Homeಮುಖಪುಟಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೋವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌‌ ಅವರು ರಾಜ್ಯ ಸರ್ಕಾರ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇದನ್ನು ಪ್ರದರ್ಶಿಸಲಾಗುವುದು ಎಂದು ಚೆನ್ನೈನಲ್ಲಿ ಮಂಗಳವಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಟ್ಯಾಬ್ಲೊವನ್ನು ರಾಜ್ಯದ ಪ್ರಮುಖ ಸ್ಥಳಗಳಿಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ‘ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು’ ಎಂಬ ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ದೇಶದ ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದೆ ಎಂದು ತಮಿಳುನಾಡು ಈ ಹಿಂದೆಯೆ ಘೊಷಿಸಿತ್ತು.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

‘1857ರ ದಂಗೆಗೆ ಮುನ್ನ ನಾವು ಬ್ರಿಟಿಷರ ವಿರುದ್ಧ ಹೋರಾಡಿದ್ದೇವೆ’

ಸ್ವಾತಂತ್ರ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯು 1857 ರ ದಂಗೆಗೆ ಮುಂಚಿತವಾಗಿತ್ತು ಎಂದು ಸೂಚಿಸಿರುವ ಸ್ಟಾಲಿನ್, “ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರ ಪಾತ್ರವು ಇತರ ಯಾವುದೆ ರಾಜ್ಯಗಳಿಗಿಂತ ಕಡಿಮೆಯಲ್ಲ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಲಿನ್‌ ಅವರಿಗೆ ಪತ್ರ ಬರೆದ ಕೆಲವೆ ಗಂಟೆಗಳ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ. ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಟ್ಯಾಬ್ಲೊವನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಪತ್ರದಲ್ಲಿ ಹೇಳಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ರಾಜನಾಥ್‌ ಸಿಂಗ್ ಅವರ ಪತ್ರದಲ್ಲಿ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ತಮಿಳುನಾಡಿನ ದೇಶಭಕ್ತಿಯ ಉತ್ಸಾಹ ಮತ್ತು ಭಾವನೆಗಳನ್ನು ವ್ಯಕ್ತಪಡಿಸಲು ರಾಜ್ಯ ಸರ್ಕಾರದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಟ್ಯಾಬ್ಲೊವನ್ನು ಪ್ರಸ್ತುತಪಡಿಸಲಾಗುತ್ತದೆ. ಇದನ್ನು ತಮಿಳುನಾಡಿನ ಪ್ರಮುಖ ನಗರಗಳಿಗೆ ಕಳುಹಿಸಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ವೆಲ್ಲೂರು ದಂಗೆಯು 1806ರಲ್ಲಿ ನಡೆದಿತ್ತು. ಆದರೆ 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಝಾನ್ಸಿ ರಾಣಿ ತನ್ನ ಕತ್ತಿಯನ್ನು ಬೀಸುವ ದಶಕಗಳ ಹಿಂದೆಯೆ ವೇಲು ನಾಚಿಯಾರ್ ಬ್ರಿಟಿಷರ ವಿರುದ್ಧ ಹೋರಾಡಿ, ಕಳೆದುಕೊಂಡ ಭೂಮಿಯನ್ನು ಮರಳಿ ವಶಪಡಿಸಿಕೊಂಡರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅದೇ ರೀತಿ ಪುಲಿತೇವನ್, ವೀರ ಪಾಂಡಿಯ ಕಟ್ಟಬೊಮ್ಮನ್, ವೀರನ್ ಸುಂದರಲಿಂಗಂ, ಮರುತು ಸಹೋದರರು, ಧೀರನ್ ಚಿನ್ನಮಲೈ ಸೇರಿದಂತೆ ಹಲವು ವೀರರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ತಮಿಳುನಾಡಿನ ಈ ನೆಲವು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...