Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ಸ್ಮರಣೀಯ ಗೆಲುವುಗಳ ಮೂಲಕ 2022ರ ಐಸಿಸಿ ಟಿ20 ವಿಶ್ವಕಪ್‌ಗೆ ಮೆರುಗು ತಂದ ಪುಟ್ಟ ತಂಡಗಳ ಪರಿಚಯ ಇಲ್ಲಿದೆ.

- Advertisement -
- Advertisement -

2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಹಲವು ಅಚ್ಚರಿಗಳಿಗೆ ಸಾಕ್ಷಿಯಾಗಿದೆ. ಕೆಲ ಪಂದ್ಯಗಳು ಮಳೆಗೆ ಆಹುತಿಯಾದರೂ ಹಲವು ಪಂದ್ಯಗಳ ಫಲಿತಾಂಶಕ್ಕಾಗಿ ಕೊನೆಯ ಎಸೆತದವರೆಗೂ ಕಾಯಬೇಕಾದ ರೋಚಕತೆ ಸೃಷ್ಟಿಯಾಗಿತ್ತು. ಸದ್ಯಕ್ಕೆ ಸೂಪರ್ 12 ವರೆಗಿನ ಪಂದ್ಯಗಳು ಮುಗಿದಿದ್ದು ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಆದರೆ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾಗಿದ್ದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಇತ್ತೀಚಿಗೆ ತಾನೇ ಏಷ್ಯಾ ಕಪ್ ಗೆದ್ದಿದ್ದ ಶ್ರೀಲಂಕಾ ತಂಡಗಳು ಅನನುಭವಿ ತಂಡಗಳ ಎದುರು ಸೋತು ಟೂರ್ನಿಯಿಂದ ಹೊರನಡೆದಿವೆ. 2 ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವು ಅರ್ಹತಾ ಹಂತದಲ್ಲಿಯೇ ಸೋತು ಮುಖಭಂಗ ಅನುಭವಿಸಿತ್ತು.

ಆದರೆ ಅನನುಭವಿ ಪುಟ್ಟ ತಂಡಗಳು ಬಲಿಷ್ಠ ತಂಡಗಳನ್ನು ಮಣಿಸಿ ಸಾಧನೆಗೈದಿವೆ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಅದ್ಭುತ ಪ್ರದರ್ಶನ ನೀಡಿವೆ. ಇದನ್ನೇ ಸ್ಪಿರಿಟ್ ಆಫ್ ಕ್ರಿಕೆಟ್ ಎಂದು ಕರೆಯುವುದು. ಇಲ್ಲಿ ಬಲಿಷ್ಠ ತಂಡಗಳೇ ಯಾವತ್ತಿಗೂ ಗೆಲ್ಲುತ್ತಾರೆ ಎನ್ನಲಾಗುವುದಿಲ್ಲ. ಸಿಕ್ಕ ಅವಕಾಶ ಬಳಸಿಕೊಂಡ ಪುಟ್ಟ ತಂಡಗಳು ತಮ್ಮ ಪ್ರದರ್ಶನದ ಮೂಲಕ ಜಗತ್ತೆ ತಮ್ಮತ್ತ ನೋಡುವಂತೆ ಮಾಡಿವೆ. ಆ ರೀತಿಯಾಗಿ ಈ ಬಾರಿಯ ಟೂರ್ನಿಯಲ್ಲಿ ಬಲಿಷ್ಟ ತಂಡಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಪುಟ್ಟ ಆದರೆ ದಿಟ್ಟ ತಂಡಗಳ ಪರಿಚಯ ಇಲ್ಲಿದೆ.

ನೆದರ್ಲೆಂಡ್ಸ್: ಅರ್ಹತಾ ಪಂದ್ಯಗಳಲ್ಲಿ ನಮೀಬಿಯಾ ಮತ್ತು ಯುಎಇ ವಿರುದ್ಧ ಗೆದ್ದು ಸೂಪರ್ 12 ಪ್ರವೇಶಿಸಿದ ನೆದರ್ಲೆಂಡ್ ತಂಡವು ಅಲ್ಲಿ ಜಿಂಬಾಬ್ವೆ ತಂಡದ ಎದುರು ಜಯ ಕಂಡಿತ್ತು. ಅದರೆ ಅದು ಹೆಚ್ಚು ಗಮನ ಸೆಳೆದಿದ್ದು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಟೂರ್ನಿಯಿಂದ ಹೊರಹಾಕಿದ ನಂತರ. ಭಾನುವಾರದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಗೆಲ್ಲಲೇಬೇಕಾಗಿತ್ತು. ಆದರೆ ನೆದರ್ಲೆಂಡ್ಸ್ ತಂಡದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ 13 ರನ್‌ಗಳ ಸೋಲೊಪ್ಪಿಕೊಂಡಿತು. ಆ ಮೂಲಕ ಮೊದಲ ಬಾರಿಗೆ ನೆದರ್ಲೆಂಡ್ಸ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ದಾಖಲೆ ನಿರ್ಮಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಅದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕಂಡು ಕೇವಲ 145 ರನ್ ಅಷ್ಟೇ ಗಳಿಸಿತು. ನೆದರ್ಲೆಂಡ್ಸ್ ತಂಡವು ಸೂಪರ್ 12 ಹಂತದ 5 ಪಂದ್ಯಗಳಲ್ಲಿ 2 ಗೆಲುವಿನೊಂದಿಗೆ ಮುಂದಿನ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯುವ ಸಂಭವವಿದೆ.

