Homeಮುಖಪುಟಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

ಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

"ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. 70ರ ದಶಕದಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು.

- Advertisement -
- Advertisement -

ಒಂದು ಶತಮಾನಕ್ಕೂ ಮುಂಚೆ ಭಾರತಕ್ಕೆ ಬಂದ ದಕ್ಷಿಣ ಅಮೆರಿಕ ಮೂಲದ ಟಬೂಬಿಯಾ ಜಾತಿಯ ಮರಗಳು ಈಗ ಭಾರತದ್ದೇ ಆಗಿಹೋಗಿವೆ. ಸರಣಿ ಹೂ ಬಿಡುವ ಮರಗಳೆಂದೇ ಇವನ್ನು ಬಣ್ಣಿಸಲಾಗಿದೆ. ಬೆಂಗಳೂರಿನ ಬೀದಿಗಳಿಗೆ ಈ ಹೂ ಬಿಡುವ ಮರಗಳು ನೀಡುವ ಮೆರಗು ಆಕರ್ಷಕ. ತಾರಾಡಿಗರ ತನುಮನಗಳನ್ನು ತಣಿಸುವ ಟಬೂಬಿಯಾ ಮರಗಳು ಹಲವು ಬಗೆಗಳಲ್ಲಿದ್ದು, ಆಯಾ ಬಗೆಯವು ನಿರ್ದಿಷ್ಟ ಕೆಲವು ತಿಂಗಳಿನಲ್ಲಿ ಸುಂದರವಾದ ಬಣ್ಣ ಬಣ್ಣದ ಹೂವನ್ನು ಅರಳಿಸಿ ಸುತ್ತಲಿನ ಪ್ರಕೃತಿಯನ್ನು ಹಾಗೂ ನೋಡುಗರ ಮನಸ್ಸನ್ನೂ ಅರಳಿಸುತ್ತವೆ. ಈ ಹೂಗಳು ಮರಗಳ ಕೆಳಗೆ ಉದುರಿದಾಗ ಸುಂದರವಾದ ಕಾರ್ಪೆಟ್ ಹಾಸಿದಂತೆ ಕಾಣುತ್ತವೆ.

ಟಬೂಬಿಯಾ ಅವಲಾನಿಡೇ ಮರಗಳು ನವೆಂಬರ್ ತಿಂಗಳಿನಲ್ಲಿ ಮೊಟ್ಟಮೊದಲು ಗಾಢವಾದ ಗುಲಾಬಿ ಬಣ್ಣದ ಹೂಗಳನ್ನು ಅರಳಿಸಿ ಹೂಗಳ ಋತುವಿನ ಪ್ರಾರಂಭವನ್ನು ಸಾರುತ್ತವೆ. ಬೆಂಗಳೂರಿನ ವಿವಿಧೆಡೆ ಈ ಹೂಗಳ ಮರಗಳಿವೆ. ನವೆಂಬರ್-ಡಿಸೆಂಬರ್ ತಿಂಗಳುಗಳಲ್ಲಿ ಈ ಹೂಗಳ ಮೆರಗನ್ನು ನಾವು ಕಾಣಬಹುದಾಗಿದೆ. ಈ ವರ್ಷ ತೀವ್ರ ಸೈಕ್ಲೋನ್‌ನಿಂದಾಗಿ ಹೂವುಗಳು ಉದುರಿ ನೆಲವನ್ನು ಹೊದ್ದ ದೃಶ್ಯವೂ ಮನಮೋಹಕ.

