Homeಮುಖಪುಟಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೋವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌‌ ಅವರು ರಾಜ್ಯ ಸರ್ಕಾರ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇದನ್ನು ಪ್ರದರ್ಶಿಸಲಾಗುವುದು ಎಂದು ಚೆನ್ನೈನಲ್ಲಿ ಮಂಗಳವಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಟ್ಯಾಬ್ಲೊವನ್ನು ರಾಜ್ಯದ ಪ್ರಮುಖ ಸ್ಥಳಗಳಿಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ‘ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು’ ಎಂಬ ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ದೇಶದ ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದೆ ಎಂದು ತಮಿಳುನಾಡು ಈ ಹಿಂದೆಯೆ ಘೊಷಿಸಿತ್ತು.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

‘1857ರ ದಂಗೆಗೆ ಮುನ್ನ ನಾವು ಬ್ರಿಟಿಷರ ವಿರುದ್ಧ ಹೋರಾಡಿದ್ದೇವೆ’

ಸ್ವಾತಂತ್ರ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯು 1857 ರ ದಂಗೆಗೆ ಮುಂಚಿತವಾಗಿತ್ತು ಎಂದು ಸೂಚಿಸಿರುವ ಸ್ಟಾಲಿನ್, “ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರ ಪಾತ್ರವು ಇತರ ಯಾವುದೆ ರಾಜ್ಯಗಳಿಗಿಂತ ಕಡಿಮೆಯಲ್ಲ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಲಿನ್‌ ಅವರಿಗೆ ಪತ್ರ ಬರೆದ ಕೆಲವೆ ಗಂಟೆಗಳ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ. ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಟ್ಯಾಬ್ಲೊವನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಪತ್ರದಲ್ಲಿ ಹೇಳಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ರಾಜನಾಥ್‌ ಸಿಂಗ್ ಅವರ ಪತ್ರದಲ್ಲಿ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ತಮಿಳುನಾಡಿನ ದೇಶಭಕ್ತಿಯ ಉತ್ಸಾಹ ಮತ್ತು ಭಾವನೆಗಳನ್ನು ವ್ಯಕ್ತಪಡಿಸಲು ರಾಜ್ಯ ಸರ್ಕಾರದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಟ್ಯಾಬ್ಲೊವನ್ನು ಪ್ರಸ್ತುತಪಡಿಸಲಾಗುತ್ತದೆ. ಇದನ್ನು ತಮಿಳುನಾಡಿನ ಪ್ರಮುಖ ನಗರಗಳಿಗೆ ಕಳುಹಿಸಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ವೆಲ್ಲೂರು ದಂಗೆಯು 1806ರಲ್ಲಿ ನಡೆದಿತ್ತು. ಆದರೆ 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಝಾನ್ಸಿ ರಾಣಿ ತನ್ನ ಕತ್ತಿಯನ್ನು ಬೀಸುವ ದಶಕಗಳ ಹಿಂದೆಯೆ ವೇಲು ನಾಚಿಯಾರ್ ಬ್ರಿಟಿಷರ ವಿರುದ್ಧ ಹೋರಾಡಿ, ಕಳೆದುಕೊಂಡ ಭೂಮಿಯನ್ನು ಮರಳಿ ವಶಪಡಿಸಿಕೊಂಡರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅದೇ ರೀತಿ ಪುಲಿತೇವನ್, ವೀರ ಪಾಂಡಿಯ ಕಟ್ಟಬೊಮ್ಮನ್, ವೀರನ್ ಸುಂದರಲಿಂಗಂ, ಮರುತು ಸಹೋದರರು, ಧೀರನ್ ಚಿನ್ನಮಲೈ ಸೇರಿದಂತೆ ಹಲವು ವೀರರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ತಮಿಳುನಾಡಿನ ಈ ನೆಲವು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...