Homeಮುಖಪುಟಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೋವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌‌ ಅವರು ರಾಜ್ಯ ಸರ್ಕಾರ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇದನ್ನು ಪ್ರದರ್ಶಿಸಲಾಗುವುದು ಎಂದು ಚೆನ್ನೈನಲ್ಲಿ ಮಂಗಳವಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಟ್ಯಾಬ್ಲೊವನ್ನು ರಾಜ್ಯದ ಪ್ರಮುಖ ಸ್ಥಳಗಳಿಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ‘ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು’ ಎಂಬ ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ದೇಶದ ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದೆ ಎಂದು ತಮಿಳುನಾಡು ಈ ಹಿಂದೆಯೆ ಘೊಷಿಸಿತ್ತು.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

‘1857ರ ದಂಗೆಗೆ ಮುನ್ನ ನಾವು ಬ್ರಿಟಿಷರ ವಿರುದ್ಧ ಹೋರಾಡಿದ್ದೇವೆ’

ಸ್ವಾತಂತ್ರ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯು 1857 ರ ದಂಗೆಗೆ ಮುಂಚಿತವಾಗಿತ್ತು ಎಂದು ಸೂಚಿಸಿರುವ ಸ್ಟಾಲಿನ್, “ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರ ಪಾತ್ರವು ಇತರ ಯಾವುದೆ ರಾಜ್ಯಗಳಿಗಿಂತ ಕಡಿಮೆಯಲ್ಲ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಲಿನ್‌ ಅವರಿಗೆ ಪತ್ರ ಬರೆದ ಕೆಲವೆ ಗಂಟೆಗಳ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ. ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಟ್ಯಾಬ್ಲೊವನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಪತ್ರದಲ್ಲಿ ಹೇಳಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ರಾಜನಾಥ್‌ ಸಿಂಗ್ ಅವರ ಪತ್ರದಲ್ಲಿ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ತಮಿಳುನಾಡಿನ ದೇಶಭಕ್ತಿಯ ಉತ್ಸಾಹ ಮತ್ತು ಭಾವನೆಗಳನ್ನು ವ್ಯಕ್ತಪಡಿಸಲು ರಾಜ್ಯ ಸರ್ಕಾರದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಟ್ಯಾಬ್ಲೊವನ್ನು ಪ್ರಸ್ತುತಪಡಿಸಲಾಗುತ್ತದೆ. ಇದನ್ನು ತಮಿಳುನಾಡಿನ ಪ್ರಮುಖ ನಗರಗಳಿಗೆ ಕಳುಹಿಸಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ವೆಲ್ಲೂರು ದಂಗೆಯು 1806ರಲ್ಲಿ ನಡೆದಿತ್ತು. ಆದರೆ 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಝಾನ್ಸಿ ರಾಣಿ ತನ್ನ ಕತ್ತಿಯನ್ನು ಬೀಸುವ ದಶಕಗಳ ಹಿಂದೆಯೆ ವೇಲು ನಾಚಿಯಾರ್ ಬ್ರಿಟಿಷರ ವಿರುದ್ಧ ಹೋರಾಡಿ, ಕಳೆದುಕೊಂಡ ಭೂಮಿಯನ್ನು ಮರಳಿ ವಶಪಡಿಸಿಕೊಂಡರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅದೇ ರೀತಿ ಪುಲಿತೇವನ್, ವೀರ ಪಾಂಡಿಯ ಕಟ್ಟಬೊಮ್ಮನ್, ವೀರನ್ ಸುಂದರಲಿಂಗಂ, ಮರುತು ಸಹೋದರರು, ಧೀರನ್ ಚಿನ್ನಮಲೈ ಸೇರಿದಂತೆ ಹಲವು ವೀರರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ತಮಿಳುನಾಡಿನ ಈ ನೆಲವು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...