Homeಮುಖಪುಟಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

ಸಂತಸ ಅರಳುವ ಸಮಯ; ಬೆಂಗಳೂರು ಮತ್ತು ಟಬೂಬಿಯಾ ಹೂಗಳ ಸಂಭ್ರಮ

"ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. 70ರ ದಶಕದಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು.

- Advertisement -
- Advertisement -

ಒಂದು ಶತಮಾನಕ್ಕೂ ಮುಂಚೆ ಭಾರತಕ್ಕೆ ಬಂದ ದಕ್ಷಿಣ ಅಮೆರಿಕ ಮೂಲದ ಟಬೂಬಿಯಾ ಜಾತಿಯ ಮರಗಳು ಈಗ ಭಾರತದ್ದೇ ಆಗಿಹೋಗಿವೆ. ಸರಣಿ ಹೂ ಬಿಡುವ ಮರಗಳೆಂದೇ ಇವನ್ನು ಬಣ್ಣಿಸಲಾಗಿದೆ. ಬೆಂಗಳೂರಿನ ಬೀದಿಗಳಿಗೆ ಈ ಹೂ ಬಿಡುವ ಮರಗಳು ನೀಡುವ ಮೆರಗು ಆಕರ್ಷಕ. ತಾರಾಡಿಗರ ತನುಮನಗಳನ್ನು ತಣಿಸುವ ಟಬೂಬಿಯಾ ಮರಗಳು ಹಲವು ಬಗೆಗಳಲ್ಲಿದ್ದು, ಆಯಾ ಬಗೆಯವು ನಿರ್ದಿಷ್ಟ ಕೆಲವು ತಿಂಗಳಿನಲ್ಲಿ ಸುಂದರವಾದ ಬಣ್ಣ ಬಣ್ಣದ ಹೂವನ್ನು ಅರಳಿಸಿ ಸುತ್ತಲಿನ ಪ್ರಕೃತಿಯನ್ನು ಹಾಗೂ ನೋಡುಗರ ಮನಸ್ಸನ್ನೂ ಅರಳಿಸುತ್ತವೆ. ಈ ಹೂಗಳು ಮರಗಳ ಕೆಳಗೆ ಉದುರಿದಾಗ ಸುಂದರವಾದ ಕಾರ್ಪೆಟ್ ಹಾಸಿದಂತೆ ಕಾಣುತ್ತವೆ.

ಟಬೂಬಿಯಾ ಅವಲಾನಿಡೇ ಮರಗಳು ನವೆಂಬರ್ ತಿಂಗಳಿನಲ್ಲಿ ಮೊಟ್ಟಮೊದಲು ಗಾಢವಾದ ಗುಲಾಬಿ ಬಣ್ಣದ ಹೂಗಳನ್ನು ಅರಳಿಸಿ ಹೂಗಳ ಋತುವಿನ ಪ್ರಾರಂಭವನ್ನು ಸಾರುತ್ತವೆ. ಬೆಂಗಳೂರಿನ ವಿವಿಧೆಡೆ ಈ ಹೂಗಳ ಮರಗಳಿವೆ. ನವೆಂಬರ್-ಡಿಸೆಂಬರ್ ತಿಂಗಳುಗಳಲ್ಲಿ ಈ ಹೂಗಳ ಮೆರಗನ್ನು ನಾವು ಕಾಣಬಹುದಾಗಿದೆ. ಈ ವರ್ಷ ತೀವ್ರ ಸೈಕ್ಲೋನ್‌ನಿಂದಾಗಿ ಹೂವುಗಳು ಉದುರಿ ನೆಲವನ್ನು ಹೊದ್ದ ದೃಶ್ಯವೂ ಮನಮೋಹಕ.

“1908ರಲ್ಲಿ ಲಾಲ್‌ಬಾಗ್ ಕ್ಯುರೇಟರ್ ಆಗಿ ಬಂದವರು ಕ್ರುಂಬಿಗಲ್. ಅವರು ಲಾಲ್‌ಬಾಗ್‌ಗೆ ಸೀಮಿತವಾಗಿದ್ದ ಉದ್ಯಾನವನ್ನು ನಗರದ ವಿವಿಧ ಬಡಾವಣೆಗಳಿಗೆ, ಮನೆಗಳಿಗೆ ಕೊಂಡೊಯ್ದರು. ಅವರು ಈ ಸರಣಿ ಹೂ ಬಿಡುವ ಮರಗಳನ್ನು ನೆಡುವುದನ್ನು ಪ್ರಾರಂಭಿಸಿದರು. ಅಂದರೆ ಒಂದು ಜಾತಿಯ ಮರಗಳು ಹೂವರಳಿಸಿ ಬಾಡುವಷ್ಟರಲ್ಲಿ ಮತ್ತೊಂದು ಜಾತಿಯ ಮರಗಳು ಹೂವರಳಿಸಿರಬೇಕು. ಅವರು ಈ ಟಬೂಬಿಯಾ ಜಾತಿಯ ಮರಗಳನ್ನು ಸಾಕಷ್ಟು ನೆಡಲು ಪ್ರೋತ್ಸಾಹಿಸಿದರು” ಎನ್ನುತ್ತಾರೆ ತೋಟಗಾರಿಕೆ ಸಮಾಲೋಚಕ ಮತ್ತು ತಜ್ಞ ಭಕ್ತರಹಳ್ಳಿಯ ಸಂತೆ ನಾರಾಯಣಸ್ವಾಮಿ.

