Homeಕರೋನಾ ತಲ್ಲಣಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

29 ವಿದೇಶಿ ತಬ್ಲೀಘಿಗಳ ಎಫ್‌ಐಆರ್‌ಗಳನ್ನು ರದ್ದು ಪಡಿಸಿದ ನ್ಯಾಯಾಲಯ ತಬ್ಲೀಘಿ ವಿಚಾರದಲ್ಲಿ ಅಪಪ್ರಚಾರ ಮಾಡಿದ ಮಾಧ್ಯಮಗಳನ್ನು ತೀವ್ರ ತರಾಟೆಗೆ ಪಡೆಯಿತು.

- Advertisement -
- Advertisement -

ಮಾರ್ಚ್‌ನಲ್ಲಿ ನಿಜಾಮುದ್ದೀನ್‌ ಬಳಿ ನಡೆದಿದ್ದ ತಬ್ಲೀಘೀ ಜಮಾಅತ್ ಸಭೆಯಲ್ಲಿ ಪಾಲ್ಗೊಂಡಿದ್ದ 29 ವಿದೇಶಿ ಪ್ರಜೆಗಳ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದು ಪಡಿಸಿದ ನ್ಯಾಯಾಲಯ ಪ್ರಕರಣದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಎಂದು ಕರೆದಿದೆ.

ತಬ್ಲೀಘಿ ಜಮಾಅತ್ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಿ ಪ್ರಜೆಗಳ ಬಗ್ಗೆ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳು ದೊಡ್ಡ ಮಟ್ಟದಲ್ಲಿ ಅಪಪ್ರಚಾರ ಮಾಡಿದೆ. ಭಾರತದಲ್ಲಿ ಕೊರೋನ ಹರಡಲು ಇವರೇ ಕಾರಣ ಎನ್ನುವ ಚಿತ್ರಣವನ್ನು ಮಾಧ್ಯಮಗಳು ಪ್ರಸಾರ ಮಾಡಿದೆ ಎಂದು ಮಾಧ್ಯಮಗಳನ್ನು ತೀವ್ರವಾಗಿ ತರಾಟೆಗೆ ಪಡೆಯಿತು.

ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ 

ದೆಹಲಿಯ ನಿಜಾಮುದ್ದೀನ್‌ನಲ್ಲಿನ ಸಭೆಗೆ ಹಾಜರಾಗುವ ಮೂಲಕ ತಮ್ಮ ಪ್ರವಾಸಿ ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಭಾರತೀಯ ದಂಡ ಸಂಹಿತೆ, ಸಾಂಕ್ರಾಮಿಕ ರೋಗಗಳ ಕಾಯ್ದೆ, ಮಹಾರಾಷ್ಟ್ರ ಪೊಲೀಸ್ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ವಿದೇಶಿ ಪ್ರಜೆಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಜೀವನದ ನೋಟಗಳು ಹೇಗಿರಬೇಕಿತ್ತು ? ಹೇಗಿದೆ ?

ಸರ್ಕಾರವನ್ನೂ ಟೀಕಿಸಿದ ನ್ಯಾಯಾಲಯ “ಸಾಂಕ್ರಾಮಿಕ ಬಿಕ್ಕಟ್ಟು ಉಂಟಾದಾಗ ರಾಜಕೀಯ ಸರ್ಕಾರವು ಬಲಿಪಶುವನ್ನು ಹುಡುಕಲು ಪ್ರಯತ್ನಿಸುತ್ತಿತ್ತು” ಎಂದು ಹೇಳಿದೆ.

ತಬ್ಲೀಗಿ ಜಮಾಅತ್‌ನ ಚಟುವಟಿಕೆಗಳು 50 ವರ್ಷಗಳಿಂದಲೂ ನಡೆಯುತ್ತಿದೆ. ನಿಝಾಮುದ್ದೀನ್ ಮರ್ಕಝ್ ಕಾರ್ಯಕ್ರಮದಲ್ಲಿ ಈ ವಿದೇಶಿಗರು ಭಾಗವಹಿಸುವ ಬಗ್ಗೆ ಮತ್ತು ವೀಸಾಗಳನ್ನು ನೀಡುವ ಬಗ್ಗೆ ಕೇಂದ್ರ ಸರಕಾರಕ್ಕೆ ಅರಿವಿತ್ತು ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ಏಪ್ರಿಲ್‌ನಲ್ಲಿ ದೆಹಲಿಯ ನಿಜಾಮುದ್ದೀನ್‌ನಲ್ಲಿನ ಧಾರ್ಮಿಕ ಸಭೆಯಲ್ಲಿ ವಿದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 9,000 ಜನರು ಭಾಗವಹಿಸಿದ್ದರು.

ಈ ಘಟನೆಯು ನಂತರ ಮಾಧ್ಯಮಗಳು ಮತ್ತು ಬಿಜೆಪಿ ಸೇರಿದಂತೆ ಹಲಲವಾರು ಬಲಪಂಥೀಯ ಸಂಘಟನೆಗಳು ವಿವಾದವನ್ನು ಸೃಷ್ಟಿಸಿ ಭಾರತದಲ್ಲಿ ಕೊರೊನಾ ಪ್ರಕರಣಗಳು ಹರಡಲು ಇವರೆ ಕಾರಣ ಎಂದು ತಪ್ಪಾಗಿ ನಿರೂಪಿಸಿದ್ದರು.


ಓದಿ: ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...