Homeಮುಖಪುಟಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೋವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌‌ ಅವರು ರಾಜ್ಯ ಸರ್ಕಾರ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇದನ್ನು ಪ್ರದರ್ಶಿಸಲಾಗುವುದು ಎಂದು ಚೆನ್ನೈನಲ್ಲಿ ಮಂಗಳವಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಟ್ಯಾಬ್ಲೊವನ್ನು ರಾಜ್ಯದ ಪ್ರಮುಖ ಸ್ಥಳಗಳಿಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ‘ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು’ ಎಂಬ ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ದೇಶದ ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದೆ ಎಂದು ತಮಿಳುನಾಡು ಈ ಹಿಂದೆಯೆ ಘೊಷಿಸಿತ್ತು.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

‘1857ರ ದಂಗೆಗೆ ಮುನ್ನ ನಾವು ಬ್ರಿಟಿಷರ ವಿರುದ್ಧ ಹೋರಾಡಿದ್ದೇವೆ’

ಸ್ವಾತಂತ್ರ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯು 1857 ರ ದಂಗೆಗೆ ಮುಂಚಿತವಾಗಿತ್ತು ಎಂದು ಸೂಚಿಸಿರುವ ಸ್ಟಾಲಿನ್, “ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರ ಪಾತ್ರವು ಇತರ ಯಾವುದೆ ರಾಜ್ಯಗಳಿಗಿಂತ ಕಡಿಮೆಯಲ್ಲ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಲಿನ್‌ ಅವರಿಗೆ ಪತ್ರ ಬರೆದ ಕೆಲವೆ ಗಂಟೆಗಳ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ. ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಟ್ಯಾಬ್ಲೊವನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಪತ್ರದಲ್ಲಿ ಹೇಳಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ರಾಜನಾಥ್‌ ಸಿಂಗ್ ಅವರ ಪತ್ರದಲ್ಲಿ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ತಮಿಳುನಾಡಿನ ದೇಶಭಕ್ತಿಯ ಉತ್ಸಾಹ ಮತ್ತು ಭಾವನೆಗಳನ್ನು ವ್ಯಕ್ತಪಡಿಸಲು ರಾಜ್ಯ ಸರ್ಕಾರದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಟ್ಯಾಬ್ಲೊವನ್ನು ಪ್ರಸ್ತುತಪಡಿಸಲಾಗುತ್ತದೆ. ಇದನ್ನು ತಮಿಳುನಾಡಿನ ಪ್ರಮುಖ ನಗರಗಳಿಗೆ ಕಳುಹಿಸಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ವೆಲ್ಲೂರು ದಂಗೆಯು 1806ರಲ್ಲಿ ನಡೆದಿತ್ತು. ಆದರೆ 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಝಾನ್ಸಿ ರಾಣಿ ತನ್ನ ಕತ್ತಿಯನ್ನು ಬೀಸುವ ದಶಕಗಳ ಹಿಂದೆಯೆ ವೇಲು ನಾಚಿಯಾರ್ ಬ್ರಿಟಿಷರ ವಿರುದ್ಧ ಹೋರಾಡಿ, ಕಳೆದುಕೊಂಡ ಭೂಮಿಯನ್ನು ಮರಳಿ ವಶಪಡಿಸಿಕೊಂಡರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅದೇ ರೀತಿ ಪುಲಿತೇವನ್, ವೀರ ಪಾಂಡಿಯ ಕಟ್ಟಬೊಮ್ಮನ್, ವೀರನ್ ಸುಂದರಲಿಂಗಂ, ಮರುತು ಸಹೋದರರು, ಧೀರನ್ ಚಿನ್ನಮಲೈ ಸೇರಿದಂತೆ ಹಲವು ವೀರರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ತಮಿಳುನಾಡಿನ ಈ ನೆಲವು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...