“ಟಬೂಬಿಯಾ ಅವಲಾನಿಡೇ ಜಾತಿಯ ಮರ ನವೆಂಬರ್, ಡಿಸೆಂಬರ್, ಜನವರಿ ತಿಂಗಳಿನಲ್ಲಿ ಗಾಢವಾದ ಗುಲಾಬಿ ಬಣ್ಣದ ಹೂಬಿಡುತ್ತದೆ. ಅದು ಮುಗಿಯುವಷ್ಟರಲ್ಲಿ ಟಬೂಬಿಯಾ ಅರ್ಜೆನ್ಷಿಯಾ ಗಾಢ ಹಳದಿ ಬಣ್ಣದ ಹೂವರಳಿಸಿಕೊಂಡು ಗಮನ ಸೆಳೆದರೆ, ಟಬೂಬಿಯಾ ಸ್ಪೆಕ್ಟಾಬಿಲಿಸ್ ತಿಳಿ ಹಳದಿ ಹೂವರಳಿಸುತ್ತವೆ. ಇವು ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಇರುತ್ತವೆ. ಹಳದಿ ಹೂಗಳು ಉದುರುವ ಸಮಯಕ್ಕೆ ಸರಿಯಾಗಿ ಅಂದರೆ, ಯುಗಾದಿಗೆ ಸ್ವಾಗತ ಕೋರುವುದೇ ಟಬೂಬಿಯಾ ರೋಸಿಯಾ. ಇದರ ಸೊಬಗು ಮತ್ತು ಬೆಡಗನ್ನು ’ತಿಳಿಗುಲಾಬಿ ಸೀರೆಯನ್ನು ಧರಿಸಿರುವ ಸುಂದರಿ’ ಎಂದು ಕರೆದಿದ್ದೇನೆ. ಸುಮಾರು ಏಪ್ರಿಲ್ ತಿಂಗಳವರೆಗೂ ಇರುವ ಈ ಹೂವಿನ ನಂತರ ಕತ್ತಿಕಾಯಿ ಮರ ಅಂದರೆ ಮೇ ಫ್ಲವರ್ ಹೂ ಬಿಡುತ್ತದೆ. ಹೀಗೇ ಟ್ಯುಲಿಪ್ ಮರ ಅಥವಾ ನೀರುಗಾಯಿಮರ ಚಂದದ ಹೂ ಬಿಡುತ್ತದೆ ಹೀಗೇ ಸಾಗಿ ದಸರಾ ಮರಗಳೆಂದು ಕರೆಯುವ ಕಲ್ವಿಲೇ ರೆಸಿಮೋಸಾ ಕೇಸರಿ ಬಣ್ಣದ ಹೂಬಿಡುವವರೆಗೂ ಸಾಗುತ್ತದೆ. ಈ ದಸರಾ ಮರಗಳನ್ನು ಕ್ರುಂಬಿಗಲ್ ಅವರು ಮೈಸೂರಿನಲ್ಲಿ ನೆಟ್ಟಿದ್ದಾರೆ. ಲಿಲ್ಲಿ ಹೂವರಳಿದಾಗ ಲಂಡನ್ನಿಗೆ ಭೇಟಿ ಕೊಡು; ಟಬೂಬಿಯಾ ಹೂಬಿಟ್ಟಾಗ ಬೆಂಗಳೂರಿಗೆ ಭೇಟಿ ನೀಡು ಎಂಬ ಮಾತು ಚಾಲ್ತಿಯಲ್ಲಿದೆ” ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ಬಲು ಅಪರೂಪದ ಟಬೂಬಿಯಾ ಸ್ಪೆಕ್ಟಾಬಿಲಿಸ್ ಜಾತಿಯ ಮರಗಳಿವೆ. ತಿಳಿ ಹಳದಿ ಹೂವರಳಿಸುವ ಈ ಮರಗಳು ಬೆಂಗಳೂರಿನಲ್ಲಿ ಹೆಚ್ಚೆಂದರೆ ೫೦ ಇರಬಹುದು. ನಮ್ಮ ರಾಜಭವನದಲ್ಲಿ ಟಬೂಬಿಯಾ ದೊನ್ನೆಲ್ ಸ್ಮಿತಿ ಎಂಬ ಜಾತಿಯ ಮರವಿದೆ. ಗಾಢ ಹಳದಿ ಬಣ್ಣದ ಹೂಗಳನ್ನು ಬಿಡುವ ಈ ಮರದ ಕಾಂಡ ಮೃದು. ಬೆಂಗಳೂರಿನಲ್ಲಿ ಈ ಜಾತಿಯವು ಸುಮಾರು ಹತ್ತು ಮರಗಳಿರಬೇಕಷ್ಟೇ.

