Homeಕರೋನಾ ತಲ್ಲಣಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

29 ವಿದೇಶಿ ತಬ್ಲೀಘಿಗಳ ಎಫ್‌ಐಆರ್‌ಗಳನ್ನು ರದ್ದು ಪಡಿಸಿದ ನ್ಯಾಯಾಲಯ ತಬ್ಲೀಘಿ ವಿಚಾರದಲ್ಲಿ ಅಪಪ್ರಚಾರ ಮಾಡಿದ ಮಾಧ್ಯಮಗಳನ್ನು ತೀವ್ರ ತರಾಟೆಗೆ ಪಡೆಯಿತು.

- Advertisement -
- Advertisement -

ಮಾರ್ಚ್‌ನಲ್ಲಿ ನಿಜಾಮುದ್ದೀನ್‌ ಬಳಿ ನಡೆದಿದ್ದ ತಬ್ಲೀಘೀ ಜಮಾಅತ್ ಸಭೆಯಲ್ಲಿ ಪಾಲ್ಗೊಂಡಿದ್ದ 29 ವಿದೇಶಿ ಪ್ರಜೆಗಳ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದು ಪಡಿಸಿದ ನ್ಯಾಯಾಲಯ ಪ್ರಕರಣದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಎಂದು ಕರೆದಿದೆ.

ತಬ್ಲೀಘಿ ಜಮಾಅತ್ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಿ ಪ್ರಜೆಗಳ ಬಗ್ಗೆ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳು ದೊಡ್ಡ ಮಟ್ಟದಲ್ಲಿ ಅಪಪ್ರಚಾರ ಮಾಡಿದೆ. ಭಾರತದಲ್ಲಿ ಕೊರೋನ ಹರಡಲು ಇವರೇ ಕಾರಣ ಎನ್ನುವ ಚಿತ್ರಣವನ್ನು ಮಾಧ್ಯಮಗಳು ಪ್ರಸಾರ ಮಾಡಿದೆ ಎಂದು ಮಾಧ್ಯಮಗಳನ್ನು ತೀವ್ರವಾಗಿ ತರಾಟೆಗೆ ಪಡೆಯಿತು.

ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ 

ದೆಹಲಿಯ ನಿಜಾಮುದ್ದೀನ್‌ನಲ್ಲಿನ ಸಭೆಗೆ ಹಾಜರಾಗುವ ಮೂಲಕ ತಮ್ಮ ಪ್ರವಾಸಿ ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಭಾರತೀಯ ದಂಡ ಸಂಹಿತೆ, ಸಾಂಕ್ರಾಮಿಕ ರೋಗಗಳ ಕಾಯ್ದೆ, ಮಹಾರಾಷ್ಟ್ರ ಪೊಲೀಸ್ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ವಿದೇಶಿ ಪ್ರಜೆಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಜೀವನದ ನೋಟಗಳು ಹೇಗಿರಬೇಕಿತ್ತು ? ಹೇಗಿದೆ ?

ಸರ್ಕಾರವನ್ನೂ ಟೀಕಿಸಿದ ನ್ಯಾಯಾಲಯ “ಸಾಂಕ್ರಾಮಿಕ ಬಿಕ್ಕಟ್ಟು ಉಂಟಾದಾಗ ರಾಜಕೀಯ ಸರ್ಕಾರವು ಬಲಿಪಶುವನ್ನು ಹುಡುಕಲು ಪ್ರಯತ್ನಿಸುತ್ತಿತ್ತು” ಎಂದು ಹೇಳಿದೆ.

ತಬ್ಲೀಗಿ ಜಮಾಅತ್‌ನ ಚಟುವಟಿಕೆಗಳು 50 ವರ್ಷಗಳಿಂದಲೂ ನಡೆಯುತ್ತಿದೆ. ನಿಝಾಮುದ್ದೀನ್ ಮರ್ಕಝ್ ಕಾರ್ಯಕ್ರಮದಲ್ಲಿ ಈ ವಿದೇಶಿಗರು ಭಾಗವಹಿಸುವ ಬಗ್ಗೆ ಮತ್ತು ವೀಸಾಗಳನ್ನು ನೀಡುವ ಬಗ್ಗೆ ಕೇಂದ್ರ ಸರಕಾರಕ್ಕೆ ಅರಿವಿತ್ತು ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ಏಪ್ರಿಲ್‌ನಲ್ಲಿ ದೆಹಲಿಯ ನಿಜಾಮುದ್ದೀನ್‌ನಲ್ಲಿನ ಧಾರ್ಮಿಕ ಸಭೆಯಲ್ಲಿ ವಿದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 9,000 ಜನರು ಭಾಗವಹಿಸಿದ್ದರು.

ಈ ಘಟನೆಯು ನಂತರ ಮಾಧ್ಯಮಗಳು ಮತ್ತು ಬಿಜೆಪಿ ಸೇರಿದಂತೆ ಹಲಲವಾರು ಬಲಪಂಥೀಯ ಸಂಘಟನೆಗಳು ವಿವಾದವನ್ನು ಸೃಷ್ಟಿಸಿ ಭಾರತದಲ್ಲಿ ಕೊರೊನಾ ಪ್ರಕರಣಗಳು ಹರಡಲು ಇವರೆ ಕಾರಣ ಎಂದು ತಪ್ಪಾಗಿ ನಿರೂಪಿಸಿದ್ದರು.


ಓದಿ: ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...