ಐರ್ಲೆಂಡ್: ಅರ್ಹತಾ ಪಂದ್ಯದಲ್ಲಿ ಸ್ಕಾಟ್ಲೆಂಡ್ ನೀಡಿದ 176 ರನ್‌ಗಳ ಗುರಿಯನ್ನು 4 ವಿಕೆಟ್ ಕಳೆದುಕೊಂಡು ಬೆನ್ನತ್ತಿದ್ದ ಐರ್ಲೆಂಡ್ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿಯೂ ಸಹ ಕೇವಲ 1 ವಿಕೆಟ್ ಕಳೆದುಕೊಂಡು 146 ರನ್‌ಗಳ ಗುರಿ ಬೆನ್ನತ್ತಿತ್ತು. ಆ ಮೂಲಕ ವೆಸ್ಟ್ ಇಂಡೀಸ್ ತಂಡ ಅರ್ಹತೆ ಪಡೆಯದೆ ಟೂರ್ನಿಯಿಂದ ಹೊರಬೀಳಲು ಕಾರಣವಾಗಿತ್ತು ಐರ್ಲೆಂಡ್.

ಸೂಪರ್ 12 ಪಂದ್ಯದಲ್ಲಿ ಐರ್ಲೆಂಡ್ ತಂಡ ಕ್ರಿಕೆಟ್ ಜನಕ ಎಂದು ಕರೆಯಲ್ಪಡುವ ಇಂಗ್ಲೆಂಡ್ ತಂಡವನ್ನು ಮಣಿಸಿತ್ತು. ಡಕ್ವರ್ತ್ ಲೂಯಿಸ್ ನಿಯಮದಿಂದ ಐರ್ಲೆಂಡ್ ತಂಡವು 5 ರನ್‌ಗಳ ಜಯಗಳಿಸಿ ಸಂಭ್ರಮಿಸಿತ್ತು. ಐರ್ಲೆಂಡ್ ನೀಡಿದ 157 ರನ್ ಬೆನ್ನತ್ತಿದ್ದ ಇಂಗ್ಲೆಂಡ್ ತಂಡ 14.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 105 ರನ್ ಗಳಿಸಿದಾಗ ಭಾರೀ ಮಳೆ ಸುರಿದ ಪರಿಣಾಮ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಐರ್ಲೆಂಡ್ ವಿಜಯಿ ಎಂದು ಘೋಷಿಸಲಾಯಿತು. ನಿಯಮದ ಪ್ರಕಾರ ಇಂಗ್ಲೆಂಡ್ 05 ರನ್ ಹಿಂದಿತ್ತು.

ನಮೀಬಿಯಾ: ಶ್ರೀಲಂಕಾ ತಂಡ ಇತ್ತೀಚಿಗಷ್ಟೇ ಏಷ್ಯಾ ಕಪ್ ಗೆದ್ದು ಬೀಗಿತ್ತು. ಆದರೆ ಅದದನ್ನು ಟಿ20 ವಿಶ್ವಕಪ್‌ನ ಮೊದಲ ಅರ್ಹತಾ ಪಂದ್ಯದಲ್ಲಿಯೇ ನಮೀಬಿಯಾ ತಂಡ ಭಾರೀ ಅಂತರದಿಂದ ಸೋಲಿಸಿಬಿಟ್ಟಿತ್ತು!. 20 ಓವರ್‌ಗಳಲ್ಲಿ 163 ರನ್ ಗಳಿಸಿದ್ದ ನಮೀಬಿಯಾದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ಶ್ರೀಲಂಕಾ ಕುಸಿದಿಬಿತ್ತು. ಕೇವಲ 108 ರನ್‌ ಗಳಿಸಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 55 ರನ್‌ಗಳ ಸೋಲು ಅನುಭವಿಸಿತು. ಆದರೆ ಆನಂತರದ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ ನಮೀಬಿಯಾ ಸೂಪರ್ 12 ಪ್ರವೇಶಿಸಲು ಸಾಧ್ಯವಾಗಲಿಲ್ಲ.

