Homeಮುಖಪುಟಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

ಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

"ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. 70ರ ದಶಕದಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು.

- Advertisement -
- Advertisement -

ಒಂದು ಶತಮಾನಕ್ಕೂ ಮುಂಚೆ ಭಾರತಕ್ಕೆ ಬಂದ ದಕ್ಷಿಣ ಅಮೆರಿಕ ಮೂಲದ ಟಬೂಬಿಯಾ ಜಾತಿಯ ಮರಗಳು ಈಗ ಭಾರತದ್ದೇ ಆಗಿಹೋಗಿವೆ. ಸರಣಿ ಹೂ ಬಿಡುವ ಮರಗಳೆಂದೇ ಇವನ್ನು ಬಣ್ಣಿಸಲಾಗಿದೆ. ಬೆಂಗಳೂರಿನ ಬೀದಿಗಳಿಗೆ ಈ ಹೂ ಬಿಡುವ ಮರಗಳು ನೀಡುವ ಮೆರಗು ಆಕರ್ಷಕ. ತಾರಾಡಿಗರ ತನುಮನಗಳನ್ನು ತಣಿಸುವ ಟಬೂಬಿಯಾ ಮರಗಳು ಹಲವು ಬಗೆಗಳಲ್ಲಿದ್ದು, ಆಯಾ ಬಗೆಯವು ನಿರ್ದಿಷ್ಟ ಕೆಲವು ತಿಂಗಳಿನಲ್ಲಿ ಸುಂದರವಾದ ಬಣ್ಣ ಬಣ್ಣದ ಹೂವನ್ನು ಅರಳಿಸಿ ಸುತ್ತಲಿನ ಪ್ರಕೃತಿಯನ್ನು ಹಾಗೂ ನೋಡುಗರ ಮನಸ್ಸನ್ನೂ ಅರಳಿಸುತ್ತವೆ. ಈ ಹೂಗಳು ಮರಗಳ ಕೆಳಗೆ ಉದುರಿದಾಗ ಸುಂದರವಾದ ಕಾರ್ಪೆಟ್ ಹಾಸಿದಂತೆ ಕಾಣುತ್ತವೆ.

ಟಬೂಬಿಯಾ ಅವಲಾನಿಡೇ ಮರಗಳು ನವೆಂಬರ್ ತಿಂಗಳಿನಲ್ಲಿ ಮೊಟ್ಟಮೊದಲು ಗಾಢವಾದ ಗುಲಾಬಿ ಬಣ್ಣದ ಹೂಗಳನ್ನು ಅರಳಿಸಿ ಹೂಗಳ ಋತುವಿನ ಪ್ರಾರಂಭವನ್ನು ಸಾರುತ್ತವೆ. ಬೆಂಗಳೂರಿನ ವಿವಿಧೆಡೆ ಈ ಹೂಗಳ ಮರಗಳಿವೆ. ನವೆಂಬರ್-ಡಿಸೆಂಬರ್ ತಿಂಗಳುಗಳಲ್ಲಿ ಈ ಹೂಗಳ ಮೆರಗನ್ನು ನಾವು ಕಾಣಬಹುದಾಗಿದೆ. ಈ ವರ್ಷ ತೀವ್ರ ಸೈಕ್ಲೋನ್‌ನಿಂದಾಗಿ ಹೂವುಗಳು ಉದುರಿ ನೆಲವನ್ನು ಹೊದ್ದ ದೃಶ್ಯವೂ ಮನಮೋಹಕ.

