Homeಕರ್ನಾಟಕಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

ಕೊರೊನಾ ಹೆಸರಲ್ಲಿ ತಬ್ಲೀಘಿಗಳ ಅವಹೇಳನ: ಇಂದು ರಾತ್ರಿ ಕ್ಷಮೆ ಕೇಳಲಿರುವ ನ್ಯೂಸ್‌ 18 ಕನ್ನಡ!

- Advertisement -
- Advertisement -

ಕೊರೊನಾ ಮೊದಲನೆ ಅಲೆಯ ಸಮಯದಲ್ಲಿ ಸೋಂಕು ಹರಡಲು ತಬ್ಲೀಘಿಗಳೇ ಕಾರಣ ಎಂಬ ಕಾರ್ಯಕ್ರಮವನ್ನು ಮಾಡಿದ್ದ ‘ನ್ಯೂಸ್‌ 18 ಕನ್ನಡ’ ಚಾನೆಲ್‌, ಇಂದು (ಬುಧವಾರ) ರಾತ್ರಿ 8:30-9:15 ರ ಒಳಗಾಗಿ ತನ್ನ ತಪ್ಪು ವರದಿಗಾಗಿ ಕ್ಷಮೆಯಾಚಿಸಲಿದೆ.

2020 ರ ಕೊರೊನಾ ಸಾಂಕ್ರಮಿಕ ಸಮಯದಲ್ಲಿ ತಬ್ಲೀಘಿ ಜಮಾತ್‌ ಅನ್ನು ಗುರಿಯಾಗಿಸಿ ಕೊಂಡಿದ್ದಕ್ಕೆ ಕನ್ನಡ ಚಾನೆಲ್‌ಗಳಾದ ‘ನ್ಯೂಸ್‌ 18 ಕನ್ನಡ’ ಮತ್ತು ‘ಸುವರ್ಣ ನ್ಯೂಸ್‌’ಗೆ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿದೆ. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿದೆ.

ಇದನ್ನೂ ಓದಿ: ANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

ಬೆಂಗಳೂರು ಮೂಲದ ‘ಹೇಟ್‌ ಸ್ಪೀಚ್‌ ಬೇಡ’ ಎಂಬ ದ್ವೇಷ ಭಾಷಣಗಳ ವಿರುದ್ದದ ಅಭಿಯಾವು NBSA ಗೆ ದೂರುಗಳನ್ನು ಸಲ್ಲಿಸಿ, ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ‘ನ್ಯೂಸ್‌ 18 ಕನ್ನಡ’ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ದೂರಿನ ವಿಚಾರಣೆ ನಡೆಸಿದ NBSA ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು, “… ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ ರೀತಿ ಹೆಚ್ಚು ಆಕ್ಷೇಪಾರ್ಹವಾಗಿತ್ತು. ಸುದ್ದಿ ವರದಿಯು ಶುದ್ಧ ಊಹಾಪೋಹವನ್ನು ಆಧರಿಸಿತ್ತು. ಕಾರ್ಯಕ್ರಮದ ಧ್ವನಿ, ವಸ್ತು, ಭಾಷೆ ಒರಟಾಗಿದ್ದು, ಪೂರ್ವಾಗ್ರಹ ಮತ್ತು ಅಗೌರವದಿಂದ ಕೂಡಿತ್ತು … ” ಎಂದು ಹೇಳಿದ್ದರು.

ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ NBSA  1 ಲಕ್ಷ ದಂಡ ವಿಧಿಸಿದೆ. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಎಂದು ಚಾನೆಲ್‌ಗೆ ನಿರ್ದೇಶನ ನೀಡಿದೆ. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಪ್ರಾಧಿಕಾರವು ಚಾನೆಲ್‌ ಅನ್ನು ಕೇಳಿದೆ. ಅದರಂತೆ ಚಾನೆಲ್‌ ಇಂದು ರಾತ್ರಿ ಕ್ಷಮೆ ಕೇಳಲಿದೆ.

ಇದನ್ನೂ ಓದಿ: ದಿಶಾಳ ವಾಟ್ಸಾಪ್ ಚಾಟ್ಸ್‌, ತನಿಖಾ ಮಾಹಿತಿ ಸೋರಿಕೆ: ನ್ಯೂಸ್‌ ಚಾನೆಲ್‌ಗಳಿಗೆ ನೋಟಿಸ್!

