Homeನ್ಯಾಯ ಪಥಹೀರೋಯಿನ್‌ಗಳಿಗೇಕೆ ಹೀರೋಗಳಷ್ಟು ಸಂಭಾವನೆ ಕೊಡುವುದಿಲ್ಲ?: ತಾಪ್ಸಿ ಪನ್ನು ಪ್ರಶ್ನ

ಹೀರೋಯಿನ್‌ಗಳಿಗೇಕೆ ಹೀರೋಗಳಷ್ಟು ಸಂಭಾವನೆ ಕೊಡುವುದಿಲ್ಲ?: ತಾಪ್ಸಿ ಪನ್ನು ಪ್ರಶ್ನ

ಲೀಡಿಂಗ್ ನಟರಿಗೆ ನೀಡುವ ಸಂಭಾವನೆಯಲ್ಲಿ ಒಂದು ಮಹಿಳಾ ಪರ ಸಿನೆಮಾವನ್ನೆ ನಿರ್ಮಾಣ ಮಾಡಬಹುದು ಎಂದು ತಾಪ್ಸಿ ಪನ್ನು ಹೇಳಿದ್ದಾರೆ.

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟಿ ‘ತಾಪ್ಸಿ ಪನ್ನು’ ಭಾಗವಹಿಸಿದ್ದರು. ‘ಲೀಡ್ ಇನ್ ವುಮೆನ್’ ಎಂಬ ಗೋಷ್ಠಿಯಲ್ಲಿ ಮುಖ್ಯ ಭಾಷಣಗಾರ್ತಿಯಾಗಿದ್ದ ಇವರು ಮಹಿಳೆಯರ ಇನಿಷಿಯೇಟಿವ್ ಬಗ್ಗೆ ಮಾತನಾಡಿ ಮೆಚ್ಚುಗೆ ಪಡೆದುಕೊಂಡಿದ್ದರು.

ಆದರೆ ಆ ಮಾತುಗಳು ಕೆಲವರಿಗೆ ಬೆಂಕಿ ಇಟ್ಟಂತಾಗಿದ್ದೂ ಸುಳ್ಳೇನು ಅಲ್ಲ. ಅದರಲ್ಲಿ ತಾಪ್ಸಿ ಹೇಳಿದ್ದು ಇಷ್ಟೇ, ಹೀರೋಯಿನ್ ಆಗಿ ನಟಿಸುವ ನಟಿಯರಿಗೆ ಹೀರೋಗಳಿಗೆ ನೀಡುವಷ್ಟು ಸಂಭಾವನೆ ನೀಡುವುದಿಲ್ಲ. ಹೀರೋಗಳಷ್ಟೇ ಡೆಡಿಕೇಷನ್, ಎಫರ್ಟ್ ಹಾಕುವ ನಟಿಯರಿಗೆ ಹೀರೋಗಳಿಗೆ ನೀಡುವ ಸಂಭಾವನೆಯ ನಾಲ್ಕನೇ ಒಂದು ಭಾಗ ಸಿಕ್ಕರೇ ಅದೇ ಹೆಚ್ಚು ಎಂದಿದ್ದರು.

ಇನ್ನೊಂದು ವಿಷಯವೇನೆಂದರೆ ಲೀಡಿಂಗ್ ನಟರಿಗೆ ನೀಡುವ ಸಂಭಾವನೆಯಲ್ಲಿ ಒಂದು ಮಹಿಳಾ ಪರ ಸಿನೆಮಾವನ್ನೆ ನಿರ್ಮಾಣ ಮಾಡಬಹುದು ಎಂದಿದ್ದಾರೆ. ಅದು ವಾಸ್ತವವೂ ಹೌದು. ಈ ತಾರತಮ್ಯ ಧೋರಣೆ ನನ್ನ ಜೀವಿತ ಕಾಲದಲ್ಲೇ ಬದಲಾಗುತ್ತದೆಂದು ಆಶಿಸುತ್ತೇನೆಂದು ತಾಪ್ಸಿ ಹೇಳಿದ ಮಾತು ಅವರೊಬ್ಬರದ್ದೇ ಆಗಿರಲಿಲ್ಲ ಎಂಬುದಂತೂ ಸತ್ಯ.

ಏನೇ ಇರಲಿ, ಸಿನಿಮಾ ರಂಗದಲ್ಲಿಯ ಈ ಧೋರಣೆ ಬದಲಾಗಲೇಬೇಕು. ಅಂದಹಾಗೆ ಹಿಂದಿ ಭಾಷೆಯ ಪಿತ್ತವನ್ನ ನೆತ್ತಿಗೇರಿಸಿಕೊಂಡಿರುವ ಕೆಲವು ಹಿಂದಿ ಮಾಧ್ಯಮಗಳು ತಾಪ್ಸಿಯ ಭಾಷಣ ಇಂಗ್ಲಿಷ್‍ನಲ್ಲಿದ್ದರಿಂದ, ‘ನೀವು ಬಾಲಿವುಡ್ ನಟಿ ಹಿಂದಿಯಲ್ಲೇ ಮಾತನಾಡಬೇಕಲ್ಲವೇ’ ಎಂದು ಕ್ಯಾತೆ ತೆಗೆದಿದ್ದವು. ಇಲ್ಲಿ ನೆರೆದಿರುವವರು ಹಲವು ಮಂದಿ ಹಿಂದಿಯವರಲ್ಲ. ಎಲ್ಲರಿಗೂ ಅರ್ಥವಾಗುವ ಭಾಷೆಯಲ್ಲಿ ಮಾತನಾಡಿದ್ದೇನೆಂದು ತಾಪ್ಸಿ ಮುಟ್ಟಿನೋಡಿಕೊಳ್ಳುವಂತೆ ಕೊಟ್ಟಿದ್ದಂತೂ ಹಿಂದಿ ಅಮಲಿಗೆ ತಣ್ಣೀರು ಬಿದ್ದಂತಾಯ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...