Homeಕರ್ನಾಟಕತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ...

ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರ ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸಬೇಕು ಎಂದು ಆದೇಶಿಸಲಾಗಿದೆ

- Advertisement -
- Advertisement -

2020 ರ ಕೊರೊನಾ ಸಾಂಕ್ರಮಿಕ ಸಮಯದಲ್ಲಿ ತಬ್ಲೀಘಿ ಜಮಾತ್‌ ಅನ್ನು ಗುರಿಯಾಗಿಸಿ ಕೊಂಡಿದ್ದಕ್ಕೆ ಕನ್ನಡ ಚಾನೆಲ್‌ಗಳಾದ ‘ನ್ಯೂಸ್‌ 18 ಕನ್ನಡ’ ಮತ್ತು ‘ಸುವರ್ಣ ನ್ಯೂಸ್‌’ಗೆ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿದೆ. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿದೆ.

NBSA ಗೆ ಬೆಂಗಳೂರು ಮೂಲದ ಕ್ಯಾಂಪೇನ್ ಎಗೇನ್ಸ್ಟ್ ಹೇಟ್ ಸ್ಪೀಚ್ (CAHS) ದೂರುಗಳನ್ನು ಸಲ್ಲಿಸಿತ್ತು. ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ನ್ಯೂಸ್‌ 18 ಕನ್ನಡ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ CAHS ಆಕ್ಷೇಪ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

NBSA ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು ನೀಡಿದ ಆದೇಶದಲ್ಲಿ, “… ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ ರೀತಿ ಹೆಚ್ಚು ಆಕ್ಷೇಪಾರ್ಹವಾಗಿತ್ತು. ಸುದ್ದಿ ವರದಿಯು ಶುದ್ಧ ಊಹಾಪೋಹವನ್ನು ಆಧರಿಸಿತ್ತು. ಕಾರ್ಯಕ್ರಮದ ಧ್ವನಿ, ವಸ್ತು, ಭಾಷೆ ಒರಟಾಗಿದ್ದು, ಪೂರ್ವಾಗ್ರಹ ಮತ್ತು ಅಗೌರವದಿಂದ ಕೂಡಿತ್ತು … ” ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ NBSA  1 ಲಕ್ಷ ದಂಡ ವಿಧಿಸಿದೆ. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಚಾನೆಲ್‌ಗೆ ನಿರ್ದೇಶನ ನೀಡಿದೆ. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಪ್ರಾಧಿಕಾರವು ಪ್ರಸಾರಕರನ್ನು ಕೇಳಿದೆ.

ಮೇ 31 ಮತ್ತು ಏಪ್ರಿಲ್ 4, 2020 ರ ನಡುವೆ ಸುವರ್ಣ ನ್ಯೂಸ್ ಪ್ರಸಾರ ಮಾಡಿದ ಏಳು ಕಾರ್ಯಕ್ರಮಗಳ ವಿರುದ್ಧದ ದೂರಿನ ಮೇರೆಗೆ, NBSA ತನ್ನ ಆದೇಶದಲ್ಲಿ, “ಕಾರ್ಯಕ್ರಮದಲ್ಲಿ ಕೊರೊನಾ ವೈರಸ್ ಹರಡುವಿಕೆಯ ಸಂಪೂರ್ಣ ಆಪಾದನೆಯನ್ನು ತಬ್ಲಿಘಿ ಜಮಾಅತ್‌ ಮೇಲೆ ಹಾಕಲಾಗಿದ್ದು, ಅದನ್ನು ನಿರ್ದಿಷ್ಟ ಸಮುದಾಯದ ವಿರುದ್ದ ತಿರುಗಿಸಲಾಗಿದೆ. ಜೊತೆಗೆ ಕಾರ್ಯಕ್ರಮಗಳ ಶೀರ್ಷಿಕೆಗಳು ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಕಪಟತೆಯನ್ನು ಹೊಂದಿವೆ … ಈ ಕಾರ್ಯಕ್ರಮಗಳಲ್ಲಿ ಖಂಡಿತವಾಗಿಯೂ ಸಮತೋಲನ, ವಸ್ತುನಿಷ್ಠತೆ ಮತ್ತು ನಿಷ್ಪಕ್ಷಪಾತತೆಯ ಕೊರತೆಯಿದೆ. ಅಲ್ಲದೆ ಈ ಕಾರ್ಯಕ್ರಮಗಳು ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಬಹಿರಂಗವಾಗಿ ಪೂರ್ವಾಗ್ರಹ ಪೀಡಿತವಾಗಿದ್ದವು” ಎಂದು ಹೇಳಿದೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಸುವರ್ಣ ನ್ಯೂಸ್‌ಗೆ 50 ಸಾವಿರ ದಂಡವನ್ನು ವಿಧಿಸಿರುವ NBSA, ಸಮಾಜಿಕ ಜಾಲತಾಣದಲ್ಲಿನ ವಿಡಿಯೊಗಳನ್ನು ಕಿತ್ತು ಹಾಕುವಂತೆ ಕೇಳಿದೆ.

ಏಪ್ರಿಲ್ 2, 2020 ರಂದು ಟೈಮ್ಸ್‌ ನೌ ಚಾನೆಲ್‌ನಲ್ಲಿ ಪ್ರಸಾರವಾದ, “ತಬ್ಲೀಘಿ ಜಮಾಅತ್ ಉದ್ದೇಶಪೂರ್ವಕವಾಗಿ ಭಾರತವನ್ನು ಹಾಳುಮಾಡುತ್ತಿದೆಯೇ?” ಎಂಬ ಪ್ಯಾನೆಲ್‌ ಚರ್ಚೆಯ ವಿರುದ್ಧದ ದೂರಿನ ಮೇರೆಗೆ, “ಸಮುದಾಯಗಳ ನಡುವೆ ಕೋಮು ಭಿನ್ನಾಭಿಪ್ರಾಯವನ್ನು ಉಂಟುಮಾಡುವ ಸೂಕ್ಷ್ಮ ವಿಷಯದ ಬಗ್ಗೆ ಇಂತಹ ಕಾರ್ಯಕ್ರಮವನ್ನು ಪ್ರಸಾರ ಮಾಡಿದೆ” ಎಂದು NBSA ಯು ಚಾನೆಲ್‌ಗೆ ಖಂಡನೆಯನ್ನು ಹೊರಡಿಸಿದೆ.

ನ್ಯಾಯಮೂರ್ತಿ ಎ.ಕೆ. ಸಿಕ್ರಿ ತನ್ನ ಆದೇಶದಲ್ಲಿ, “ಕಾರ್ಯಕ್ರಮದ ನಿರೂಪಕ ತಬ್ಲೀಘಿ ಜಮಾಅತ್‌ಗೆ ಸಂಬಂಧಿಸಿದ ಕೆಲವು ಹೇಳಿಕೆಗಳನ್ನು ನೀಡಿದ್ದಾನೆ, ಅದು ನಿಖರತೆ, ನಿಷ್ಪಕ್ಷಪಾತತೆ, ತಟಸ್ಥತೆ ಮತ್ತು ವಸ್ತುನಿಷ್ಠತೆಯಂತಹ ಮೂಲಭೂತ ತತ್ವಗಳ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Truth is always Truth.
    Journalism is one of the pillar of Democracy.
    Democracy is not easily achieved,
    So save it with responsibility
    Hope you will do it ?

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....