Homeಮುಖಪುಟಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

ಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

"ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. 70ರ ದಶಕದಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು.

- Advertisement -
- Advertisement -

ಒಂದು ಶತಮಾನಕ್ಕೂ ಮುಂಚೆ ಭಾರತಕ್ಕೆ ಬಂದ ದಕ್ಷಿಣ ಅಮೆರಿಕ ಮೂಲದ ಟಬೂಬಿಯಾ ಜಾತಿಯ ಮರಗಳು ಈಗ ಭಾರತದ್ದೇ ಆಗಿಹೋಗಿವೆ. ಸರಣಿ ಹೂ ಬಿಡುವ ಮರಗಳೆಂದೇ ಇವನ್ನು ಬಣ್ಣಿಸಲಾಗಿದೆ. ಬೆಂಗಳೂರಿನ ಬೀದಿಗಳಿಗೆ ಈ ಹೂ ಬಿಡುವ ಮರಗಳು ನೀಡುವ ಮೆರಗು ಆಕರ್ಷಕ. ತಾರಾಡಿಗರ ತನುಮನಗಳನ್ನು ತಣಿಸುವ ಟಬೂಬಿಯಾ ಮರಗಳು ಹಲವು ಬಗೆಗಳಲ್ಲಿದ್ದು, ಆಯಾ ಬಗೆಯವು ನಿರ್ದಿಷ್ಟ ಕೆಲವು ತಿಂಗಳಿನಲ್ಲಿ ಸುಂದರವಾದ ಬಣ್ಣ ಬಣ್ಣದ ಹೂವನ್ನು ಅರಳಿಸಿ ಸುತ್ತಲಿನ ಪ್ರಕೃತಿಯನ್ನು ಹಾಗೂ ನೋಡುಗರ ಮನಸ್ಸನ್ನೂ ಅರಳಿಸುತ್ತವೆ. ಈ ಹೂಗಳು ಮರಗಳ ಕೆಳಗೆ ಉದುರಿದಾಗ ಸುಂದರವಾದ ಕಾರ್ಪೆಟ್ ಹಾಸಿದಂತೆ ಕಾಣುತ್ತವೆ.

ಟಬೂಬಿಯಾ ಅವಲಾನಿಡೇ ಮರಗಳು ನವೆಂಬರ್ ತಿಂಗಳಿನಲ್ಲಿ ಮೊಟ್ಟಮೊದಲು ಗಾಢವಾದ ಗುಲಾಬಿ ಬಣ್ಣದ ಹೂಗಳನ್ನು ಅರಳಿಸಿ ಹೂಗಳ ಋತುವಿನ ಪ್ರಾರಂಭವನ್ನು ಸಾರುತ್ತವೆ. ಬೆಂಗಳೂರಿನ ವಿವಿಧೆಡೆ ಈ ಹೂಗಳ ಮರಗಳಿವೆ. ನವೆಂಬರ್-ಡಿಸೆಂಬರ್ ತಿಂಗಳುಗಳಲ್ಲಿ ಈ ಹೂಗಳ ಮೆರಗನ್ನು ನಾವು ಕಾಣಬಹುದಾಗಿದೆ. ಈ ವರ್ಷ ತೀವ್ರ ಸೈಕ್ಲೋನ್‌ನಿಂದಾಗಿ ಹೂವುಗಳು ಉದುರಿ ನೆಲವನ್ನು ಹೊದ್ದ ದೃಶ್ಯವೂ ಮನಮೋಹಕ.