ಈ ಬಗ್ಗೆ ಮಾಹಿತಿ ನೀಡಿರುವ ‘ಹೇಟ್‌ ಸ್ಪೀಚ್‌‌ ಬೇಡ’ ಅಭಿಯಾನವು, “ನ್ಯೂಸ್ 18 ಕನ್ನಡವು ‘ವಿಷ’, ‘ನರಕ’, ‘ನಿಜಾಮುದ್ದೀನ್ ನಂಜು’ ಮುಂತಾದ ಪದಗಳನ್ನು ಬಳಸಿ, ತಬ್ಲಿಘಿ ಜಮಾಅತ್ ವಿರುದ್ಧ ಕೋಮು ಮತ್ತು ದ್ವೇಷದ ಪ್ರಸಾರಕ್ಕಾಗಿ, ನ್ಯೂಸ್ 18 ಕನ್ನಡಕ್ಕೆ ಕ್ಷಮೆಯಾಚನೆಯನ್ನು ಪ್ರಸಾರ ಮಾಡಲು ‘ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ’ (NBSA) ಆದೇಶಿಸಿದೆ. ಅಲ್ಲದೆ 1 ಲಕ್ಷ ದಂಡವನ್ನೂ ವಿಧಿಸಿದೆ. ಇವತ್ತು ರಾತ್ರಿ 8:30 PM – 9:15 PM ನಡುವೆ ನ್ಯೂಸ್‌ 18 ಕನ್ನಡ ವೀಕ್ಷಿಸಿ. NBSA ಆದೇಶದಂತೆ ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಕ್ಷಮೆಯಾಚನೆಯನ್ನು ಮಾಡುತ್ತದೆಯೇ ಎಂದು ನೋಡೋಣ” ಎಂದು ಹೇಳಿದೆ.

NBSA ನ್ಯೂಸ್‌ 18 ಕನ್ನಡ ಮಾತ್ರವಲ್ಲದೆ ಕನ್ನಡದ ಮತ್ತೊಂದು ಚಾನೆಲ್‌ ಆದ ‘ಸುವರ್ಣ ನ್ಯೂಸ್‌’ಗೆ ಕೂಡಾ ತಬ್ಲೀಘಿಗಳ ವಿರುದ್ದ ಕಾರ್ಯಕ್ರಮ ಮಾಡಿದ್ದಕ್ಕೆ 50 ಸಾವಿರ ದಂಡವನ್ನು ಹಾಕಿತ್ತು. ಜೊತೆಗೆ ಆದೇಶದಲ್ಲಿ, “ಕಾರ್ಯಕ್ರಮದಲ್ಲಿ ಕೊರೊನಾ ವೈರಸ್ ಹರಡುವಿಕೆಯ ಸಂಪೂರ್ಣ ಆಪಾದನೆಯನ್ನು ತಬ್ಲಿಘಿ ಜಮಾಅತ್‌ ಮೇಲೆ ಹಾಕಲಾಗಿದ್ದು, ಅದನ್ನು ನಿರ್ದಿಷ್ಟ ಸಮುದಾಯದ ವಿರುದ್ದ ತಿರುಗಿಸಲಾಗಿದೆ. ಜೊತೆಗೆ ಕಾರ್ಯಕ್ರಮಗಳ ಶೀರ್ಷಿಕೆಗಳು ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಕಪಟತೆಯನ್ನು ಹೊಂದಿವೆ.

ಈ ಕಾರ್ಯಕ್ರಮಗಳಲ್ಲಿ ಖಂಡಿತವಾಗಿಯೂ ಸಮತೋಲನ, ವಸ್ತುನಿಷ್ಠತೆ ಮತ್ತು ನಿಷ್ಪಕ್ಷಪಾತತೆಯ ಕೊರತೆಯಿದೆ. ಅಲ್ಲದೆ ಈ ಕಾರ್ಯಕ್ರಮಗಳು ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಬಹಿರಂಗವಾಗಿ ಪೂರ್ವಾಗ್ರಹ ಪೀಡಿತವಾಗಿದ್ದವು” ಎಂದು ಹೇಳಿತ್ತು.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...