“ಎಂಬತ್ತರ ದಶಕದವರೆಗೂ ಬೆಂಗಳೂರಿನ ವಿವಿಧ ವೃತ್ತಗಳು, ಉದ್ಯಾನವನ, ಸಾರ್ವಜನಿಕ ಕಟ್ಟಡಗಳ ಬಳಿ ಮಾತ್ರ ಈ ರೀತಿಯ ಮರಗಳನ್ನು ಕಾಣಬಹುದಾಗಿತ್ತು. ೭೦ರ ದಶಕದಲ್ಲಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ತೋಟಗಾರಿಕೆ ಸಲಹೆಗಾರರಾದ ಡಾ.ಮರಿಗೌಡ ಅವರು ಅಲ್ಲಿ ಅಶೋಕ, ಮಂದಾರ, ಟಬೂಬಿಯಾ, ಜಕರಂಡಾ ಮೊದಲಾದ ಅಸಂಖ್ಯ ಹೂಬಿಡುವ ಮರಗಳನ್ನು ನೆಡಿಸಿದರು. ಕನಿಷ್ಠ ಒಂದು ಸಾವಿರವಾದರೂ ಅಲ್ಲಿ ಟಬೂಬಿಯಾ ಮರಗಳಿವೆ. ಪ್ರತಿ ವರ್ಷ ನವೆಂಬರ್‌ನಿಂದ ಮೇ ವರೆಗೆ ಅಲ್ಲಿ ಬಣ್ಣಬಣ್ಣದ ಹೂಗಳನ್ನು ನೋಡಲು ಎರಡು ಕಣ್ಣುಗಳು ಸಾಲವು. ಅಲ್ಲಿ ಒಂದು ದಶಕ ಗಾರ್ಡನ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಿದ ಅದೃಷ್ಟ ನನ್ನದು” ಎನ್ನುತ್ತಾರೆ ಸಂತೆ ನಾರಾಯಣಸ್ವಾಮಿ.

ಹೊರಗೆ ತಾರಾಡುವಾಗ ಈ ಸಂತಸ ಅರಳುವ ಸಮಯವನ್ನು ಕಣ್ಣುತುಂಬಿಸಿಕೊಳ್ಳುವುದನ್ನು ಮರೆಯದಿರಿ.

(ವಿ. ಸೂ: ಟಿ.ಪಿ.ಇಸ್ಸಾರ್ ಅವರು ಬೆಂಗಳೂರಿನ ಎಲ್ಲಾ ಹೂ ಬಿಡುವ ಮರಗಳ ಕುರಿತಾದ ಕಾಫಿ ಟೇಬಲ್ ಪುಸ್ತಕ ’ಬ್ಲಾಸಮ್ಸ್ ಆಫ್ ಬೆಂಗಳೂರು’ ಹೊರತಂದಿದ್ದಾರೆ.)

ಡಿ ಜಿ ಮಲ್ಲಿಕಾರ್ಜುನ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದವರಾದ ಡಿ.ಜಿ. ಮಲ್ಲಿಕಾರ್ಜುನ ಅವರ ನೆಚ್ಚಿನ ಹವ್ಯಾಸ ಫೋಟೋಗ್ರಫಿ. ರಸ್ಕಿನ್ ಬಾಂಡ್ ಕಥೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರಲ್ಲದೆ, ಫೋಟೋಗ್ರಪಿ ವಿಷಯವಾಗಿ ’ಕ್ಲಿಕ್, ’ಅರೆಕ್ಷಣದ ಅದೃಷ್ಟ’ ಪುಸ್ತಕಗಳನ್ನು ರಚಿಸಿದ್ದಾರೆ.

ಫೋಟೋಗಳು: ಸಂತೆ ನಾರಾಯಣಸ್ವಾಮಿ ಮತ್ತು ಮಂಜುನಾಥ ಚಾರ್ವಾಕ


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...