.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...