Homeಮುಖಪುಟಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

ಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

"ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. 70ರ ದಶಕದಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು.

- Advertisement -
- Advertisement -

ಒಂದು ಶತಮಾನಕ್ಕೂ ಮುಂಚೆ ಭಾರತಕ್ಕೆ ಬಂದ ದಕ್ಷಿಣ ಅಮೆರಿಕ ಮೂಲದ ಟಬೂಬಿಯಾ ಜಾತಿಯ ಮರಗಳು ಈಗ ಭಾರತದ್ದೇ ಆಗಿಹೋಗಿವೆ. ಸರಣಿ ಹೂ ಬಿಡುವ ಮರಗಳೆಂದೇ ಇವನ್ನು ಬಣ್ಣಿಸಲಾಗಿದೆ. ಬೆಂಗಳೂರಿನ ಬೀದಿಗಳಿಗೆ ಈ ಹೂ ಬಿಡುವ ಮರಗಳು ನೀಡುವ ಮೆರಗು ಆಕರ್ಷಕ. ತಾರಾಡಿಗರ ತನುಮನಗಳನ್ನು ತಣಿಸುವ ಟಬೂಬಿಯಾ ಮರಗಳು ಹಲವು ಬಗೆಗಳಲ್ಲಿದ್ದು, ಆಯಾ ಬಗೆಯವು ನಿರ್ದಿಷ್ಟ ಕೆಲವು ತಿಂಗಳಿನಲ್ಲಿ ಸುಂದರವಾದ ಬಣ್ಣ ಬಣ್ಣದ ಹೂವನ್ನು ಅರಳಿಸಿ ಸುತ್ತಲಿನ ಪ್ರಕೃತಿಯನ್ನು ಹಾಗೂ ನೋಡುಗರ ಮನಸ್ಸನ್ನೂ ಅರಳಿಸುತ್ತವೆ. ಈ ಹೂಗಳು ಮರಗಳ ಕೆಳಗೆ ಉದುರಿದಾಗ ಸುಂದರವಾದ ಕಾರ್ಪೆಟ್ ಹಾಸಿದಂತೆ ಕಾಣುತ್ತವೆ.

ಟಬೂಬಿಯಾ ಅವಲಾನಿಡೇ ಮರಗಳು ನವೆಂಬರ್ ತಿಂಗಳಿನಲ್ಲಿ ಮೊಟ್ಟಮೊದಲು ಗಾಢವಾದ ಗುಲಾಬಿ ಬಣ್ಣದ ಹೂಗಳನ್ನು ಅರಳಿಸಿ ಹೂಗಳ ಋತುವಿನ ಪ್ರಾರಂಭವನ್ನು ಸಾರುತ್ತವೆ. ಬೆಂಗಳೂರಿನ ವಿವಿಧೆಡೆ ಈ ಹೂಗಳ ಮರಗಳಿವೆ. ನವೆಂಬರ್-ಡಿಸೆಂಬರ್ ತಿಂಗಳುಗಳಲ್ಲಿ ಈ ಹೂಗಳ ಮೆರಗನ್ನು ನಾವು ಕಾಣಬಹುದಾಗಿದೆ. ಈ ವರ್ಷ ತೀವ್ರ ಸೈಕ್ಲೋನ್‌ನಿಂದಾಗಿ ಹೂವುಗಳು ಉದುರಿ ನೆಲವನ್ನು ಹೊದ್ದ ದೃಶ್ಯವೂ ಮನಮೋಹಕ.

