Homeಕರೋನಾ ತಲ್ಲಣಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

29 ವಿದೇಶಿ ತಬ್ಲೀಘಿಗಳ ಎಫ್‌ಐಆರ್‌ಗಳನ್ನು ರದ್ದು ಪಡಿಸಿದ ನ್ಯಾಯಾಲಯ ತಬ್ಲೀಘಿ ವಿಚಾರದಲ್ಲಿ ಅಪಪ್ರಚಾರ ಮಾಡಿದ ಮಾಧ್ಯಮಗಳನ್ನು ತೀವ್ರ ತರಾಟೆಗೆ ಪಡೆಯಿತು.

- Advertisement -
- Advertisement -

ಮಾರ್ಚ್‌ನಲ್ಲಿ ನಿಜಾಮುದ್ದೀನ್‌ ಬಳಿ ನಡೆದಿದ್ದ ತಬ್ಲೀಘೀ ಜಮಾಅತ್ ಸಭೆಯಲ್ಲಿ ಪಾಲ್ಗೊಂಡಿದ್ದ 29 ವಿದೇಶಿ ಪ್ರಜೆಗಳ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದು ಪಡಿಸಿದ ನ್ಯಾಯಾಲಯ ಪ್ರಕರಣದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಎಂದು ಕರೆದಿದೆ.

ತಬ್ಲೀಘಿ ಜಮಾಅತ್ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಿ ಪ್ರಜೆಗಳ ಬಗ್ಗೆ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳು ದೊಡ್ಡ ಮಟ್ಟದಲ್ಲಿ ಅಪಪ್ರಚಾರ ಮಾಡಿದೆ. ಭಾರತದಲ್ಲಿ ಕೊರೋನ ಹರಡಲು ಇವರೇ ಕಾರಣ ಎನ್ನುವ ಚಿತ್ರಣವನ್ನು ಮಾಧ್ಯಮಗಳು ಪ್ರಸಾರ ಮಾಡಿದೆ ಎಂದು ಮಾಧ್ಯಮಗಳನ್ನು ತೀವ್ರವಾಗಿ ತರಾಟೆಗೆ ಪಡೆಯಿತು.

ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ 

ದೆಹಲಿಯ ನಿಜಾಮುದ್ದೀನ್‌ನಲ್ಲಿನ ಸಭೆಗೆ ಹಾಜರಾಗುವ ಮೂಲಕ ತಮ್ಮ ಪ್ರವಾಸಿ ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಭಾರತೀಯ ದಂಡ ಸಂಹಿತೆ, ಸಾಂಕ್ರಾಮಿಕ ರೋಗಗಳ ಕಾಯ್ದೆ, ಮಹಾರಾಷ್ಟ್ರ ಪೊಲೀಸ್ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ವಿದೇಶಿ ಪ್ರಜೆಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಜೀವನದ ನೋಟಗಳು ಹೇಗಿರಬೇಕಿತ್ತು ? ಹೇಗಿದೆ ?

ಸರ್ಕಾರವನ್ನೂ ಟೀಕಿಸಿದ ನ್ಯಾಯಾಲಯ “ಸಾಂಕ್ರಾಮಿಕ ಬಿಕ್ಕಟ್ಟು ಉಂಟಾದಾಗ ರಾಜಕೀಯ ಸರ್ಕಾರವು ಬಲಿಪಶುವನ್ನು ಹುಡುಕಲು ಪ್ರಯತ್ನಿಸುತ್ತಿತ್ತು” ಎಂದು ಹೇಳಿದೆ.

ತಬ್ಲೀಗಿ ಜಮಾಅತ್‌ನ ಚಟುವಟಿಕೆಗಳು 50 ವರ್ಷಗಳಿಂದಲೂ ನಡೆಯುತ್ತಿದೆ. ನಿಝಾಮುದ್ದೀನ್ ಮರ್ಕಝ್ ಕಾರ್ಯಕ್ರಮದಲ್ಲಿ ಈ ವಿದೇಶಿಗರು ಭಾಗವಹಿಸುವ ಬಗ್ಗೆ ಮತ್ತು ವೀಸಾಗಳನ್ನು ನೀಡುವ ಬಗ್ಗೆ ಕೇಂದ್ರ ಸರಕಾರಕ್ಕೆ ಅರಿವಿತ್ತು ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ಏಪ್ರಿಲ್‌ನಲ್ಲಿ ದೆಹಲಿಯ ನಿಜಾಮುದ್ದೀನ್‌ನಲ್ಲಿನ ಧಾರ್ಮಿಕ ಸಭೆಯಲ್ಲಿ ವಿದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 9,000 ಜನರು ಭಾಗವಹಿಸಿದ್ದರು.

ಈ ಘಟನೆಯು ನಂತರ ಮಾಧ್ಯಮಗಳು ಮತ್ತು ಬಿಜೆಪಿ ಸೇರಿದಂತೆ ಹಲಲವಾರು ಬಲಪಂಥೀಯ ಸಂಘಟನೆಗಳು ವಿವಾದವನ್ನು ಸೃಷ್ಟಿಸಿ ಭಾರತದಲ್ಲಿ ಕೊರೊನಾ ಪ್ರಕರಣಗಳು ಹರಡಲು ಇವರೆ ಕಾರಣ ಎಂದು ತಪ್ಪಾಗಿ ನಿರೂಪಿಸಿದ್ದರು.


ಓದಿ: ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...