Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ಸೋತು ಹೊರನಡೆದ ದಕ್ಷಿಣ ಆಫ್ರಿಕಾ - ಭಾರತ ಸೆಮಿಫೈನಲ್‌ಗೆ

ಟಿ20 ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ಸೋತು ಹೊರನಡೆದ ದಕ್ಷಿಣ ಆಫ್ರಿಕಾ – ಭಾರತ ಸೆಮಿಫೈನಲ್‌ಗೆ

- Advertisement -
- Advertisement -

ಟಿ20 ವಿಶ್ವಕಪ್ ಟೂರ್ನಿಯ ಮತ್ತೊಂದು ಅಚ್ಚರಿಯ ಬೆಳವಣಿಗೆಯಲ್ಲಿ ಬಲಿಷ್ಟ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ತಲುಪದೆ ಟೂರ್ನಿಯಿಂದ ಹೊರನಡೆದಿದೆ. ಇಂದು ನಡೆದ ನೆದರ್ಲೆಂಡ್ಸ್ ವಿರುದ್ಧದ ಗೆಲ್ಲಲೇಬೇಕಾದ ಪಂದ್ಯದಲ್ಲಿ 13 ರನ್‌ಗಳ ಸೋಲಿನೊಂದಿಗೆ ನಿರಾಸೆಯಿಂದ ಟೂರ್ನಿಯಿಂದ ಹೊರಬಿದ್ದಿದೆ. ಇದರಿಂದಾಗಿ ಭಾರತ ತಂಡ ಇನ್ನೊಂದು ಪಂದ್ಯ ಉಳಿದಿರುವಂತೆಯೇ ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಇಂದು ನಡೆವ ಜಿಂಬಾಬ್ವೆ ವಿರುದ್ಧದ ಪಂದ್ಯದ ನಂತರ ಅಂಕಗಳ ಆಧಾರದಲ್ಲಿ ಭಾರತ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಅಥವಾ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆಯೋ ಎಂಬುದಷ್ಟೇ ತೀರ್ಮಾನವಾಗಬೇಕಿದೆ.

ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಅದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕಂಡು ಕೇವಲ 145 ರನ್ ಅಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು.

ಇನ್ನೊಂದೆ ದಕ್ಷಿಣ ಆಫ್ರಿಕಾ ತಂಡ ಹೊರ ನಡೆಯುತ್ತಲೇ ಸೆಮಿಫೈನಲ್‌ನ ಇನ್ನೊಂದು ಸ್ಥಾನಕ್ಕೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ದಕ್ಷಿಣ ಆಫ್ರಿಕಾ ತಂಡ 5 ಪಂದ್ಯಗಳಿಂದ ಕೇವಲ 5 ಅಂಕ ಗಳಿಸಿದೆ. ಭಾರತ ತಂಡ 4 ಪಂದ್ಯಗಳಿಂದ 6 ಅಂಕ ಗಳಿಸಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ತಲಾ 4 ಪಂದ್ಯಗಳಿಂದ 4 ಅಂಕ ಗಳಿಸಿದ್ದು, ತಮ್ಮ ಕೊನೆಯ ಪಂದ್ಯದಲ್ಲಿ ಪರಸ್ಪರ ಸ್ಫರ್ಧಿಸುತ್ತಿವೆ.

ಸದ್ಯಕ್ಕೆ ಪಾಕ್ ಎದುರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಬಾಂಗ್ಲಾದೇಶ ತಂಡವು 14 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 92 ರನ್ ಗಳಿಸಿದೆ. ಈ ಪಂದ್ಯದಲ್ಲಿ ಗೆದ್ದವರು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದ್ದಾರೆ. ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೂ ಸಹ 5 ಅಂಕದೊಂದಿಗೆ ಉತ್ತಮ ನೆಟ್ ರನ್ ರೇಟ್ ಹೊಂದಿರುವ ಪಾಕಿಸ್ತಾನ ತಂಡ ಸೆಮಿಫೈನಲ್ ತಲುಪಲಿದೆ.

ಕಳೆದ ವರ್ಷದ ವಿಶ್ವಕಪ್‌ನಲ್ಲಿಯೂ ಸಹ ದಕ್ಷಿಣ ಆಫ್ರಿಕಾ ತಂಡ ಸೂಪರ್ 12 ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿಯೂ ಸೆಮಿಫೈನಲ್ ತಲುಪದೆ ನಿರಾಶೆ ಅನುಭವಿಸಿತ್ತು. 5 ಪಂದ್ಯಗಳಲ್ಲಿ 4 ಗೆದ್ದರೂ ಸಹ ನೆಟ್ ರನ್ ರೇಟ್ ಕಡಿಮೆಯಿದ್ದ ಕಾರಣ ಟೂರ್ನಿಯಿಂದ ಹೊನಡೆದಿತ್ತು. ಆದರೆ ಈ ಬಾರಿ ಒಂದು ಪಂದ್ಯ ಮಳೆಗೆ ಆಹುತಿಯಾದರೆ ಪಾಕ್ ಮತ್ತು ನೆದರ್ಲೆಂಡ್ಸ್ ಎದುರು ಸೋತು ಟೂರ್ನಿಯಿಂದ ಹೊರಬಿದ್ದಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...