“1908ರಲ್ಲಿ ಲಾಲ್‌ಬಾಗ್ ಕ್ಯುರೇಟರ್ ಆಗಿ ಬಂದವರು ಕ್ರುಂಬಿಗಲ್. ಅವರು ಲಾಲ್‌ಬಾಗ್‌ಗೆ ಸೀಮಿತವಾಗಿದ್ದ ಉದ್ಯಾನವನ್ನು ನಗರದ ವಿವಿಧ ಬಡಾವಣೆಗಳಿಗೆ, ಮನೆಗಳಿಗೆ ಕೊಂಡೊಯ್ದರು. ಅವರು ಈ ಸರಣಿ ಹೂ ಬಿಡುವ ಮರಗಳನ್ನು ನೆಡುವುದನ್ನು ಪ್ರಾರಂಭಿಸಿದರು. ಅಂದರೆ ಒಂದು ಜಾತಿಯ ಮರಗಳು ಹೂವರಳಿಸಿ ಬಾಡುವಷ್ಟರಲ್ಲಿ ಮತ್ತೊಂದು ಜಾತಿಯ ಮರಗಳು ಹೂವರಳಿಸಿರಬೇಕು. ಅವರು ಈ ಟಬೂಬಿಯಾ ಜಾತಿಯ ಮರಗಳನ್ನು ಸಾಕಷ್ಟು ನೆಡಲು ಪ್ರೋತ್ಸಾಹಿಸಿದರು” ಎನ್ನುತ್ತಾರೆ ತೋಟಗಾರಿಕೆ ಸಮಾಲೋಚಕ ಮತ್ತು ತಜ್ಞ ಭಕ್ತರಹಳ್ಳಿಯ ಸಂತೆ ನಾರಾಯಣಸ್ವಾಮಿ.

“ಟಬೂಬಿಯಾ ಅವಲಾನಿಡೇ ಜಾತಿಯ ಮರ ನವೆಂಬರ್, ಡಿಸೆಂಬರ್, ಜನವರಿ ತಿಂಗಳಿನಲ್ಲಿ ಗಾಢವಾದ ಗುಲಾಬಿ ಬಣ್ಣದ ಹೂಬಿಡುತ್ತದೆ. ಅದು ಮುಗಿಯುವಷ್ಟರಲ್ಲಿ ಟಬೂಬಿಯಾ ಅರ್ಜೆನ್ಷಿಯಾ ಗಾಢ ಹಳದಿ ಬಣ್ಣದ ಹೂವರಳಿಸಿಕೊಂಡು ಗಮನ ಸೆಳೆದರೆ, ಟಬೂಬಿಯಾ ಸ್ಪೆಕ್ಟಾಬಿಲಿಸ್ ತಿಳಿ ಹಳದಿ ಹೂವರಳಿಸುತ್ತವೆ. ಇವು ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಇರುತ್ತವೆ. ಹಳದಿ ಹೂಗಳು ಉದುರುವ ಸಮಯಕ್ಕೆ ಸರಿಯಾಗಿ ಅಂದರೆ, ಯುಗಾದಿಗೆ ಸ್ವಾಗತ ಕೋರುವುದೇ ಟಬೂಬಿಯಾ ರೋಸಿಯಾ. ಇದರ ಸೊಬಗು ಮತ್ತು ಬೆಡಗನ್ನು ’ತಿಳಿಗುಲಾಬಿ ಸೀರೆಯನ್ನು ಧರಿಸಿರುವ ಸುಂದರಿ’ ಎಂದು ಕರೆದಿದ್ದೇನೆ. ಸುಮಾರು ಏಪ್ರಿಲ್ ತಿಂಗಳವರೆಗೂ ಇರುವ ಈ ಹೂವಿನ ನಂತರ ಕತ್ತಿಕಾಯಿ ಮರ ಅಂದರೆ ಮೇ ಫ್ಲವರ್ ಹೂ ಬಿಡುತ್ತದೆ. ಹೀಗೇ ಟ್ಯುಲಿಪ್ ಮರ ಅಥವಾ ನೀರುಗಾಯಿಮರ ಚಂದದ ಹೂ ಬಿಡುತ್ತದೆ ಹೀಗೇ ಸಾಗಿ ದಸರಾ ಮರಗಳೆಂದು ಕರೆಯುವ ಕಲ್ವಿಲೇ ರೆಸಿಮೋಸಾ ಕೇಸರಿ ಬಣ್ಣದ ಹೂಬಿಡುವವರೆಗೂ ಸಾಗುತ್ತದೆ. ಈ ದಸರಾ ಮರಗಳನ್ನು ಕ್ರುಂಬಿಗಲ್ ಅವರು ಮೈಸೂರಿನಲ್ಲಿ ನೆಟ್ಟಿದ್ದಾರೆ. ಲಿಲ್ಲಿ ಹೂವರಳಿದಾಗ ಲಂಡನ್ನಿಗೆ ಭೇಟಿ ಕೊಡು; ಟಬೂಬಿಯಾ ಹೂಬಿಟ್ಟಾಗ ಬೆಂಗಳೂರಿಗೆ ಭೇಟಿ ನೀಡು ಎಂಬ ಮಾತು ಚಾಲ್ತಿಯಲ್ಲಿದೆ” ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ಬಲು ಅಪರೂಪದ ಟಬೂಬಿಯಾ ಸ್ಪೆಕ್ಟಾಬಿಲಿಸ್ ಜಾತಿಯ ಮರಗಳಿವೆ. ತಿಳಿ ಹಳದಿ ಹೂವರಳಿಸುವ ಈ ಮರಗಳು ಬೆಂಗಳೂರಿನಲ್ಲಿ ಹೆಚ್ಚೆಂದರೆ ೫೦ ಇರಬಹುದು. ನಮ್ಮ ರಾಜಭವನದಲ್ಲಿ ಟಬೂಬಿಯಾ ದೊನ್ನೆಲ್ ಸ್ಮಿತಿ ಎಂಬ ಜಾತಿಯ ಮರವಿದೆ. ಗಾಢ ಹಳದಿ ಬಣ್ಣದ ಹೂಗಳನ್ನು ಬಿಡುವ ಈ ಮರದ ಕಾಂಡ ಮೃದು. ಬೆಂಗಳೂರಿನಲ್ಲಿ ಈ ಜಾತಿಯವು ಸುಮಾರು ಹತ್ತು ಮರಗಳಿರಬೇಕಷ್ಟೇ.

“ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. ೭೦ರ ದಶಕದಲ್ಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು. ಕನಿಷ್ಠ ಒಂದು ಸಾವಿರವಾದರೂ ಅಲ್ಲಿ ಟಬೂಬಿಯಾ ಮರಗಳಿವೆ. ಪ್ರತಿ ವರ್ಷ ನವೆಂಬರ್‌ನಿಂದ ಮೇ ವರೆಗೆ ಅಲ್ಲಿ ಬಣ್ಣಬಣ್ಣದ ಹೂಗಳನ್ನು ನೋಡಲು ಎರಡು ಕಣ್ಣುಗಳು ಸಾಲವು. ಅಲ್ಲಿ ಒಂದು ದಶಕ ಗಾರ್ಡನ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಿದ ಅದೃಷ್ಟ ನನ್ನದು” ಎನ್ನುತ್ತಾರೆ ಸಂತೆ ನಾರಾಯಣಸ್ವಾಮಿ.

ಹೊರಗೆ ತಾರಾಡುವಾಗ ಈ ಸಂತಸ ಅರಳುವ ಸಮಯವನ್ನು ಕಣ್ಣುತುಂಬಿಸಿಕೊಳ್ಳುವುದನ್ನು ಮರೆಯದಿರಿ.

(ವಿ. ಸೂ: ಟಿ.ಪಿ.ಇಸ್ಸಾರ್ ಅವರು ಬೆಂಗಳೂರಿನ ಎಲ್ಲಾ ಹೂ ಬಿಡುವ ಮರಗಳ ಕುರಿತಾದ ಕಾಫಿ ಟೇಬಲ್ ಪುಸ್ತಕ ’ಬ್ಲಾಸಮ್ಸ್ ಆಫ್ ಬೆಂಗಳೂರು’ ಹೊರತಂದಿದ್ದಾರೆ.)

ಡಿ ಜಿ ಮಲ್ಲಿಕಾರ್ಜುನ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದವರಾದ ಡಿ.ಜಿ. ಮಲ್ಲಿಕಾರ್ಜುನ ಅವರ ನೆಚ್ಚಿನ ಹವ್ಯಾಸ ಫೋಟೋಗ್ರಫಿ. ರಸ್ಕಿನ್ ಬಾಂಡ್ ಕಥೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರಲ್ಲದೆ, ಫೋಟೋಗ್ರಪಿ ವಿಷಯವಾಗಿ ’ಕ್ಲಿಕ್, ’ಅರೆಕ್ಷಣದ ಅದೃಷ್ಟ’ ಪುಸ್ತಕಗಳನ್ನು ರಚಿಸಿದ್ದಾರೆ.

ಫೋಟೋಗಳು: ಸಂತೆ ನಾರಾಯಣಸ್ವಾಮಿ ಮತ್ತು ಮಂಜುನಾಥ ಚಾರ್ವಾಕ


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...