“1908ರಲ್ಲಿ ಲಾಲ್‌ಬಾಗ್ ಕ್ಯುರೇಟರ್ ಆಗಿ ಬಂದವರು ಕ್ರುಂಬಿಗಲ್. ಅವರು ಲಾಲ್‌ಬಾಗ್‌ಗೆ ಸೀಮಿತವಾಗಿದ್ದ ಉದ್ಯಾನವನ್ನು ನಗರದ ವಿವಿಧ ಬಡಾವಣೆಗಳಿಗೆ, ಮನೆಗಳಿಗೆ ಕೊಂಡೊಯ್ದರು. ಅವರು ಈ ಸರಣಿ ಹೂ ಬಿಡುವ ಮರಗಳನ್ನು ನೆಡುವುದನ್ನು ಪ್ರಾರಂಭಿಸಿದರು. ಅಂದರೆ ಒಂದು ಜಾತಿಯ ಮರಗಳು ಹೂವರಳಿಸಿ ಬಾಡುವಷ್ಟರಲ್ಲಿ ಮತ್ತೊಂದು ಜಾತಿಯ ಮರಗಳು ಹೂವರಳಿಸಿರಬೇಕು. ಅವರು ಈ ಟಬೂಬಿಯಾ ಜಾತಿಯ ಮರಗಳನ್ನು ಸಾಕಷ್ಟು ನೆಡಲು ಪ್ರೋತ್ಸಾಹಿಸಿದರು” ಎನ್ನುತ್ತಾರೆ ತೋಟಗಾರಿಕೆ ಸಮಾಲೋಚಕ ಮತ್ತು ತಜ್ಞ ಭಕ್ತರಹಳ್ಳಿಯ ಸಂತೆ ನಾರಾಯಣಸ್ವಾಮಿ.

“ಟಬೂಬಿಯಾ ಅವಲಾನಿಡೇ ಜಾತಿಯ ಮರ ನವೆಂಬರ್, ಡಿಸೆಂಬರ್, ಜನವರಿ ತಿಂಗಳಿನಲ್ಲಿ ಗಾಢವಾದ ಗುಲಾಬಿ ಬಣ್ಣದ ಹೂಬಿಡುತ್ತದೆ. ಅದು ಮುಗಿಯುವಷ್ಟರಲ್ಲಿ ಟಬೂಬಿಯಾ ಅರ್ಜೆನ್ಷಿಯಾ ಗಾಢ ಹಳದಿ ಬಣ್ಣದ ಹೂವರಳಿಸಿಕೊಂಡು ಗಮನ ಸೆಳೆದರೆ, ಟಬೂಬಿಯಾ ಸ್ಪೆಕ್ಟಾಬಿಲಿಸ್ ತಿಳಿ ಹಳದಿ ಹೂವರಳಿಸುತ್ತವೆ. ಇವು ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಇರುತ್ತವೆ. ಹಳದಿ ಹೂಗಳು ಉದುರುವ ಸಮಯಕ್ಕೆ ಸರಿಯಾಗಿ ಅಂದರೆ, ಯುಗಾದಿಗೆ ಸ್ವಾಗತ ಕೋರುವುದೇ ಟಬೂಬಿಯಾ ರೋಸಿಯಾ. ಇದರ ಸೊಬಗು ಮತ್ತು ಬೆಡಗನ್ನು ’ತಿಳಿಗುಲಾಬಿ ಸೀರೆಯನ್ನು ಧರಿಸಿರುವ ಸುಂದರಿ’ ಎಂದು ಕರೆದಿದ್ದೇನೆ. ಸುಮಾರು ಏಪ್ರಿಲ್ ತಿಂಗಳವರೆಗೂ ಇರುವ ಈ ಹೂವಿನ ನಂತರ ಕತ್ತಿಕಾಯಿ ಮರ ಅಂದರೆ ಮೇ ಫ್ಲವರ್ ಹೂ ಬಿಡುತ್ತದೆ. ಹೀಗೇ ಟ್ಯುಲಿಪ್ ಮರ ಅಥವಾ ನೀರುಗಾಯಿಮರ ಚಂದದ ಹೂ ಬಿಡುತ್ತದೆ ಹೀಗೇ ಸಾಗಿ ದಸರಾ ಮರಗಳೆಂದು ಕರೆಯುವ ಕಲ್ವಿಲೇ ರೆಸಿಮೋಸಾ ಕೇಸರಿ ಬಣ್ಣದ ಹೂಬಿಡುವವರೆಗೂ ಸಾಗುತ್ತದೆ. ಈ ದಸರಾ ಮರಗಳನ್ನು ಕ್ರುಂಬಿಗಲ್ ಅವರು ಮೈಸೂರಿನಲ್ಲಿ ನೆಟ್ಟಿದ್ದಾರೆ. ಲಿಲ್ಲಿ ಹೂವರಳಿದಾಗ ಲಂಡನ್ನಿಗೆ ಭೇಟಿ ಕೊಡು; ಟಬೂಬಿಯಾ ಹೂಬಿಟ್ಟಾಗ ಬೆಂಗಳೂರಿಗೆ ಭೇಟಿ ನೀಡು ಎಂಬ ಮಾತು ಚಾಲ್ತಿಯಲ್ಲಿದೆ” ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ಬಲು ಅಪರೂಪದ ಟಬೂಬಿಯಾ ಸ್ಪೆಕ್ಟಾಬಿಲಿಸ್ ಜಾತಿಯ ಮರಗಳಿವೆ. ತಿಳಿ ಹಳದಿ ಹೂವರಳಿಸುವ ಈ ಮರಗಳು ಬೆಂಗಳೂರಿನಲ್ಲಿ ಹೆಚ್ಚೆಂದರೆ ೫೦ ಇರಬಹುದು. ನಮ್ಮ ರಾಜಭವನದಲ್ಲಿ ಟಬೂಬಿಯಾ ದೊನ್ನೆಲ್ ಸ್ಮಿತಿ ಎಂಬ ಜಾತಿಯ ಮರವಿದೆ. ಗಾಢ ಹಳದಿ ಬಣ್ಣದ ಹೂಗಳನ್ನು ಬಿಡುವ ಈ ಮರದ ಕಾಂಡ ಮೃದು. ಬೆಂಗಳೂರಿನಲ್ಲಿ ಈ ಜಾತಿಯವು ಸುಮಾರು ಹತ್ತು ಮರಗಳಿರಬೇಕಷ್ಟೇ.

“ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. ೭೦ರ ದಶಕದಲ್ಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು. ಕನಿಷ್ಠ ಒಂದು ಸಾವಿರವಾದರೂ ಅಲ್ಲಿ ಟಬೂಬಿಯಾ ಮರಗಳಿವೆ. ಪ್ರತಿ ವರ್ಷ ನವೆಂಬರ್‌ನಿಂದ ಮೇ ವರೆಗೆ ಅಲ್ಲಿ ಬಣ್ಣಬಣ್ಣದ ಹೂಗಳನ್ನು ನೋಡಲು ಎರಡು ಕಣ್ಣುಗಳು ಸಾಲವು. ಅಲ್ಲಿ ಒಂದು ದಶಕ ಗಾರ್ಡನ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಿದ ಅದೃಷ್ಟ ನನ್ನದು” ಎನ್ನುತ್ತಾರೆ ಸಂತೆ ನಾರಾಯಣಸ್ವಾಮಿ.

ಹೊರಗೆ ತಾರಾಡುವಾಗ ಈ ಸಂತಸ ಅರಳುವ ಸಮಯವನ್ನು ಕಣ್ಣುತುಂಬಿಸಿಕೊಳ್ಳುವುದನ್ನು ಮರೆಯದಿರಿ.

(ವಿ. ಸೂ: ಟಿ.ಪಿ.ಇಸ್ಸಾರ್ ಅವರು ಬೆಂಗಳೂರಿನ ಎಲ್ಲಾ ಹೂ ಬಿಡುವ ಮರಗಳ ಕುರಿತಾದ ಕಾಫಿ ಟೇಬಲ್ ಪುಸ್ತಕ ’ಬ್ಲಾಸಮ್ಸ್ ಆಫ್ ಬೆಂಗಳೂರು’ ಹೊರತಂದಿದ್ದಾರೆ.)

ಡಿ ಜಿ ಮಲ್ಲಿಕಾರ್ಜುನ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದವರಾದ ಡಿ.ಜಿ. ಮಲ್ಲಿಕಾರ್ಜುನ ಅವರ ನೆಚ್ಚಿನ ಹವ್ಯಾಸ ಫೋಟೋಗ್ರಫಿ. ರಸ್ಕಿನ್ ಬಾಂಡ್ ಕಥೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರಲ್ಲದೆ, ಫೋಟೋಗ್ರಪಿ ವಿಷಯವಾಗಿ ’ಕ್ಲಿಕ್, ’ಅರೆಕ್ಷಣದ ಅದೃಷ್ಟ’ ಪುಸ್ತಕಗಳನ್ನು ರಚಿಸಿದ್ದಾರೆ.

ಫೋಟೋಗಳು: ಸಂತೆ ನಾರಾಯಣಸ್ವಾಮಿ ಮತ್ತು ಮಂಜುನಾಥ ಚಾರ್ವಾಕ


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...