Homeಮುಖಪುಟಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೋವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌‌ ಅವರು ರಾಜ್ಯ ಸರ್ಕಾರ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇದನ್ನು ಪ್ರದರ್ಶಿಸಲಾಗುವುದು ಎಂದು ಚೆನ್ನೈನಲ್ಲಿ ಮಂಗಳವಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಟ್ಯಾಬ್ಲೊವನ್ನು ರಾಜ್ಯದ ಪ್ರಮುಖ ಸ್ಥಳಗಳಿಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ‘ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು’ ಎಂಬ ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ದೇಶದ ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದೆ ಎಂದು ತಮಿಳುನಾಡು ಈ ಹಿಂದೆಯೆ ಘೊಷಿಸಿತ್ತು.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

‘1857ರ ದಂಗೆಗೆ ಮುನ್ನ ನಾವು ಬ್ರಿಟಿಷರ ವಿರುದ್ಧ ಹೋರಾಡಿದ್ದೇವೆ’

ಸ್ವಾತಂತ್ರ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯು 1857 ರ ದಂಗೆಗೆ ಮುಂಚಿತವಾಗಿತ್ತು ಎಂದು ಸೂಚಿಸಿರುವ ಸ್ಟಾಲಿನ್, “ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರ ಪಾತ್ರವು ಇತರ ಯಾವುದೆ ರಾಜ್ಯಗಳಿಗಿಂತ ಕಡಿಮೆಯಲ್ಲ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಲಿನ್‌ ಅವರಿಗೆ ಪತ್ರ ಬರೆದ ಕೆಲವೆ ಗಂಟೆಗಳ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ. ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಟ್ಯಾಬ್ಲೊವನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಪತ್ರದಲ್ಲಿ ಹೇಳಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ರಾಜನಾಥ್‌ ಸಿಂಗ್ ಅವರ ಪತ್ರದಲ್ಲಿ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ತಮಿಳುನಾಡಿನ ದೇಶಭಕ್ತಿಯ ಉತ್ಸಾಹ ಮತ್ತು ಭಾವನೆಗಳನ್ನು ವ್ಯಕ್ತಪಡಿಸಲು ರಾಜ್ಯ ಸರ್ಕಾರದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಟ್ಯಾಬ್ಲೊವನ್ನು ಪ್ರಸ್ತುತಪಡಿಸಲಾಗುತ್ತದೆ. ಇದನ್ನು ತಮಿಳುನಾಡಿನ ಪ್ರಮುಖ ನಗರಗಳಿಗೆ ಕಳುಹಿಸಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ವೆಲ್ಲೂರು ದಂಗೆಯು 1806ರಲ್ಲಿ ನಡೆದಿತ್ತು. ಆದರೆ 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಝಾನ್ಸಿ ರಾಣಿ ತನ್ನ ಕತ್ತಿಯನ್ನು ಬೀಸುವ ದಶಕಗಳ ಹಿಂದೆಯೆ ವೇಲು ನಾಚಿಯಾರ್ ಬ್ರಿಟಿಷರ ವಿರುದ್ಧ ಹೋರಾಡಿ, ಕಳೆದುಕೊಂಡ ಭೂಮಿಯನ್ನು ಮರಳಿ ವಶಪಡಿಸಿಕೊಂಡರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅದೇ ರೀತಿ ಪುಲಿತೇವನ್, ವೀರ ಪಾಂಡಿಯ ಕಟ್ಟಬೊಮ್ಮನ್, ವೀರನ್ ಸುಂದರಲಿಂಗಂ, ಮರುತು ಸಹೋದರರು, ಧೀರನ್ ಚಿನ್ನಮಲೈ ಸೇರಿದಂತೆ ಹಲವು ವೀರರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ತಮಿಳುನಾಡಿನ ಈ ನೆಲವು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...