Homeಮುಖಪುಟಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೋವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌‌ ಅವರು ರಾಜ್ಯ ಸರ್ಕಾರ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇದನ್ನು ಪ್ರದರ್ಶಿಸಲಾಗುವುದು ಎಂದು ಚೆನ್ನೈನಲ್ಲಿ ಮಂಗಳವಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಟ್ಯಾಬ್ಲೊವನ್ನು ರಾಜ್ಯದ ಪ್ರಮುಖ ಸ್ಥಳಗಳಿಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ‘ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು’ ಎಂಬ ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ದೇಶದ ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದೆ ಎಂದು ತಮಿಳುನಾಡು ಈ ಹಿಂದೆಯೆ ಘೊಷಿಸಿತ್ತು.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

‘1857ರ ದಂಗೆಗೆ ಮುನ್ನ ನಾವು ಬ್ರಿಟಿಷರ ವಿರುದ್ಧ ಹೋರಾಡಿದ್ದೇವೆ’

ಸ್ವಾತಂತ್ರ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯು 1857 ರ ದಂಗೆಗೆ ಮುಂಚಿತವಾಗಿತ್ತು ಎಂದು ಸೂಚಿಸಿರುವ ಸ್ಟಾಲಿನ್, “ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರ ಪಾತ್ರವು ಇತರ ಯಾವುದೆ ರಾಜ್ಯಗಳಿಗಿಂತ ಕಡಿಮೆಯಲ್ಲ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಲಿನ್‌ ಅವರಿಗೆ ಪತ್ರ ಬರೆದ ಕೆಲವೆ ಗಂಟೆಗಳ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ. ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಟ್ಯಾಬ್ಲೊವನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಪತ್ರದಲ್ಲಿ ಹೇಳಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ರಾಜನಾಥ್‌ ಸಿಂಗ್ ಅವರ ಪತ್ರದಲ್ಲಿ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ತಮಿಳುನಾಡಿನ ದೇಶಭಕ್ತಿಯ ಉತ್ಸಾಹ ಮತ್ತು ಭಾವನೆಗಳನ್ನು ವ್ಯಕ್ತಪಡಿಸಲು ರಾಜ್ಯ ಸರ್ಕಾರದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಟ್ಯಾಬ್ಲೊವನ್ನು ಪ್ರಸ್ತುತಪಡಿಸಲಾಗುತ್ತದೆ. ಇದನ್ನು ತಮಿಳುನಾಡಿನ ಪ್ರಮುಖ ನಗರಗಳಿಗೆ ಕಳುಹಿಸಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ವೆಲ್ಲೂರು ದಂಗೆಯು 1806ರಲ್ಲಿ ನಡೆದಿತ್ತು. ಆದರೆ 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಝಾನ್ಸಿ ರಾಣಿ ತನ್ನ ಕತ್ತಿಯನ್ನು ಬೀಸುವ ದಶಕಗಳ ಹಿಂದೆಯೆ ವೇಲು ನಾಚಿಯಾರ್ ಬ್ರಿಟಿಷರ ವಿರುದ್ಧ ಹೋರಾಡಿ, ಕಳೆದುಕೊಂಡ ಭೂಮಿಯನ್ನು ಮರಳಿ ವಶಪಡಿಸಿಕೊಂಡರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅದೇ ರೀತಿ ಪುಲಿತೇವನ್, ವೀರ ಪಾಂಡಿಯ ಕಟ್ಟಬೊಮ್ಮನ್, ವೀರನ್ ಸುಂದರಲಿಂಗಂ, ಮರುತು ಸಹೋದರರು, ಧೀರನ್ ಚಿನ್ನಮಲೈ ಸೇರಿದಂತೆ ಹಲವು ವೀರರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ತಮಿಳುನಾಡಿನ ಈ ನೆಲವು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...