Homeಕರ್ನಾಟಕತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ...

ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರ ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸಬೇಕು ಎಂದು ಆದೇಶಿಸಲಾಗಿದೆ

- Advertisement -
- Advertisement -

2020 ರ ಕೊರೊನಾ ಸಾಂಕ್ರಮಿಕ ಸಮಯದಲ್ಲಿ ತಬ್ಲೀಘಿ ಜಮಾತ್‌ ಅನ್ನು ಗುರಿಯಾಗಿಸಿ ಕೊಂಡಿದ್ದಕ್ಕೆ ಕನ್ನಡ ಚಾನೆಲ್‌ಗಳಾದ ‘ನ್ಯೂಸ್‌ 18 ಕನ್ನಡ’ ಮತ್ತು ‘ಸುವರ್ಣ ನ್ಯೂಸ್‌’ಗೆ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿದೆ. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿದೆ.

NBSA ಗೆ ಬೆಂಗಳೂರು ಮೂಲದ ಕ್ಯಾಂಪೇನ್ ಎಗೇನ್ಸ್ಟ್ ಹೇಟ್ ಸ್ಪೀಚ್ (CAHS) ದೂರುಗಳನ್ನು ಸಲ್ಲಿಸಿತ್ತು. ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ನ್ಯೂಸ್‌ 18 ಕನ್ನಡ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ CAHS ಆಕ್ಷೇಪ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

NBSA ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು ನೀಡಿದ ಆದೇಶದಲ್ಲಿ, “… ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ ರೀತಿ ಹೆಚ್ಚು ಆಕ್ಷೇಪಾರ್ಹವಾಗಿತ್ತು. ಸುದ್ದಿ ವರದಿಯು ಶುದ್ಧ ಊಹಾಪೋಹವನ್ನು ಆಧರಿಸಿತ್ತು. ಕಾರ್ಯಕ್ರಮದ ಧ್ವನಿ, ವಸ್ತು, ಭಾಷೆ ಒರಟಾಗಿದ್ದು, ಪೂರ್ವಾಗ್ರಹ ಮತ್ತು ಅಗೌರವದಿಂದ ಕೂಡಿತ್ತು … ” ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ NBSA  1 ಲಕ್ಷ ದಂಡ ವಿಧಿಸಿದೆ. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಚಾನೆಲ್‌ಗೆ ನಿರ್ದೇಶನ ನೀಡಿದೆ. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಪ್ರಾಧಿಕಾರವು ಪ್ರಸಾರಕರನ್ನು ಕೇಳಿದೆ.

ಮೇ 31 ಮತ್ತು ಏಪ್ರಿಲ್ 4, 2020 ರ ನಡುವೆ ಸುವರ್ಣ ನ್ಯೂಸ್ ಪ್ರಸಾರ ಮಾಡಿದ ಏಳು ಕಾರ್ಯಕ್ರಮಗಳ ವಿರುದ್ಧದ ದೂರಿನ ಮೇರೆಗೆ, NBSA ತನ್ನ ಆದೇಶದಲ್ಲಿ, “ಕಾರ್ಯಕ್ರಮದಲ್ಲಿ ಕೊರೊನಾ ವೈರಸ್ ಹರಡುವಿಕೆಯ ಸಂಪೂರ್ಣ ಆಪಾದನೆಯನ್ನು ತಬ್ಲಿಘಿ ಜಮಾಅತ್‌ ಮೇಲೆ ಹಾಕಲಾಗಿದ್ದು, ಅದನ್ನು ನಿರ್ದಿಷ್ಟ ಸಮುದಾಯದ ವಿರುದ್ದ ತಿರುಗಿಸಲಾಗಿದೆ. ಜೊತೆಗೆ ಕಾರ್ಯಕ್ರಮಗಳ ಶೀರ್ಷಿಕೆಗಳು ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಕಪಟತೆಯನ್ನು ಹೊಂದಿವೆ … ಈ ಕಾರ್ಯಕ್ರಮಗಳಲ್ಲಿ ಖಂಡಿತವಾಗಿಯೂ ಸಮತೋಲನ, ವಸ್ತುನಿಷ್ಠತೆ ಮತ್ತು ನಿಷ್ಪಕ್ಷಪಾತತೆಯ ಕೊರತೆಯಿದೆ. ಅಲ್ಲದೆ ಈ ಕಾರ್ಯಕ್ರಮಗಳು ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಬಹಿರಂಗವಾಗಿ ಪೂರ್ವಾಗ್ರಹ ಪೀಡಿತವಾಗಿದ್ದವು” ಎಂದು ಹೇಳಿದೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಸುವರ್ಣ ನ್ಯೂಸ್‌ಗೆ 50 ಸಾವಿರ ದಂಡವನ್ನು ವಿಧಿಸಿರುವ NBSA, ಸಮಾಜಿಕ ಜಾಲತಾಣದಲ್ಲಿನ ವಿಡಿಯೊಗಳನ್ನು ಕಿತ್ತು ಹಾಕುವಂತೆ ಕೇಳಿದೆ.

ಏಪ್ರಿಲ್ 2, 2020 ರಂದು ಟೈಮ್ಸ್‌ ನೌ ಚಾನೆಲ್‌ನಲ್ಲಿ ಪ್ರಸಾರವಾದ, “ತಬ್ಲೀಘಿ ಜಮಾಅತ್ ಉದ್ದೇಶಪೂರ್ವಕವಾಗಿ ಭಾರತವನ್ನು ಹಾಳುಮಾಡುತ್ತಿದೆಯೇ?” ಎಂಬ ಪ್ಯಾನೆಲ್‌ ಚರ್ಚೆಯ ವಿರುದ್ಧದ ದೂರಿನ ಮೇರೆಗೆ, “ಸಮುದಾಯಗಳ ನಡುವೆ ಕೋಮು ಭಿನ್ನಾಭಿಪ್ರಾಯವನ್ನು ಉಂಟುಮಾಡುವ ಸೂಕ್ಷ್ಮ ವಿಷಯದ ಬಗ್ಗೆ ಇಂತಹ ಕಾರ್ಯಕ್ರಮವನ್ನು ಪ್ರಸಾರ ಮಾಡಿದೆ” ಎಂದು NBSA ಯು ಚಾನೆಲ್‌ಗೆ ಖಂಡನೆಯನ್ನು ಹೊರಡಿಸಿದೆ.

ನ್ಯಾಯಮೂರ್ತಿ ಎ.ಕೆ. ಸಿಕ್ರಿ ತನ್ನ ಆದೇಶದಲ್ಲಿ, “ಕಾರ್ಯಕ್ರಮದ ನಿರೂಪಕ ತಬ್ಲೀಘಿ ಜಮಾಅತ್‌ಗೆ ಸಂಬಂಧಿಸಿದ ಕೆಲವು ಹೇಳಿಕೆಗಳನ್ನು ನೀಡಿದ್ದಾನೆ, ಅದು ನಿಖರತೆ, ನಿಷ್ಪಕ್ಷಪಾತತೆ, ತಟಸ್ಥತೆ ಮತ್ತು ವಸ್ತುನಿಷ್ಠತೆಯಂತಹ ಮೂಲಭೂತ ತತ್ವಗಳ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Truth is always Truth.
    Journalism is one of the pillar of Democracy.
    Democracy is not easily achieved,
    So save it with responsibility
    Hope you will do it ?

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...