Homeನ್ಯಾಯ ಪಥಹೀರೋಯಿನ್‌ಗಳಿಗೇಕೆ ಹೀರೋಗಳಷ್ಟು ಸಂಭಾವನೆ ಕೊಡುವುದಿಲ್ಲ?: ತಾಪ್ಸಿ ಪನ್ನು ಪ್ರಶ್ನ

ಹೀರೋಯಿನ್‌ಗಳಿಗೇಕೆ ಹೀರೋಗಳಷ್ಟು ಸಂಭಾವನೆ ಕೊಡುವುದಿಲ್ಲ?: ತಾಪ್ಸಿ ಪನ್ನು ಪ್ರಶ್ನ

ಲೀಡಿಂಗ್ ನಟರಿಗೆ ನೀಡುವ ಸಂಭಾವನೆಯಲ್ಲಿ ಒಂದು ಮಹಿಳಾ ಪರ ಸಿನೆಮಾವನ್ನೆ ನಿರ್ಮಾಣ ಮಾಡಬಹುದು ಎಂದು ತಾಪ್ಸಿ ಪನ್ನು ಹೇಳಿದ್ದಾರೆ.

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟಿ ‘ತಾಪ್ಸಿ ಪನ್ನು’ ಭಾಗವಹಿಸಿದ್ದರು. ‘ಲೀಡ್ ಇನ್ ವುಮೆನ್’ ಎಂಬ ಗೋಷ್ಠಿಯಲ್ಲಿ ಮುಖ್ಯ ಭಾಷಣಗಾರ್ತಿಯಾಗಿದ್ದ ಇವರು ಮಹಿಳೆಯರ ಇನಿಷಿಯೇಟಿವ್ ಬಗ್ಗೆ ಮಾತನಾಡಿ ಮೆಚ್ಚುಗೆ ಪಡೆದುಕೊಂಡಿದ್ದರು.

ಆದರೆ ಆ ಮಾತುಗಳು ಕೆಲವರಿಗೆ ಬೆಂಕಿ ಇಟ್ಟಂತಾಗಿದ್ದೂ ಸುಳ್ಳೇನು ಅಲ್ಲ. ಅದರಲ್ಲಿ ತಾಪ್ಸಿ ಹೇಳಿದ್ದು ಇಷ್ಟೇ, ಹೀರೋಯಿನ್ ಆಗಿ ನಟಿಸುವ ನಟಿಯರಿಗೆ ಹೀರೋಗಳಿಗೆ ನೀಡುವಷ್ಟು ಸಂಭಾವನೆ ನೀಡುವುದಿಲ್ಲ. ಹೀರೋಗಳಷ್ಟೇ ಡೆಡಿಕೇಷನ್, ಎಫರ್ಟ್ ಹಾಕುವ ನಟಿಯರಿಗೆ ಹೀರೋಗಳಿಗೆ ನೀಡುವ ಸಂಭಾವನೆಯ ನಾಲ್ಕನೇ ಒಂದು ಭಾಗ ಸಿಕ್ಕರೇ ಅದೇ ಹೆಚ್ಚು ಎಂದಿದ್ದರು.

ಇನ್ನೊಂದು ವಿಷಯವೇನೆಂದರೆ ಲೀಡಿಂಗ್ ನಟರಿಗೆ ನೀಡುವ ಸಂಭಾವನೆಯಲ್ಲಿ ಒಂದು ಮಹಿಳಾ ಪರ ಸಿನೆಮಾವನ್ನೆ ನಿರ್ಮಾಣ ಮಾಡಬಹುದು ಎಂದಿದ್ದಾರೆ. ಅದು ವಾಸ್ತವವೂ ಹೌದು. ಈ ತಾರತಮ್ಯ ಧೋರಣೆ ನನ್ನ ಜೀವಿತ ಕಾಲದಲ್ಲೇ ಬದಲಾಗುತ್ತದೆಂದು ಆಶಿಸುತ್ತೇನೆಂದು ತಾಪ್ಸಿ ಹೇಳಿದ ಮಾತು ಅವರೊಬ್ಬರದ್ದೇ ಆಗಿರಲಿಲ್ಲ ಎಂಬುದಂತೂ ಸತ್ಯ.

ಏನೇ ಇರಲಿ, ಸಿನಿಮಾ ರಂಗದಲ್ಲಿಯ ಈ ಧೋರಣೆ ಬದಲಾಗಲೇಬೇಕು. ಅಂದಹಾಗೆ ಹಿಂದಿ ಭಾಷೆಯ ಪಿತ್ತವನ್ನ ನೆತ್ತಿಗೇರಿಸಿಕೊಂಡಿರುವ ಕೆಲವು ಹಿಂದಿ ಮಾಧ್ಯಮಗಳು ತಾಪ್ಸಿಯ ಭಾಷಣ ಇಂಗ್ಲಿಷ್‍ನಲ್ಲಿದ್ದರಿಂದ, ‘ನೀವು ಬಾಲಿವುಡ್ ನಟಿ ಹಿಂದಿಯಲ್ಲೇ ಮಾತನಾಡಬೇಕಲ್ಲವೇ’ ಎಂದು ಕ್ಯಾತೆ ತೆಗೆದಿದ್ದವು. ಇಲ್ಲಿ ನೆರೆದಿರುವವರು ಹಲವು ಮಂದಿ ಹಿಂದಿಯವರಲ್ಲ. ಎಲ್ಲರಿಗೂ ಅರ್ಥವಾಗುವ ಭಾಷೆಯಲ್ಲಿ ಮಾತನಾಡಿದ್ದೇನೆಂದು ತಾಪ್ಸಿ ಮುಟ್ಟಿನೋಡಿಕೊಳ್ಳುವಂತೆ ಕೊಟ್ಟಿದ್ದಂತೂ ಹಿಂದಿ ಅಮಲಿಗೆ ತಣ್ಣೀರು ಬಿದ್ದಂತಾಯ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...