ಜಿಂಬಾಬ್ವೆ: ಅರ್ಹತಾ ಸುತ್ತಿನಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ ಎದುರು ಗೆದ್ದು ಸೂಪರ್ 12 ಪ್ರವೇಶಿಸಿದ್ದ ಜಿಂಬಾಬ್ವೆ ತಂಡವು ಅಲ್ಲಿ ಪಾಕಿಸ್ತಾನ ತಂಡವನ್ನು 1 ರನ್‌ನಿಂದ ಸೋಲಿಸಿ ಅಚ್ಚರಿ ಉಂಟು ಮಾಡಿತ್ತು. ಈಗಾಗಲೇ ಮೊದಲ ಪಂದ್ಯದಲ್ಲಿ ಭಾರತದ ಎದುರು ಸೋತು ನಿರಾಶೆ ಅನುಭವಿಸಿದ್ದ ಪಾಕ್‌ಗೆ ಜಿಂಬಾಬ್ವೆ ನೀಡಿದ ಆಘಾತ ಸಾಮಾನ್ಯವಾದುದ್ದಲ್ಲ. ಅದು ಸೆಮಿಫೈನಲ್ ಪ್ರವೇಶಿಸದೆ ಟೂರ್ನಿಯಿಂದ ಹೋರಬೀಳುವ ಆತಂಕ ಎದುರಿಸುತ್ತಿತ್ತು. ಆದರೆ ಇನ್ನೊಂದೆಡೆ ನೆದರ್ಲೆಂಡ್ಸ್ ತಂಡವು ದಕ್ಷಿಣ ಆಫ್ರಿಕಾವನ್ನು ಮಣಿಸಿದ ಕಾರಣ ಪಾಕಿಸ್ತಾನ ಕೊನೆಗೂ ಸೆಮಿಫೈನಲ್ ಪ್ರವೇಶಿಸಿದೆ.

ಸ್ಕಾಟ್ಲೆಂಡ್: ಸ್ಕಾಟ್ಲೆಂಡ್ ತಂಡವು ಸೂಪರ್ 12 ಪ್ರವೇಶಿಸಲು ಸಾಧ್ಯವಾಗದಿದ್ದರೂ ಅದು ಅರ್ಹತಾ ಸುತ್ತಿನಲ್ಲಿ ಬಲಿಷ್ಟ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಅದು ಸಹ ಸೂಪರ್ 12 ಪ್ರವೇಶಿಸದಂತೆ ತಡೆದಿತ್ತು.

ಆಫ್ಘಾನಿಸ್ತಾನ: ಹಿಂದಿನ ವಿಶ್ವಕಪ್‌ನಲ್ಲಿನ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ ಆಫ್ಘಾನಿಸ್ತಾನ ತಂಡವು ಸೂಪರ್ 12 ಹಂತಕ್ಕೆ ನೇರ ಪ್ರವೇಶ ಪಡೆದಿತ್ತು. ಆದರೆ ಮಳೆಯಿಂದಾಗಿ ಅದರ 2 ಪಂದ್ಯಗಳು ರದ್ದಾದವು. ಆದರೂ ಅದು ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗೆಲುವಿನ ಸನಿಹ ತಲುಪಿತು. ಆಸ್ಟ್ರೇಲಿಯಾ ನೀಡಿದ 169 ರನ್‌ಗಳ ಗುರಿ ಬೆನ್ನತ್ತಿದ್ದ ಆಫ್ಘಾನಿಸ್ತಾನ ತಂಡವು 164 ರನ್ ಗಳಿಸಿ ಕೇವಲ 4 ರನ್ ಅಂತರದಿಂದ ಸೋಲು ಕಂಡಿತು. ಹಾಗಾಗಿ ಗೆದ್ದರೂ ನೆಟ್‌ ರನ್‌ ರೇಟ್ ಹೆಚ್ಚು ಮಾಡಿಕೊಳ್ಳಲು ಸಾಧ್ಯವಾಗದ ಆಸ್ಟ್ರೇಲಿಯಾ ತಂಡವು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್‌ನಷ್ಟೆ (07) ಅಂಕಗಳನ್ನು ಹೊಂದಿದ್ದರೂ ಸೆಮಿಫೈನಲ್ ಪ್ರವೇಶಿಸದೆ ಟೂರ್ನಿಯಿಂದ ಹೊರಬೀಳಬೇಕಾಯಿತು.

ಇದನ್ನೂ ಓದಿ: ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮತ್ತೆ ಭಾರತ-ಪಾಕ್ ಮುಖಾಮುಖಿಯಾಗಬಹುದು: ಮರುಕಳಿಸುವುದೇ 2007ರ ಫೈನಲ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...