“1908ರಲ್ಲಿ ಲಾಲ್‌ಬಾಗ್ ಕ್ಯುರೇಟರ್ ಆಗಿ ಬಂದವರು ಕ್ರುಂಬಿಗಲ್. ಅವರು ಲಾಲ್‌ಬಾಗ್‌ಗೆ ಸೀಮಿತವಾಗಿದ್ದ ಉದ್ಯಾನವನ್ನು ನಗರದ ವಿವಿಧ ಬಡಾವಣೆಗಳಿಗೆ, ಮನೆಗಳಿಗೆ ಕೊಂಡೊಯ್ದರು. ಅವರು ಈ ಸರಣಿ ಹೂ ಬಿಡುವ ಮರಗಳನ್ನು ನೆಡುವುದನ್ನು ಪ್ರಾರಂಭಿಸಿದರು. ಅಂದರೆ ಒಂದು ಜಾತಿಯ ಮರಗಳು ಹೂವರಳಿಸಿ ಬಾಡುವಷ್ಟರಲ್ಲಿ ಮತ್ತೊಂದು ಜಾತಿಯ ಮರಗಳು ಹೂವರಳಿಸಿರಬೇಕು. ಅವರು ಈ ಟಬೂಬಿಯಾ ಜಾತಿಯ ಮರಗಳನ್ನು ಸಾಕಷ್ಟು ನೆಡಲು ಪ್ರೋತ್ಸಾಹಿಸಿದರು” ಎನ್ನುತ್ತಾರೆ ತೋಟಗಾರಿಕೆ ಸಮಾಲೋಚಕ ಮತ್ತು ತಜ್ಞ ಭಕ್ತರಹಳ್ಳಿಯ ಸಂತೆ ನಾರಾಯಣಸ್ವಾಮಿ.

“ಟಬೂಬಿಯಾ ಅವಲಾನಿಡೇ ಜಾತಿಯ ಮರ ನವೆಂಬರ್, ಡಿಸೆಂಬರ್, ಜನವರಿ ತಿಂಗಳಿನಲ್ಲಿ ಗಾಢವಾದ ಗುಲಾಬಿ ಬಣ್ಣದ ಹೂಬಿಡುತ್ತದೆ. ಅದು ಮುಗಿಯುವಷ್ಟರಲ್ಲಿ ಟಬೂಬಿಯಾ ಅರ್ಜೆನ್ಷಿಯಾ ಗಾಢ ಹಳದಿ ಬಣ್ಣದ ಹೂವರಳಿಸಿಕೊಂಡು ಗಮನ ಸೆಳೆದರೆ, ಟಬೂಬಿಯಾ ಸ್ಪೆಕ್ಟಾಬಿಲಿಸ್ ತಿಳಿ ಹಳದಿ ಹೂವರಳಿಸುತ್ತವೆ. ಇವು ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಇರುತ್ತವೆ. ಹಳದಿ ಹೂಗಳು ಉದುರುವ ಸಮಯಕ್ಕೆ ಸರಿಯಾಗಿ ಅಂದರೆ, ಯುಗಾದಿಗೆ ಸ್ವಾಗತ ಕೋರುವುದೇ ಟಬೂಬಿಯಾ ರೋಸಿಯಾ. ಇದರ ಸೊಬಗು ಮತ್ತು ಬೆಡಗನ್ನು ’ತಿಳಿಗುಲಾಬಿ ಸೀರೆಯನ್ನು ಧರಿಸಿರುವ ಸುಂದರಿ’ ಎಂದು ಕರೆದಿದ್ದೇನೆ. ಸುಮಾರು ಏಪ್ರಿಲ್ ತಿಂಗಳವರೆಗೂ ಇರುವ ಈ ಹೂವಿನ ನಂತರ ಕತ್ತಿಕಾಯಿ ಮರ ಅಂದರೆ ಮೇ ಫ್ಲವರ್ ಹೂ ಬಿಡುತ್ತದೆ. ಹೀಗೇ ಟ್ಯುಲಿಪ್ ಮರ ಅಥವಾ ನೀರುಗಾಯಿಮರ ಚಂದದ ಹೂ ಬಿಡುತ್ತದೆ ಹೀಗೇ ಸಾಗಿ ದಸರಾ ಮರಗಳೆಂದು ಕರೆಯುವ ಕಲ್ವಿಲೇ ರೆಸಿಮೋಸಾ ಕೇಸರಿ ಬಣ್ಣದ ಹೂಬಿಡುವವರೆಗೂ ಸಾಗುತ್ತದೆ. ಈ ದಸರಾ ಮರಗಳನ್ನು ಕ್ರುಂಬಿಗಲ್ ಅವರು ಮೈಸೂರಿನಲ್ಲಿ ನೆಟ್ಟಿದ್ದಾರೆ. ಲಿಲ್ಲಿ ಹೂವರಳಿದಾಗ ಲಂಡನ್ನಿಗೆ ಭೇಟಿ ಕೊಡು; ಟಬೂಬಿಯಾ ಹೂಬಿಟ್ಟಾಗ ಬೆಂಗಳೂರಿಗೆ ಭೇಟಿ ನೀಡು ಎಂಬ ಮಾತು ಚಾಲ್ತಿಯಲ್ಲಿದೆ” ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ಬಲು ಅಪರೂಪದ ಟಬೂಬಿಯಾ ಸ್ಪೆಕ್ಟಾಬಿಲಿಸ್ ಜಾತಿಯ ಮರಗಳಿವೆ. ತಿಳಿ ಹಳದಿ ಹೂವರಳಿಸುವ ಈ ಮರಗಳು ಬೆಂಗಳೂರಿನಲ್ಲಿ ಹೆಚ್ಚೆಂದರೆ ೫೦ ಇರಬಹುದು. ನಮ್ಮ ರಾಜಭವನದಲ್ಲಿ ಟಬೂಬಿಯಾ ದೊನ್ನೆಲ್ ಸ್ಮಿತಿ ಎಂಬ ಜಾತಿಯ ಮರವಿದೆ. ಗಾಢ ಹಳದಿ ಬಣ್ಣದ ಹೂಗಳನ್ನು ಬಿಡುವ ಈ ಮರದ ಕಾಂಡ ಮೃದು. ಬೆಂಗಳೂರಿನಲ್ಲಿ ಈ ಜಾತಿಯವು ಸುಮಾರು ಹತ್ತು ಮರಗಳಿರಬೇಕಷ್ಟೇ.

“ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. ೭೦ರ ದಶಕದಲ್ಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು. ಕನಿಷ್ಠ ಒಂದು ಸಾವಿರವಾದರೂ ಅಲ್ಲಿ ಟಬೂಬಿಯಾ ಮರಗಳಿವೆ. ಪ್ರತಿ ವರ್ಷ ನವೆಂಬರ್‌ನಿಂದ ಮೇ ವರೆಗೆ ಅಲ್ಲಿ ಬಣ್ಣಬಣ್ಣದ ಹೂಗಳನ್ನು ನೋಡಲು ಎರಡು ಕಣ್ಣುಗಳು ಸಾಲವು. ಅಲ್ಲಿ ಒಂದು ದಶಕ ಗಾರ್ಡನ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಿದ ಅದೃಷ್ಟ ನನ್ನದು” ಎನ್ನುತ್ತಾರೆ ಸಂತೆ ನಾರಾಯಣಸ್ವಾಮಿ.

ಹೊರಗೆ ತಾರಾಡುವಾಗ ಈ ಸಂತಸ ಅರಳುವ ಸಮಯವನ್ನು ಕಣ್ಣುತುಂಬಿಸಿಕೊಳ್ಳುವುದನ್ನು ಮರೆಯದಿರಿ.

(ವಿ. ಸೂ: ಟಿ.ಪಿ.ಇಸ್ಸಾರ್ ಅವರು ಬೆಂಗಳೂರಿನ ಎಲ್ಲಾ ಹೂ ಬಿಡುವ ಮರಗಳ ಕುರಿತಾದ ಕಾಫಿ ಟೇಬಲ್ ಪುಸ್ತಕ ’ಬ್ಲಾಸಮ್ಸ್ ಆಫ್ ಬೆಂಗಳೂರು’ ಹೊರತಂದಿದ್ದಾರೆ.)

ಡಿ ಜಿ ಮಲ್ಲಿಕಾರ್ಜುನ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದವರಾದ ಡಿ.ಜಿ. ಮಲ್ಲಿಕಾರ್ಜುನ ಅವರ ನೆಚ್ಚಿನ ಹವ್ಯಾಸ ಫೋಟೋಗ್ರಫಿ. ರಸ್ಕಿನ್ ಬಾಂಡ್ ಕಥೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರಲ್ಲದೆ, ಫೋಟೋಗ್ರಪಿ ವಿಷಯವಾಗಿ ’ಕ್ಲಿಕ್, ’ಅರೆಕ್ಷಣದ ಅದೃಷ್ಟ’ ಪುಸ್ತಕಗಳನ್ನು ರಚಿಸಿದ್ದಾರೆ.

ಫೋಟೋಗಳು: ಸಂತೆ ನಾರಾಯಣಸ್ವಾಮಿ ಮತ್ತು ಮಂಜುನಾಥ ಚಾರ್ವಾಕ


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...