“1908ರಲ್ಲಿ ಲಾಲ್‌ಬಾಗ್ ಕ್ಯುರೇಟರ್ ಆಗಿ ಬಂದವರು ಕ್ರುಂಬಿಗಲ್. ಅವರು ಲಾಲ್‌ಬಾಗ್‌ಗೆ ಸೀಮಿತವಾಗಿದ್ದ ಉದ್ಯಾನವನ್ನು ನಗರದ ವಿವಿಧ ಬಡಾವಣೆಗಳಿಗೆ, ಮನೆಗಳಿಗೆ ಕೊಂಡೊಯ್ದರು. ಅವರು ಈ ಸರಣಿ ಹೂ ಬಿಡುವ ಮರಗಳನ್ನು ನೆಡುವುದನ್ನು ಪ್ರಾರಂಭಿಸಿದರು. ಅಂದರೆ ಒಂದು ಜಾತಿಯ ಮರಗಳು ಹೂವರಳಿಸಿ ಬಾಡುವಷ್ಟರಲ್ಲಿ ಮತ್ತೊಂದು ಜಾತಿಯ ಮರಗಳು ಹೂವರಳಿಸಿರಬೇಕು. ಅವರು ಈ ಟಬೂಬಿಯಾ ಜಾತಿಯ ಮರಗಳನ್ನು ಸಾಕಷ್ಟು ನೆಡಲು ಪ್ರೋತ್ಸಾಹಿಸಿದರು” ಎನ್ನುತ್ತಾರೆ ತೋಟಗಾರಿಕೆ ಸಮಾಲೋಚಕ ಮತ್ತು ತಜ್ಞ ಭಕ್ತರಹಳ್ಳಿಯ ಸಂತೆ ನಾರಾಯಣಸ್ವಾಮಿ.

“ಟಬೂಬಿಯಾ ಅವಲಾನಿಡೇ ಜಾತಿಯ ಮರ ನವೆಂಬರ್, ಡಿಸೆಂಬರ್, ಜನವರಿ ತಿಂಗಳಿನಲ್ಲಿ ಗಾಢವಾದ ಗುಲಾಬಿ ಬಣ್ಣದ ಹೂಬಿಡುತ್ತದೆ. ಅದು ಮುಗಿಯುವಷ್ಟರಲ್ಲಿ ಟಬೂಬಿಯಾ ಅರ್ಜೆನ್ಷಿಯಾ ಗಾಢ ಹಳದಿ ಬಣ್ಣದ ಹೂವರಳಿಸಿಕೊಂಡು ಗಮನ ಸೆಳೆದರೆ, ಟಬೂಬಿಯಾ ಸ್ಪೆಕ್ಟಾಬಿಲಿಸ್ ತಿಳಿ ಹಳದಿ ಹೂವರಳಿಸುತ್ತವೆ. ಇವು ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಇರುತ್ತವೆ. ಹಳದಿ ಹೂಗಳು ಉದುರುವ ಸಮಯಕ್ಕೆ ಸರಿಯಾಗಿ ಅಂದರೆ, ಯುಗಾದಿಗೆ ಸ್ವಾಗತ ಕೋರುವುದೇ ಟಬೂಬಿಯಾ ರೋಸಿಯಾ. ಇದರ ಸೊಬಗು ಮತ್ತು ಬೆಡಗನ್ನು ’ತಿಳಿಗುಲಾಬಿ ಸೀರೆಯನ್ನು ಧರಿಸಿರುವ ಸುಂದರಿ’ ಎಂದು ಕರೆದಿದ್ದೇನೆ. ಸುಮಾರು ಏಪ್ರಿಲ್ ತಿಂಗಳವರೆಗೂ ಇರುವ ಈ ಹೂವಿನ ನಂತರ ಕತ್ತಿಕಾಯಿ ಮರ ಅಂದರೆ ಮೇ ಫ್ಲವರ್ ಹೂ ಬಿಡುತ್ತದೆ. ಹೀಗೇ ಟ್ಯುಲಿಪ್ ಮರ ಅಥವಾ ನೀರುಗಾಯಿಮರ ಚಂದದ ಹೂ ಬಿಡುತ್ತದೆ ಹೀಗೇ ಸಾಗಿ ದಸರಾ ಮರಗಳೆಂದು ಕರೆಯುವ ಕಲ್ವಿಲೇ ರೆಸಿಮೋಸಾ ಕೇಸರಿ ಬಣ್ಣದ ಹೂಬಿಡುವವರೆಗೂ ಸಾಗುತ್ತದೆ. ಈ ದಸರಾ ಮರಗಳನ್ನು ಕ್ರುಂಬಿಗಲ್ ಅವರು ಮೈಸೂರಿನಲ್ಲಿ ನೆಟ್ಟಿದ್ದಾರೆ. ಲಿಲ್ಲಿ ಹೂವರಳಿದಾಗ ಲಂಡನ್ನಿಗೆ ಭೇಟಿ ಕೊಡು; ಟಬೂಬಿಯಾ ಹೂಬಿಟ್ಟಾಗ ಬೆಂಗಳೂರಿಗೆ ಭೇಟಿ ನೀಡು ಎಂಬ ಮಾತು ಚಾಲ್ತಿಯಲ್ಲಿದೆ” ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ಬಲು ಅಪರೂಪದ ಟಬೂಬಿಯಾ ಸ್ಪೆಕ್ಟಾಬಿಲಿಸ್ ಜಾತಿಯ ಮರಗಳಿವೆ. ತಿಳಿ ಹಳದಿ ಹೂವರಳಿಸುವ ಈ ಮರಗಳು ಬೆಂಗಳೂರಿನಲ್ಲಿ ಹೆಚ್ಚೆಂದರೆ ೫೦ ಇರಬಹುದು. ನಮ್ಮ ರಾಜಭವನದಲ್ಲಿ ಟಬೂಬಿಯಾ ದೊನ್ನೆಲ್ ಸ್ಮಿತಿ ಎಂಬ ಜಾತಿಯ ಮರವಿದೆ. ಗಾಢ ಹಳದಿ ಬಣ್ಣದ ಹೂಗಳನ್ನು ಬಿಡುವ ಈ ಮರದ ಕಾಂಡ ಮೃದು. ಬೆಂಗಳೂರಿನಲ್ಲಿ ಈ ಜಾತಿಯವು ಸುಮಾರು ಹತ್ತು ಮರಗಳಿರಬೇಕಷ್ಟೇ.

“ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. ೭೦ರ ದಶಕದಲ್ಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು. ಕನಿಷ್ಠ ಒಂದು ಸಾವಿರವಾದರೂ ಅಲ್ಲಿ ಟಬೂಬಿಯಾ ಮರಗಳಿವೆ. ಪ್ರತಿ ವರ್ಷ ನವೆಂಬರ್‌ನಿಂದ ಮೇ ವರೆಗೆ ಅಲ್ಲಿ ಬಣ್ಣಬಣ್ಣದ ಹೂಗಳನ್ನು ನೋಡಲು ಎರಡು ಕಣ್ಣುಗಳು ಸಾಲವು. ಅಲ್ಲಿ ಒಂದು ದಶಕ ಗಾರ್ಡನ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಿದ ಅದೃಷ್ಟ ನನ್ನದು” ಎನ್ನುತ್ತಾರೆ ಸಂತೆ ನಾರಾಯಣಸ್ವಾಮಿ.

ಹೊರಗೆ ತಾರಾಡುವಾಗ ಈ ಸಂತಸ ಅರಳುವ ಸಮಯವನ್ನು ಕಣ್ಣುತುಂಬಿಸಿಕೊಳ್ಳುವುದನ್ನು ಮರೆಯದಿರಿ.

(ವಿ. ಸೂ: ಟಿ.ಪಿ.ಇಸ್ಸಾರ್ ಅವರು ಬೆಂಗಳೂರಿನ ಎಲ್ಲಾ ಹೂ ಬಿಡುವ ಮರಗಳ ಕುರಿತಾದ ಕಾಫಿ ಟೇಬಲ್ ಪುಸ್ತಕ ’ಬ್ಲಾಸಮ್ಸ್ ಆಫ್ ಬೆಂಗಳೂರು’ ಹೊರತಂದಿದ್ದಾರೆ.)

ಡಿ ಜಿ ಮಲ್ಲಿಕಾರ್ಜುನ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದವರಾದ ಡಿ.ಜಿ. ಮಲ್ಲಿಕಾರ್ಜುನ ಅವರ ನೆಚ್ಚಿನ ಹವ್ಯಾಸ ಫೋಟೋಗ್ರಫಿ. ರಸ್ಕಿನ್ ಬಾಂಡ್ ಕಥೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರಲ್ಲದೆ, ಫೋಟೋಗ್ರಪಿ ವಿಷಯವಾಗಿ ’ಕ್ಲಿಕ್, ’ಅರೆಕ್ಷಣದ ಅದೃಷ್ಟ’ ಪುಸ್ತಕಗಳನ್ನು ರಚಿಸಿದ್ದಾರೆ.

ಫೋಟೋಗಳು: ಸಂತೆ ನಾರಾಯಣಸ್ವಾಮಿ ಮತ್ತು ಮಂಜುನಾಥ ಚಾರ್ವಾಕ


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...